ಬ್ರೇಕಿಂಗ್ ನ್ಯೂಸ್
06-05-24 09:31 pm HK News Desk ದೇಶ - ವಿದೇಶ
ತಿರುವನಂತಪುರಂ, ಮೇ.6: ಕನ್ಯಾಕುಮಾರಿ ಜಿಲ್ಲೆಯ ವೇಮೂರ್ ಬೀಚ್ ನಲ್ಲಿ ಈಜಲು ಹೋಗಿದ್ದ ಐವರು ಮೆಡಿಕಲ್ ವಿದ್ಯಾರ್ಥಿಗಳು ದುರಂತ ಸಾವಿಗೀಡಾಗಿದ್ದಾರೆ. ವಿದ್ಯಾರ್ಥಿಗಳು ತಮಿಳುನಾಡಿನ ತಿರುಚಿರಾಪಳ್ಳಿಯವರಾಗಿದ್ದು, ಗೆಳೆಯನ ಮದುವೆಗಾಗಿ ಕನ್ಯಾಕುಮಾರಿಗೆ ತೆರಳಿದ್ದರು.
ಸೋಮವಾರ ಮಧ್ಯಾಹ್ನ ಕನ್ಯಾಕುಮಾರಿ ಬಳಿಯ ವೇಮೂರ್ ಬೀಚ್ ನಲ್ಲಿ ಎಂಟು ಮಂದಿ ಈಜಾಟಕ್ಕಿಳಿದಿದ್ದಾಗ ದುರಂತ ಸಂಭವಿಸಿದೆ. ಮೂವರನ್ನು ರಕ್ಷಣೆ ಮಾಡಲಾಗಿದ್ದು, ಒಬ್ಬನ ಸ್ಥಿತಿ ಗಂಭೀರ ಇದೆಯೆಂದು ಮಾಹಿತಿ ಇದೆ. ಕನ್ಯಾಕುಮಾರಿ ನಿವಾಸಿ ಸರ್ವದರ್ಶಿತ್(23), ದಿಂಡಿಗಲ್ ನಿವಾಸಿ ಪ್ರವೀಣ್ ಸ್ಯಾಮ್(23), ನೆಯ್ ವೇಲಿ ನಿವಾಸಿ ಗಾಯತ್ರಿ(25), ಆಂಧ್ರಪ್ರದೇಶ ಮೂಲದ ವೆಂಕಟೇಶ್ (24), ತಂಜಾವೂರು ನಿವಾಸಿ ಚಕ್ರವರ್ತಿ (23) ಮೃತರು.
ಭಾನುವಾರ ಇದೇ ವೇಮೂರು ಬೀಚ್ ನಲ್ಲಿ ಮೂವರು ನೀರುಪಾಲಾಗಿದ್ದರು. ಸಮುದ್ರದ ಅಲೆಗಳು ರಕ್ಕಸ ಗಾತ್ರ ತಾಳಿದ್ದರಿಂದ ಜನರ ಪ್ರವೇಶಕ್ಕೆ ಸೋಮವಾರ ನಿರ್ಬಂಧ ಹೇರಲಾಗಿತ್ತು. ಹಾಗಿದ್ದರೂ, ವೈದ್ಯಕೀಯ ವಿದ್ಯಾರ್ಥಿಗಳು ನೀರಾಟಕ್ಕಿಳಿದಿದ್ದು ಸ್ಥಳೀಯ ಮೀನುಗಾರರ ಎಚ್ಚರಿಕೆ ಲೆಕ್ಕಿಸದೆ ಸಾವು ಕಂಡಿದ್ದಾರೆ. ಮೂರು ದಿನಗಳಲ್ಲಿ ಎಂಟು ಮಂದಿ ಈ ಬೀಚ್ ನಲ್ಲಿ ಸಾವು ಕಂಡಂತಾಗಿದೆ. ಐವರು ವಿದ್ಯಾರ್ಥಿಗಳು ಕೂಡ ತಿರುಚ್ಚಿಯ ಎಸ್ ಆರ್ ಎಂ ಮೆಡಿಕಲ್ ಕಾಲೇಜಿನಲ್ಲಿ ಅಂತಿಮ ವರ್ಷದ ವೈದ್ಯಕೀಯ ಕೋರ್ಸ್ ಓದುತ್ತಿದ್ದರು. ಕೆಲವೇ ವಾರಗಳಲ್ಲಿ ಮೆಡಿಕಲ್ ಮುಗಿಸಿ ಹೊರಬರುತ್ತಿದ್ದರು.
ಸೋಮವಾರ ಬೆಳಗ್ಗೆ ಅಲ್ಲಿಯೇ ಸಮೀಪದ ತಿರಪ್ಪರಪ್ಪು ಫಾಲ್ಸ್ ಗೆ ಇವರು ತೆರಳಿದ್ದರು. ಅಲ್ಲಿ ಸಾಕಷ್ಟು ನೀರಿಲ್ಲವೆಂದು ವೇಮೂರ್ ಬೀಚ್ ಗೆ ಬಂದಿದ್ದರು. ಆದರೆ ಮಧ್ಯಾಹ್ನ ಹೊತ್ತಿಗೆ ಹಠಾತ್ತಾಗಿ ಬಂದ ಬೃಹತ್ತಾಕಾರದ ಅಲೆಯೊಂದು ಇವರನ್ನು ಎಳೆದೊಯ್ದಿತ್ತು. ಕೂಡಲೇ ಮೀನುಗಾರರು ರಕ್ಷಣೆ ಮಾಡಿದ್ದಾರೆ. ಹವಾಮಾನ ಇಲಾಖೆ, ಅರಬ್ಬೀ ಸಮುದ್ರದಲ್ಲಿ ಭಾರೀ ಅಲೆಗಳು ಏಳುವ ಮುನ್ಸೂಚನೆ ನೀಡಿದ್ದು, ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ.
Five students of a private medical college in Tamil Nadu’s Trichy, who went to Nagercoil to attend a wedding, drowned in the sea off the Rajakkamangalam Lemur Beach on Monday morning.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
19-04-26 10:20 am
HK News Staffer
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm