ಬ್ರೇಕಿಂಗ್ ನ್ಯೂಸ್
30-04-24 02:52 pm HK News Desk ದೇಶ - ವಿದೇಶ
ನವದೆಹಲಿ, ಎ.30: ಭಾರತದಲ್ಲಿ ಕೋವಿಶೀಲ್ಡ್ ಹೆಸರಲ್ಲಿ ಕೋವಿಡ್ ಸೋಂಕಿಗೆ ಎದುರಾಗಿ ನೀಡಲಾಗಿದ್ದ ಆಕ್ಸ್ ಫರ್ಡ್ ಆಸ್ಟ್ರಾ ಜೆನೆಕಾ ಕಂಪನಿಯ ವ್ಯಾಕ್ಸಿನ್ ಅಪರೂಪಕ್ಕೆ ಅಡ್ಡ ಪರಿಣಾಮಗಳನ್ನು ಉಂಟು ಮಾಡುತ್ತದೆ ಎಂದು ಮಾತೃ ಕಂಪನಿ ಮೊದಲ ಬಾರಿಗೆ ಕೋರ್ಟಿನಲ್ಲಿ ಒಪ್ಪಿಕೊಂಡಿದೆ.
ಜಗತ್ತಿನ ಹಲವಾರು ರಾಷ್ಟ್ರಗಳಲ್ಲಿ ಕೊರೊನಾ ಸೋಂಕಿನ ವಿರುದ್ಧ ಈ ವ್ಯಾಕ್ಸಿನನ್ನು ವ್ಯಾಪಕವಾಗಿ ಬಳಕೆ ಮಾಡಲಾಗಿತ್ತು. ಇದರಿಂದ ಅಡ್ಡ ಪರಿಣಾಮ ಎದುರಿಸಿದ ಕುಟುಂಬಸ್ಥರು, ಸಾವಿಗೆ ತುತ್ತಾದ ಕುಟುಂಬಸ್ಥರು ಇಂಗ್ಲೆಂಡಿನಲ್ಲಿ ಆಸ್ಟ್ರಾ ಜೆನೆಕಾ ಕಂಪನಿಯ ವ್ಯಾಕ್ಸಿನ್ ವಿರುದ್ಧ ಕೋರ್ಟ್ ಹೋರಾಟ ಆರಂಭಿಸಿದ್ದರು. ಜಾಮಿ ಸ್ಕಾಟ್ ಎನ್ನುವ ವ್ಯಕ್ತಿ 2021ರಲ್ಲಿ ಈ ವ್ಯಾಕ್ಸಿನ್ ಪಡೆದ ಬಳಿಕ ಶಾಶ್ವತವಾಗಿ ಮೆದುಳಿಗೆ ಸಂಬಂಧಿಸಿದ ತೊಂದರೆಗೆ ಒಳಗಾಗಿದ್ದರು. ಆ ವ್ಯಕ್ತಿ ಸೇರಿದಂತೆ ಇಂಗ್ಲೆಂಡಿನಲ್ಲಿ ಹಲವರಿಗೆ ಥ್ರೋಂಬೋಸಿಸ್ ಎನ್ನುವ ತೊಂದರೆ ಕಾಣಿಸಿಕೊಂಡಿತ್ತು. Thrombocytopenia Syndrome (TTS) ಎನ್ನುವ ವೈಜ್ಞಾನಿಕ ಹೆಸರುಳ್ಳ ಈ ತೊಂದರೆ ಕಾಣಿಸಿಕೊಂಡರೆ ರಕ್ತ ಹೆಪ್ಪುಗಟ್ಟುವುದು ಮತ್ತು ದೇಹದಲ್ಲಿ ಪ್ಲೇಟ್ ಲೆಟ್ಸ್ ಕಣಗಳ ಕೊರತೆ ಉಂಟಾಗುವುದೆಂದು ಹೇಳಲಾಗುತ್ತದೆ.
ಇಂಗ್ಲೆಂಡಿನ ಹೈಕೋರ್ಟಿನಲ್ಲಿ ಆಸ್ಟ್ರಾ ಝೆನೆಕಾ ಕಂಪನಿಯ ಪರ ವಕೀಲರು ಸುದೀರ್ಘ ವಿಚಾರಣೆ ಬಳಿಕ ತಮ್ಮ ವ್ಯಾಕ್ಸಿನ್ ಕಾರಣದಿಂದ ಅಪರೂಪಕ್ಕೆ ಟಿಟಿಎಸ್ ಎನ್ನುವ ತೊಂದರೆ ಕಾಣಿಸಿಕೊಳ್ಳಬಹುದು ಎಂದಿರುವುದು ಜಗತ್ತಿನಾದ್ಯಂತ ಚರ್ಚೆಗೆ ಕಾರಣವಾಗಿದೆ. ಇಂಗ್ಲೆಂಡಿನಲ್ಲಿ ಭಾರೀ ವಿರೋಧ, ಕೋರ್ಟ್ ಹೋರಾಟ, ಸಾವಿಗೆ ತುತ್ತಾದ ಕುಟುಂಬಕ್ಕೆ ಪರಿಹಾರ ನೀಡಬೇಕೆಂಬ ಒತ್ತಾಯದಿಂದಾಗಿ ಆಸ್ಟ್ರಾ ಝೆನೆಕಾ ಉತ್ಪಾದಿಸಿದ ವ್ಯಾಕ್ಸಿನ್ ಬಳಕೆಗೆ ನಿಷೇಧ ಹೇರಲಾಗಿತ್ತು. ಇದೀಗ ಕಂಪನಿಯು ಲಸಿಕೆಯ ಕಾರಣದಿಂದ ಅಪರೂಪಕ್ಕೆ ಇಂತಹ ತೊಂದರೆ ಕಾಣಿಸಿಕೊಳ್ಳಬಹುದು ಎಂದು ಒಪ್ಪಿಕೊಂಡಿರುವುದು ಮೃತ ಕುಟುಂಬಸ್ಥರಿಗೆ ಮತ್ತು ಅದರಿಂದಾಗಿ ತೊಂದರೆ ಎದುರಿಸುತ್ತಿರುವ ಕುಟುಂಬಗಳಿಗೆ ಪರಿಹಾರ ನೀಡಬೇಕೆಂಬ ಒತ್ತಾಯಕ್ಕೆ ಬಲ ಬಂದಿದೆ.
A big update has emerged in connection with COVID vaccine and its rare side effects, which are being questioned by several health experts. British-Swedish multinational pharmaceutical and biotechnology company AstraZeneca has admitted in court papers that its COVID vaccine, Covishield, can cause rare side effect The Telegraph reported.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 07:57 pm
HK News Staffer
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm