ಬ್ರೇಕಿಂಗ್ ನ್ಯೂಸ್
04-05-24 03:27 pm HK News Desk ದೇಶ - ವಿದೇಶ
ನವದೆಹಲಿ, ಮೇ.4: ಸೂರತ್ ಮತ್ತು ಇಂದೋರ್ ನಂತರ ಒಡಿಶಾದ ಪುರಿ ಲೋಕಸಭೆ ಕ್ಷೇತ್ರದಲ್ಲಿಯೂ ಕಾಂಗ್ರೆಸಿಗೆ ಭಾರಿ ಶಾಕ್ ಉಂಟಾಗಿದೆ. ಪುರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುಚರಿತ ಮೊಹಾಂತಿ ಅವರು ಪಕ್ಷ ಹಣ ನೀಡಿಲ್ಲ ಎಂದು ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ.
ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಸುಚರಿತ ಮೊಹಾಂತಿ ಅವರಿಗೆ ಟಿಕೆಟ್ ನೀಡಿತ್ತು. ಆದರೆ ಸುಚರಿತ ಅವರು ಟಿಕೆಟ್ ವಾಪಸ್ ನೀಡಿದ್ದು ಸ್ಪರ್ಧೆ ಮಾಡಲ್ಲ ಎಂದಿದ್ದಾರೆ. ಇಲ್ಲಿ ಬಿಜೆಪಿಯ ಹಿರಿಯ ನಾಯಕ ಸಂಭಿತ್ ಪಾತ್ರಾ ಸ್ಪರ್ಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಹಿಂಪಡೆದಿದ್ದರಿಂದ ಬಿಜೆಪಿ ಹಾದಿ ಸುಲಭವಾಗಿದೆ.
ಇದಕ್ಕೂ ಮೊದಲು ಗುಜರಾತಿನ ಸೂರತ್ ಮತ್ತು ಮಧ್ಯಪ್ರದೇಶದ ಇಂದೋರ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ತಮ್ಮ ನಾಮಪತ್ರ ಹಿಂಪಡೆದು ಪಕ್ಷದ ನಾಯಕರಿಗೆ ಶಾಕ್ ನೀಡಿದ್ದರು. ಇಂದೋರ್ ಕಾಂಗ್ರೆಸ್ ಅಭ್ಯರ್ಥಿ ನಂತರ ಬಿಜೆಪಿ ಸೇರಿದ್ದರೆ, ಅತ್ತ ಸೂರತ್ನಲ್ಲಿ ಬೇರಾವುದೇ ಅಭ್ಯರ್ಥಿ ಇಲ್ಲದೇ ಇದ್ದುದರಿಂದ ಬಿಜೆಪಿ ಅಭ್ಯರ್ಥಿ ಜಯಶಾಲಿ ಎಂದು ಘೋಷಿಸಲಾಗಿತ್ತು.
ಸುಚರಿತ ಮೊಹಾಂತಿ ಅವರು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರಿಗೆ ಪತ್ರ ಬರೆದು, ಚುನಾವಣೆಗೆ ಸ್ಪರ್ಧಿಸಲು ಪಕ್ಷ ನೀಡಿರುವ ಮೊತ್ತವನ್ನು ತಮಗೆ ನೀಡಿಲ್ಲ ಎಂದಿದ್ದಾರೆ. ಹಣದ ಕೊರತೆಯಿಂದ ಪ್ರಚಾರಕ್ಕೆ ಬರಲು ಸಾಧ್ಯವಾಗುತ್ತಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಮೇ 25ರಂದು ಪುರಿ ಲೋಕಸಭಾ ಕ್ಷೇತ್ರಕ್ಕೆ ಮತದಾನ ನಡೆಯಲಿದ್ದು, ಅದಕ್ಕೂ ಮುನ್ನವೇ ಕಾಂಗ್ರೆಸ್ಗೆ ಹೊಡೆತ ಬಿದ್ದಿದೆ.
In a setback for Congress, its Puri Lok Sabha candidate Sucharita Mohanty has declined to contest, citing little financial support from the cash-strapped party.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm