ಬ್ರೇಕಿಂಗ್ ನ್ಯೂಸ್
14-04-24 03:19 pm HK NEWS ದೇಶ - ವಿದೇಶ
ನವದೆಹಲಿ, ಎ.14: ಇರಾನ್ ಕಡೆಯಿಂದ ಇಸ್ರೇಲಿನತ್ತ ವಾಯು ದಾಳಿ ಆರಂಭಗೊಂಡಿದೆ. ಶನಿವಾರ ರಾತ್ರಿ ಡ್ರೋಣ್, ಕ್ಷಿಪಣಿ ದಾಳಿಯಾಗಿದ್ದು, ಇಸ್ರೇಲ್ ಅದನ್ನು ಸಮರ್ಥವಾಗಿ ಪುಡಿಗಟ್ಟಿದೆ. ಇಸ್ರೇಲ್ ಮಿಲಿಟರಿ ಪ್ರಕಾರ, ಇರಾನ್ ಕಡೆಯಿಂದ 120 ಡ್ರೋಣ್, 30ಕ್ಕೂ ಹೆಚ್ಚು ಕ್ರೂಸ್ ಮಿಸೈಲ್ ಮತ್ತು 120ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಮಿಸೈಲ್ ದಾಳಿಯಾಗಿದೆ.
ಇದೇ ವೇಳೆ, ಅಮೆರಿಕದ ಅಧ್ಯಕ್ಷ ಜೋ ಬಿಡೆನ್ ಇಸ್ರೇಲ್ ಮೇಲಿನ ದಾಳಿಯನ್ನು ಖಂಡಿಸಿದ್ದು, ನಮ್ಮ ಬೆಂಬಲ ಇಸ್ರೇಲ್ ದೇಶಕ್ಕಿದೆ. ಇರಾನ್ ಕಡೆಯ ಮಿಸೈಲ್ ಗಳನ್ನು ಪುಡಿಗಟ್ಟುತ್ತೇವೆ ಎಂದಿದ್ದಾರೆ. ಜೋ ಬಿಡೆನ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದಾರೆ.
ಇರಾನ್ ದಾಳಿ ಬೆನ್ನಲ್ಲೇ ಇಸ್ರೇಲ್ ಮಿಲಿಟರಿ ಹೆಡ್ ಕ್ವಾರ್ಟರ್ ಟೆಲ್ ಅವೀವ್ ನಲ್ಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ತಮ್ಮ ಸಂಪುಟದ ಜೊತೆಗೆ ಸಭೆ ನಡೆಸಿದ್ದಾರೆ. ಸಭೆಯ ಬಳಿಕ ಹೇಳಿಕೆ ಬಿಡುಗಡೆ ಮಾಡಿದ್ದು, ಇಸ್ರೇಲ್ ಪಾಲಿಸುವ ತತ್ವ ಕ್ಲೀಯರ್ ಆಗಿದೆ. ನಮಗೆ ಯಾರು ಹಾನಿ ಮಾಡುತ್ತಾರೋ ಅವರ ಮೇಲೆ ನಾವು ಹಾನಿ ಮಾಡುತ್ತೇವೆ. ಯಾವುದೇ ರೀತಿಯ ಬೆದರಿಕೆಯನ್ನು ನಾವು ಎದುರಿಸುತ್ತೇವೆ. ಯಾವುದೇ ಸ್ಥಿತಿಯನ್ನು ಎದುರಿಸಲು ಸರ್ವ ಸನ್ನದ್ಧ ಇದ್ದೇವೆ ಎಂದು ಹೇಳಿದ್ದಾರೆ.
ಕ್ಷಿಪಣಿ ದಾಳಿಯನ್ನು ಎದುರಿಸಲು ನಮ್ಮ ಸೇನೆಯನ್ನು ಸಜ್ಜುಗೊಳಿಸಲಾಗಿದೆ. ಎದುರಿಸುವುದಕ್ಕೆ ಮತ್ತು ಪ್ರತಿ ದಾಳಿ ನಡೆಸುವುದಕ್ಕೆ ನಮ್ಮವರು ಸಿದ್ಧರಾಗಿದ್ದಾರೆ. ಈ ಹಂತದಲ್ಲಿ ನಮ್ಮ ಬೆಂಬಲಕ್ಕೆ ಬಂದಿರುವ ಅಮೆರಿಕ, ಯುಕೆ, ಫ್ರಾನ್ಸ್, ಜರ್ಮನಿ ಮತ್ತಿತರ ದೇಶಗಳಿಗೆ ಧನ್ಯವಾದ ಹೇಳುತ್ತೇನೆ ಎಂದಿದ್ದಾರೆ. ಇದೇ ವೇಳೆ, ಯುಕೆ ಪ್ರಧಾನಿ ರಿಷಿ ಸುನಕ್ ಇರಾನ್ ದಾಳಿಯನ್ನು ಖಂಡಿಸಿದ್ದು, ನಾವು ಇಸ್ರೇಲ್ ಜೊತೆಗಿದ್ದೇವೆ ಎಂದು ಹೇಳಿದ್ದಾರೆ. ಭಾರತ ಮಾತ್ರ ಯುದ್ಧ ಅನಗತ್ಯ, ಎರಡೂ ಕಡೆಯವರು ಶಾಂತಿ ಸ್ಥಾಪನೆಗೆ ಪ್ರಯತ್ನಿಸಬೇಕು ಎಂದು ಹೇಳಿದೆ.
Iran launched more than 200 drones and missiles at Israel in an unprecedented attack late Saturday, the Israeli army announced, in a major escalation of the long-running covert war between the regional foes. Iran's proxies and allies also carried out coordinated attacks on Israeli positions as sirens sounded in many places and AFP correspondents heard blasts in the skies above Jerusalem early Sunday.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm