ಬ್ರೇಕಿಂಗ್ ನ್ಯೂಸ್
07-05-24 10:26 pm HK News Desk ದೇಶ - ವಿದೇಶ
ನವದೆಹಲಿ, ಮೇ.7: ಇತ್ತೀಚೆಗೆ ದೆಹಲಿ ಏರ್ಪೋರ್ಟ್ ನಲ್ಲಿ ಬಲೆಗೆ ಬಿದ್ದಿದ್ದ ಸೈಬರ್ ವಂಚಕನಿಗೆ ಸೇರಿದ ಬ್ಯಾಂಕ್ ಲಾಕರನ್ನು ಇಡಿ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ 14 ಕೋಟಿ ಮೌಲ್ಯದ 19.5 ಕೇಜಿ ಚಿನ್ನದ ರಾಶಿ ಪತ್ತೆಯಾಗಿದೆ.
ಪಶ್ಚಿಮ ದೆಹಲಿಯ ಮೋತಿ ನಗರ್ ಪ್ರದೇಶದ ನಿವಾಸಿ ಪುನೀತ್ ಕುಮಾರ್ ಸೈಬರ್ ವಂಚಕನಾಗಿದ್ದು, ಎಪ್ರಿಲ್ 3ರಂದು ವಿದೇಶದಿಂದ ಬಂದಿದ್ದಾಗ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ಅರೆಸ್ಟ್ ಮಾಡಿದ್ದರು. ಹರ್ಯಾಣದ ಫರೀದಾಬಾದ್ ನಗರದ ಇಂಡಿಯನ್ ಬ್ಯಾಂಕ್ ಶಾಖೆಯಲ್ಲಿ ಪುನೀತ್ ಕುಮಾರ್ ತನ್ನ ತಾಯಿ ಹೆಸರಲ್ಲಿ ಲಾಕರ್ ತೆರೆದಿದ್ದು, ಅದರಲ್ಲಿ 19.5 ಕೇಜಿ ಚಿನ್ನಾಭರಣದ ರಾಶಿ ಪತ್ತೆಯಾಗಿದೆ.
ಪುನೀತ್ ಕುಮಾರ್ ಮತ್ತು ಸಹಚರರು ಸೇರಿ ವಿದೇಶಿ ಆನ್ಲೈನ್ ಗೇಮ್ ಗಳನ್ನು ಭಾರತದಲ್ಲಿ ಕಾರ್ಯಾಚರಿಸುವಂತೆ ಮಾಡುತ್ತಿದ್ದರು. ದೆಹಲಿಯ ಆಶಿಷ್ ಕಕ್ಕರ್, ಕೇಶವ್ ಸೂದ್, ಶಿವ್ ದರ್ಗಾರ್ ಸೇರಿದಂತೆ ಹಲವು ಅಪರಿಚಿತ ಸೈಬರ್ ವಂಚಕರು ಸೇರಿಕೊಂಡು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹವಾಲಾ ಜಾಲ ಮತ್ತು ಹಣಕಾಸು ವರ್ಗಾವಣೆ ದಂಧೆಯಲ್ಲಿ ತೊಡಗಿದ್ದರು. ಅಮೆರಿಕ, ಯುಎಇ, ಹಾಂಕಾಂಗ್, ಚೈನಾ, ಸಿಂಗಾಪುರ್, ಮಲೇಶ್ಯಾ, ಮಾರಿಷಸ್ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಇವರ ಜಾಲ ಕಾರ್ಯಾಚರಣೆಯಲ್ಲಿದೆ. ಪುನೀತ್ ಕುಮಾರ್ ಬಂಧನವಾದ ಒಂದು ತಿಂಗಳ ನಂತರ ಬ್ಯಾಂಕ್ ಲಾಕರುಗಳಲ್ಲಿ ಚಿನ್ನದ ರೂಪದಲ್ಲಿ ಹೂಡಿಕೆ ಮಾಡಿದ್ದಾನೆಂಬ ಮಾಹಿತಿ ಲಭಿಸಿತ್ತು. ಅದರಂತೆ, ಕಾರ್ಯಾಚರಣೆ ನಡೆಸಿದಾಗ ಚಿನ್ನದ ಬಿಸ್ಕತ್ತುಗಳಿದ್ದ ಲಾಕರ್ ಪತ್ತೆಯಾಗಿದೆ.
ನಿಷೇಧಿತ ಆನ್ಲೈನ್ ಗೇಮಿಂಗ್ ಏಪ್ ಗಳನ್ನು ಇವರು ಭಾರತದಲ್ಲಿ ಕಾನೂನು ಬಾಹಿರವಾಗಿ ಕಾರ್ಯಾಚರಿಸುವಂತೆ ಮಾಡುತ್ತಿದ್ದರು. ಅದರ ನೈಜ ಮಾಹಿತಿಯನ್ನು ಮುಚ್ಚಿಟ್ಟು ಬೇನಾಮಿ ಹೆಸರಲ್ಲಿ ಏಪ್ ಬಳಕೆಯಾಗುವಂತೆ ನೋಡಿಕೊಂಡಿದ್ದರು. ಅದಕ್ಕಾಗಿ ಸಾಕಷ್ಟು ಹಣವನ್ನು ಪೂರೈಕೆ ಮಾಡಿ, ಭಾರತೀಯರು ವೆಬ್ ಸೈಟ್ ಬಳಸುತ್ತಿದ್ದರು. ಆನ್ಲೈನ್ ವಂಚನೆಯನ್ನು ಪತ್ತೆ ಮಾಡುವುದಕ್ಕಾಗಿ ಇಡಿಯಿಂದ ವಿಶೇಷ ತನಿಖಾ ತಂಡವನ್ನು ನೇಮಕ ಮಾಡಲಾಗಿತ್ತು.
The Directorate of Enforcement (ED) on Monday claimed to have seized 19.5 kg gold valued at Rs 14.04 crore from the bank locker of an accused being maintained in Faridabad.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
02-03-26 06:51 pm
HK News Staffer
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm