ಬ್ರೇಕಿಂಗ್ ನ್ಯೂಸ್
29-04-24 12:33 pm HK News Desk ದೇಶ - ವಿದೇಶ
ನವದೆಹಲಿ, ಎ.29: ಉಷ್ಣ ಮಾರುತಕ್ಕೆ ಇಡೀ ದಕ್ಷಿಣ ಭಾರತ ನಲುಗಿದೆ. ಕರ್ನಾಟಕ, ಆಂಧ್ರಪ್ರದೇಶ, ಒಡಿಶಾ, ತಮಿಳುನಾಡು, ಕೇರಳ ರಾಜ್ಯಗಳಲ್ಲಿ ತಾಪಮಾನ ದಾಖಲೆಯ ಮಟ್ಟಕ್ಕೆ ಏರಿಕೆಯಾಗಿದ್ದು ತೀವ್ರ ಉಷ್ಣ ಮಾರುತದಿಂದಾಗಿ ಜನರು ನಲುಗುತ್ತಿದ್ದಾರೆ.
ತೀವ್ರ ಬಿಸಿಲಿನಿಂದಾಗಿ ನಾಗರಿಕರು ತೊಂದರೆಗೀಡಾಗಿದ್ದು ತೀವ್ರ ಬಳಲಿಕೆ, ನೀರಿನ ಅಭಾವ ಎದುರಿಸುತ್ತಿದ್ದಾರೆ. ಒಡಿಶಾದ ರಾಜಧಾನಿ ಭುವನೇಶ್ವರದಲ್ಲಿ ತಾಪಮಾನ 43.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು ಈ ಬಾರಿಯ ಗರಿಷ್ಠ ಉಷ್ಣತೆಯ ಎಂದು ಹೇಳಲಾಗಿದೆ. ಭುವನೇಶ್ವರದ ಜನತೆಗೆ ತೀವ್ರ ಧಗೆಯುಳ್ಳ ಬೇಸಗೆ ಹೊಸತೇನಲ್ಲ. ಆದರೆ, ಈ ವರ್ಷದ ಬೇಸಿಗೆಯ ಉಷ್ಣಾಂಶ ಹಿಂದಿನದಕ್ಕಿಂತ ತೀವ್ರವಾಗಿದೆ. ಪೂರ್ವ ಮುಂಗಾರು ಕೊರತೆಯಿಂದಾಗಿ ಈ ಬಾರಿ ಉಷ್ಣಾಂಶ ಹೆಚ್ಚಿದೆ ಎಂದು ಹೇಳಲಾಗುತ್ತಿದೆ. ಒಡಿಶಾ ರಾಜ್ಯ ಸರಕಾರ ಉಷ್ಣ ಮಾರುತದ ಬಗ್ಗೆ ಜನರಿಗೆ ಎಚ್ಚರಿಕೆಯಲ್ಲಿ ಇರುವಂತೆ ಸೂಚನೆ ನೀಡಿದೆ.
ನೆರೆಯ ಆಂಧ್ರಪ್ರದೇಶದಲ್ಲಿಯೂ ಇತ್ತೀಚಿನ ವರ್ಷಗಳಲ್ಲಿ ತೀವ್ರ ಉಷ್ಣ ಮಾರುತದ ಅನುಭವ ಆಗಿದೆ. ಕೆಲವು ಪ್ರದೇಶಗಳಲ್ಲಿ ಉಷ್ಣಾಂಶ 45 ಡಿಗ್ರಿ ಸೆಲ್ಸಿಯಸ್ ತಲುಪಿದೆ. ಸಂತ್ರಸ್ತರಿಗೆ ಆಶ್ರಯ ಹಾಗೂ ವೈದ್ಯಕೀಯ ನೆರವು ನೀಡಲು ರಾಜ್ಯ ಸರಕಾರ ವಿಶೇಷ ಉಷ್ಣ ಮಾರುತ ಪರಿಹಾರ ಕೇಂದ್ರಗಳನ್ನು ಸ್ಥಾಪಿಸಿದೆ. ಉಷ್ಣ ಮಾರುತದಿಂದ ಸುಡುತ್ತಿರುವ ಇನ್ನೊಂದು ರಾಜ್ಯ ಕರ್ನಾಟಕ. ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ 38 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ. ಇದು ಈ ವರ್ಷದಲ್ಲೇ ಅತ್ಯಧಿಕ ಉಷ್ಣತೆ. ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಸಂದರ್ಭ ವಾಹನಗಳಲ್ಲಿ ಸಿಲುಕಿಕೊಂಡ ಪ್ರಯಾಣಿಕರು ನರಕ ಯಾತನೆ ಅನುಭವಿಸುತ್ತಿದ್ದಾರೆ.
ಕೇರಳದಲ್ಲಿ ಅತ್ಯಂತ ಉಷ್ಣಾಂಶದ ಸ್ಥಳ ಪಾಲಕ್ಕಾಡ್. ಇಲ್ಲಿ ಸಾಮಾನ್ಯ ತಾಪಮಾನಕ್ಕಿಂತ 5 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಿದ್ದು 42 ಡಿಗ್ರಿ ಆಸುಪಾಸಿನಲ್ಲಿದೆ. ಪಾಲಕ್ಕಾಡ್ ಹೊರತುಪಡಿಸಿ ಕೋಝಿಕ್ಕೋಡ್, ಮಲಪ್ಪುರಂ, ತ್ರಿಶೂರು, ಕೊಲ್ಲಂ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ತೀವ್ರ ತಾಪಮಾನ ಕಂಡುಬಂದಿದೆ.
ಇನ್ನೆರಡು ದಿನಗಳಲ್ಲಿ ಒಡಿಶಾ, ಆಂಧ್ರಪ್ರದೇಶ ಹಾಗೂ ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಉಷ್ಣ ಮಾರುತ ಬೀಸುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ ತಾಪಮಾನ 45 ಡಿಗ್ರಿಗೆ ಏರಿಕೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
East and south peninsular India are reeling under a severe heatwave, with daytime temperature staying above 41 degree Celsius every day, the weather office has said.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm