ಬ್ರೇಕಿಂಗ್ ನ್ಯೂಸ್
08-05-24 10:44 am HK News Desk ದೇಶ - ವಿದೇಶ
ಹೈದರಾಬಾದ್, ಮೇ 8: ಹೈದರಾಬಾದ್ನಲ್ಲಿ ಮಂಗಳವಾರ ಸಂಜೆ ಸುರಿದ ಭಾರೀ ಮಳೆಯಿಂದ ಬಾಚುಪಲ್ಲಿ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿರುವ ಅಪಾರ್ಟ್ಮೆಂಟ್ನ ತಡೆಗೋಡೆ ಕುಸಿದು 4 ವರ್ಷದ ಮಗು ಸೇರಿದಂತೆ ಏಳು ಮಂದಿ ದುರಂತ ಸಾವಿಗೀಡಾಗಿದ್ದಾರೆ.
ಮೃತರನ್ನು ಒಡಿಶಾ ಮತ್ತು ಛತ್ತೀಸ್ಗಢ ನಿವಾಸಿಗಳೆಂದು ಗುರುತಿಸಲಾಗಿದೆ.
ಈ ಘಟನೆ ರೇಣುಕಾ ಎಲ್ಲಮ್ಮ ಕಾಲನಿಯಲ್ಲಿ ನಡೆದಿದೆ. ಅಪಾರ್ಟ್ಮೆಂಟ್ನ ಕಾಮಗಾರಿ ನಡೆಸುತ್ತಿದ್ದ ಕಾರ್ಮಿಕರು ತಾತ್ಕಾಲಿಕ ಶೆಡ್ನಲ್ಲಿ ವಾಸಿಸುತ್ತಿದ್ದರು. ಭಾರಿ ಮಳೆಗೆ ನಿರ್ಮಾಣ ಹಂತದಲ್ಲಿದ್ದ ಗೋಡೆ, ಶೆಡ್ ಮೇಲೆ ಕುಸಿದು ಅವಘಡ ಸಂಭವಿಸಿದೆ. ಇದರಿಂದ ಮಗು ಸೇರಿದಂತೆ ಶೆಡ್ನಲ್ಲಿದ್ದ ಏಳು ಮಂದಿ ಮೃತಪಟ್ಟಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ಪೊಲೀಸರು ತಕ್ಷಣ ಜಿಎಚ್ಎಂಸಿ ಮತ್ತು ಎನ್ಡಿಆರ್ಎಫ್ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಧಾವಿಸಿದರು. ಜೆಸಿಬಿಗಳ ಸಹಾಯದಿಂದ ಮೃತದೇಹಗಳನ್ನು ಹೊರ ತೆಗೆಯಲಾಯಿತು.
ಮೃತರನ್ನು ರಾಜು (25), ರಾಮ್ ಯಾದವ್ (34), ಗೀತಾ (32), ಹಿಮಾಂಶು (4), ಖುಷಿ, ತಿರುಪತಿ ರಾವ್ (20) ಮತ್ತು ಶಂಕರ್ (22) ಎಂದು ಗುರುತಿಸಲಾಗಿದೆ. ಇವರೆಲ್ಲರೂ ಒಡಿಶಾ ಮತ್ತು ಛತ್ತೀಸ್ಗಢದಿಂದ ಉದ್ಯೋಗಕ್ಕಾಗಿ ಹೈದರಾಬಾದ್ಗೆ ಬಂದಿದ್ದರು ಎಂದು ತಿಳಿದುಬಂದಿದೆ.
ರೈಸ್ ಡೆವಲಪರ್ಸ್ ನಿರ್ಮಾಣದ ಆವರಣದಲ್ಲಿ ಈ ಘಟನೆ ನಡೆದಿದೆ. ಅಪಘಾತದ ವಿಷಯ ತಿಳಿದ ಕುಕ್ಕಟಪಲ್ಲಿ ಎಸಿಪಿ ಶ್ರೀನಿವಾಸ ರಾವ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಅಂದಹಾಗೆ ಮಂಗಳವಾರ ತೆಲಂಗಾಣದ ವಿವಿಧ ಭಾಗಗಳಲ್ಲಿ ಭಾರೀ ಮಳೆ ಸುರಿದಿದ್ದು, ಕೆಲವು ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಹೈದರಾಬಾದ್ ನಗರದ ಹಲವೆಡೆ ಜಲಾವೃತಗೊಂಡು ಸಂಚಾರ ದಟ್ಟಣೆ ಉಂಟಾಗಿದೆ. ಮಳೆ ಮತ್ತು ಗುಡುಗು ಸಹಿತ ಮಳೆಯಿಂದಾಗಿ ಹಲವೆಡೆ ರಸ್ತೆಗಳಲ್ಲಿ ನೀರು ನಿಂತಿದ್ದು, ಮರಗಳು ಧರೆಗುರುಳಿವೆ. ತೆಲಂಗಾಣ ರಾಜ್ಯ ಅಭಿವೃದ್ಧಿ ಯೋಜನಾ ಸೊಸೈಟಿಯ ಪ್ರಕಾರ, ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಜಿಹೆಚ್ಎಂಸಿ) ಕೇಂದ್ರ ಕಚೇರಿಯ ಸ್ಥಳದಲ್ಲಿ ಮಂಗಳವಾರ ಸಂಜೆ 6 ಗಂಟೆಗೆ 84.5 ಮಿಮೀ ಮಳೆಯಾಗಿದೆ.
As many as seven persons, including a four-year-old child, were killed when a retaining wall at an under-construction apartment came crashing down due to heavy rain in Bachupally area here, police said on Wednesday. According to Bachupally police, the victims were migrant workers who belonged to Odisha and Chhattisgarh and the incident happened on Tuesday evening.
16-06-25 02:56 pm
HK News Desk
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
Bike Taxi, Ola, Uber, Karnataka: ರ್ಯಾಪಿಡೋ, ಉ...
13-06-25 08:47 pm
16-06-25 05:29 pm
HK News Desk
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
16-06-25 05:07 pm
Mangalore Correspondent
Mangalore, Pregnant Wife Suicide, Puthila Par...
16-06-25 12:30 pm
ನೆಲ್ಯಾಡಿ ಬಳಿ ಭೀಕರ ಅಪಘಾತ ; ನಿಲ್ಲಿಸಿದ್ದ ಲಾರಿಗೆ...
16-06-25 12:13 pm
Mangalore Fire, Deralakatte Hostel, Rain: ಜಡಿ...
15-06-25 11:04 pm
Kadri Kaibattal, Mangalore Rain, Landslide: ಕ...
15-06-25 09:50 pm
16-06-25 03:05 pm
HK News Desk
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm