ಬ್ರೇಕಿಂಗ್ ನ್ಯೂಸ್
29-04-24 12:33 pm HK News Desk ದೇಶ - ವಿದೇಶ
ನವದೆಹಲಿ, ಎ.29: ಉಷ್ಣ ಮಾರುತಕ್ಕೆ ಇಡೀ ದಕ್ಷಿಣ ಭಾರತ ನಲುಗಿದೆ. ಕರ್ನಾಟಕ, ಆಂಧ್ರಪ್ರದೇಶ, ಒಡಿಶಾ, ತಮಿಳುನಾಡು, ಕೇರಳ ರಾಜ್ಯಗಳಲ್ಲಿ ತಾಪಮಾನ ದಾಖಲೆಯ ಮಟ್ಟಕ್ಕೆ ಏರಿಕೆಯಾಗಿದ್ದು ತೀವ್ರ ಉಷ್ಣ ಮಾರುತದಿಂದಾಗಿ ಜನರು ನಲುಗುತ್ತಿದ್ದಾರೆ.
ತೀವ್ರ ಬಿಸಿಲಿನಿಂದಾಗಿ ನಾಗರಿಕರು ತೊಂದರೆಗೀಡಾಗಿದ್ದು ತೀವ್ರ ಬಳಲಿಕೆ, ನೀರಿನ ಅಭಾವ ಎದುರಿಸುತ್ತಿದ್ದಾರೆ. ಒಡಿಶಾದ ರಾಜಧಾನಿ ಭುವನೇಶ್ವರದಲ್ಲಿ ತಾಪಮಾನ 43.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು ಈ ಬಾರಿಯ ಗರಿಷ್ಠ ಉಷ್ಣತೆಯ ಎಂದು ಹೇಳಲಾಗಿದೆ. ಭುವನೇಶ್ವರದ ಜನತೆಗೆ ತೀವ್ರ ಧಗೆಯುಳ್ಳ ಬೇಸಗೆ ಹೊಸತೇನಲ್ಲ. ಆದರೆ, ಈ ವರ್ಷದ ಬೇಸಿಗೆಯ ಉಷ್ಣಾಂಶ ಹಿಂದಿನದಕ್ಕಿಂತ ತೀವ್ರವಾಗಿದೆ. ಪೂರ್ವ ಮುಂಗಾರು ಕೊರತೆಯಿಂದಾಗಿ ಈ ಬಾರಿ ಉಷ್ಣಾಂಶ ಹೆಚ್ಚಿದೆ ಎಂದು ಹೇಳಲಾಗುತ್ತಿದೆ. ಒಡಿಶಾ ರಾಜ್ಯ ಸರಕಾರ ಉಷ್ಣ ಮಾರುತದ ಬಗ್ಗೆ ಜನರಿಗೆ ಎಚ್ಚರಿಕೆಯಲ್ಲಿ ಇರುವಂತೆ ಸೂಚನೆ ನೀಡಿದೆ.
ನೆರೆಯ ಆಂಧ್ರಪ್ರದೇಶದಲ್ಲಿಯೂ ಇತ್ತೀಚಿನ ವರ್ಷಗಳಲ್ಲಿ ತೀವ್ರ ಉಷ್ಣ ಮಾರುತದ ಅನುಭವ ಆಗಿದೆ. ಕೆಲವು ಪ್ರದೇಶಗಳಲ್ಲಿ ಉಷ್ಣಾಂಶ 45 ಡಿಗ್ರಿ ಸೆಲ್ಸಿಯಸ್ ತಲುಪಿದೆ. ಸಂತ್ರಸ್ತರಿಗೆ ಆಶ್ರಯ ಹಾಗೂ ವೈದ್ಯಕೀಯ ನೆರವು ನೀಡಲು ರಾಜ್ಯ ಸರಕಾರ ವಿಶೇಷ ಉಷ್ಣ ಮಾರುತ ಪರಿಹಾರ ಕೇಂದ್ರಗಳನ್ನು ಸ್ಥಾಪಿಸಿದೆ. ಉಷ್ಣ ಮಾರುತದಿಂದ ಸುಡುತ್ತಿರುವ ಇನ್ನೊಂದು ರಾಜ್ಯ ಕರ್ನಾಟಕ. ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ 38 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ. ಇದು ಈ ವರ್ಷದಲ್ಲೇ ಅತ್ಯಧಿಕ ಉಷ್ಣತೆ. ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಸಂದರ್ಭ ವಾಹನಗಳಲ್ಲಿ ಸಿಲುಕಿಕೊಂಡ ಪ್ರಯಾಣಿಕರು ನರಕ ಯಾತನೆ ಅನುಭವಿಸುತ್ತಿದ್ದಾರೆ.
ಕೇರಳದಲ್ಲಿ ಅತ್ಯಂತ ಉಷ್ಣಾಂಶದ ಸ್ಥಳ ಪಾಲಕ್ಕಾಡ್. ಇಲ್ಲಿ ಸಾಮಾನ್ಯ ತಾಪಮಾನಕ್ಕಿಂತ 5 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಿದ್ದು 42 ಡಿಗ್ರಿ ಆಸುಪಾಸಿನಲ್ಲಿದೆ. ಪಾಲಕ್ಕಾಡ್ ಹೊರತುಪಡಿಸಿ ಕೋಝಿಕ್ಕೋಡ್, ಮಲಪ್ಪುರಂ, ತ್ರಿಶೂರು, ಕೊಲ್ಲಂ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ತೀವ್ರ ತಾಪಮಾನ ಕಂಡುಬಂದಿದೆ.
ಇನ್ನೆರಡು ದಿನಗಳಲ್ಲಿ ಒಡಿಶಾ, ಆಂಧ್ರಪ್ರದೇಶ ಹಾಗೂ ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಉಷ್ಣ ಮಾರುತ ಬೀಸುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ ತಾಪಮಾನ 45 ಡಿಗ್ರಿಗೆ ಏರಿಕೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
East and south peninsular India are reeling under a severe heatwave, with daytime temperature staying above 41 degree Celsius every day, the weather office has said.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
19-04-26 10:20 am
HK News Staffer
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm