ಬ್ರೇಕಿಂಗ್ ನ್ಯೂಸ್
30-04-24 05:27 pm HK News Desk ದೇಶ - ವಿದೇಶ
ಗುವಾಹಟಿ, ಏ.30: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ರಾಜ್ಯ ಮಾತ್ರವಲ್ಲದೇ ದೇಶದಲ್ಲೂ ಬಹಳ ಸದ್ದು ಮಾಡುತ್ತಿದೆ. ಈಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದು, ನಮ್ಮ ನಿಲುವು ಸ್ಪಷ್ಟವಾಗಿದೆ, ಬಿಜೆಪಿ ಯಾವತ್ತಿಗೂ ಈ ದೇಶದ ಮಾತೃ ಶಕ್ತಿ ಜೊತೆ ನಿಂತಿದೆ, ನಿಲ್ಲಲಿದೆ ಎಂದು ಹೇಳಿದ್ದಾರೆ.
ಅಸ್ಸಾಂನ ಗುವಾಹಟಿಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಕಾಂಗ್ರೆಸ್ ನಾಯಕರನ್ನು ಪ್ರಶ್ನಿಸಲು ಇಷ್ಟಪಡುತ್ತೇನೆ. ಕರ್ನಾಟಕದಲ್ಲಿ ಯಾವ ಸರ್ಕಾರ ಇರೋದು, ಅಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರವಿದೆ. ಇದುವರೆಗೂ ಅವರು ಯಾಕೆ ಕ್ರಮವನ್ನು ತೆಗೆದುಕೊಂಡಿಲ್ಲ, ಅದು ರಾಜ್ಯ ಸರ್ಕಾರದ ಕಾನೂನು ಮತ್ತು ಸುವ್ಯವಸ್ಥೆಯ ವಿಷಯವಾಗಿರುವುದರಿಂದ ನಾವು ಕ್ರಮ ತೆಗೆದುಕೊಂಡಿಲ್ಲ ಎಂದು ಹೇಳಿದರು.
)
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ರಾಜ್ಯ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು. ನಾವು ರಾಜ್ಯ ಸರ್ಕಾರದ ತನಿಖೆಯ ಪರ ಇದ್ದೇವೆ. ನಮ್ಮ ಮಿತ್ರ ಪಕ್ಷ ಜೆಡಿಎಸ್ ಕೂಡ ಪ್ರಜ್ವಲ್ ರೇವಣ್ಣ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಈಗಾಗಲೇ ಹೇಳಿದೆ. ಇವತ್ತು ಜೆಡಿಎಸ್ ಕೋರ್ ಕಮಿಟಿ ಸಭೆ ಇದ್ದು, ಅದರಲ್ಲಿ ಅವರು ಕ್ರಮವನ್ನು ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದರು. ಈ ಮೂಲಕ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಬಿಜೆಪಿ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ.
ಇನ್ನು, ಬಿಜೆಪಿ 400 ಸ್ಥಾನಗಳನ್ನು ಗೆದ್ದರೆ ಬಿಜೆಪಿ ಮೀಸಲಾತಿ ವ್ಯವಸ್ಥೆಯನ್ನು ರದ್ದು ಮಾಡುತ್ತದೆ ಎಂದು ಹೇಳಿ ಜನರನ್ನು ದಾರಿತಪ್ಪಿಸುತ್ತಿದೆ. ಈ ಅಂಶಗಳೆಲ್ಲಾ ಆಧಾರ ರಹಿತ ಹಾಗೂ ಸುಳ್ಳುಗಳಾಗಿವೆ. ಎಸ್ಸಿ, ಎಸ್ಟಿ ಮತ್ತು ಒಬಿಸಿಯ ಮೀಸಲಾತಿಗೆ ಯಾವಾಗಲೂ ಬಿಜೆಪಿ ಬೆಂಬಲವಾಗಿ ನಿಲ್ಲುತ್ತದೆ. ಜೊತೆಗೆ ಮೀಸಲಾತಿ ವ್ಯವಸ್ಥೆಯ ರಕ್ಷಕನಾಗಿ ಬಿಜೆಪಿ ಕೆಲಸ ಮಾಡುತ್ತದೆ ಎಂಬುದನ್ನು ಈ ಸಂದರ್ಭದಲ್ಲಿ ನಾನು ಸ್ಪಷ್ಟಪಡಿಸುತ್ತೇನೆ ಎಂದು ಹೇಳಿದರು.
Prajwal Revanna Hassan sex scandal, BJP will not tolerate any insult to women, says Amit Shah. Union Home Minister Amit Shah on Tuesday condemned the alleged sexual abuse of women involving Lok Sabha MP Prajwal Revanna, asserting that the BJP will not tolerate any insult to women.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
19-04-26 10:20 am
HK News Staffer
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm