ಬ್ರೇಕಿಂಗ್ ನ್ಯೂಸ್
16-04-24 07:50 pm HK News Desk ದೇಶ - ವಿದೇಶ
ನವದೆಹಲಿ, ಎ.16: ಛತ್ತೀಸ್ಗಢ ರಾಜ್ಯದ ಕಂಕೇರ್ ಜಿಲ್ಲೆಯಲ್ಲಿ 18 ಮಂದಿ ನಕ್ಸಲರನ್ನು ಬಿಎಸ್ಎಫ್ ಭದ್ರತಾ ಪಡೆಗಳು ಗುಂಡಿಟ್ಟು ಹತ್ಯೆಗೈದ ಘಟನೆ ನಡೆದಿದೆ. ಮೂವರು ಭದ್ರತಾ ಸಿಬಂದಿ ಗಾಯಗೊಂಡಿದ್ದು, ಸ್ಥಳದಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.
ಮೃತರಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ಶಂಕರ್ ರಾವ್ ಸೇರಿದ್ದಾನೆ. ಆತನ ತಲೆಗೆ ಛತ್ತೀಸ್ಗಢ ರಾಜ್ಯ ಸರಕಾರ 25 ಲಕ್ಷ ಬಹುಮಾನ ಘೋಷಿಸಿತ್ತು. ಬೈನಗೊಂಡ ಮತ್ತು ಕೊರೊನಾರ್ ಗ್ರಾಮದ ಹಪತೋಲ ಅರಣ್ಯ ಪ್ರದೇಶದಲ್ಲಿ ಮಧ್ಯಾಹ್ನ 2 ಗಂಟೆ ವೇಳೆಗೆ ನಕ್ಸಲರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಬಿಎಸ್ಎಫ್ ಯೋಧರು ಮತ್ತು ಜಿಲ್ಲಾ ಸಶಸ್ತ್ರ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿವೆ. ಬಿಎಸ್ಎಫ್ ಪಡೆಯನ್ನು ನಕ್ಸಲ್ ಪೀಡಿತ ಕಂಕೇರ್ ಜಿಲ್ಲೆಯಾದ್ಯಂತ ನಿಯೋಜನೆ ಮಾಡಲಾಗಿದೆ.

ಎನ್ಕೌಂಟರ್ ನಡೆದ ಸ್ಥಳದಲ್ಲಿ 18 ಮಂದಿ ಮಾವೋವಾದಿ ನಕ್ಸಲರ ಮೃತದೇಹಗಳನ್ನು ಪತ್ತೆ ಮಾಡಲಾಗಿದೆ. ಏಳು ಎಕೆ -47 ರೈಫಲ್ ಮತ್ತು ಮೂರು ಮೆಶಿನ್ ಗನ್ ವಶಕ್ಕೆ ಪಡೆಯಲಾಗಿದೆ. ಒಬ್ಬರು ಬಿಎಸ್ಎಫ್ ಯೋಧರ ಕಾಲಿಗೆ ಗುಂಡೇಟು ತಗಲಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ಬಿಎಸ್ಎಫ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಕಂಕೇರ್ ಜಿಲ್ಲೆಯಲ್ಲಿ ಎ.26ರಂದು ಲೋಕಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ನಕ್ಸಲರು ಅಲರ್ಟ್ ಆಗಿದ್ದರು. ಜನರಲ್ಲಿ ಭಯ ಹುಟ್ಟಿಸಿ ಚುನಾವಣೆಯಲ್ಲಿ ಸಕ್ರಿಯವಾಗದಂತೆ ಯತ್ನ ಮಾಡಿದ್ದರು. ಹೀಗಾಗಿ ರಾಜ್ಯ ಪೊಲೀಸರು ಮತ್ತು ಬಿಎಸ್ಎಫ್ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದವು. ಸ್ಥಳದಲ್ಲಿ ಭಾರೀ ಗುಂಡಿನ ಚಕಮಕಿ ನಡೆದಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆಯಿದೆ.
At least twenty-nine Naxalites were killed in an encounter with the police in Chhattisgarh's Kanker district on Tuesday, the Border Security Force said.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
19-04-26 02:58 pm
HK News Staffer
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm