ಬ್ರೇಕಿಂಗ್ ನ್ಯೂಸ್
09-05-24 11:56 am HK News Desk ದೇಶ - ವಿದೇಶ
ನವದೆಹಲಿ, ಮೇ.9: ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನಯಾನ ಸಂಸ್ಥೆಯ ಕ್ಯಾಬಿನ್ ಸಿಬಂದಿ ಅನಾರೋಗ್ಯ ನೆಪವೊಡ್ಡಿ ದಿಢೀರ್ ಆಗಿ ಸಾಮೂಹಿಕ ರಜೆ ಹಾಕಿದ್ದರಿಂದ ಬುಧವಾರ ಒಂದೇ ದಿನ 90ಕ್ಕೂ ಹೆಚ್ಚು ಏರ್ ಇಂಡಿಯಾ ವಿಮಾನಗಳ ಹಾರಾಟ ಸ್ಥಗಿತಗೊಂಡು ಪ್ರಯಾಣಿಕರು ತೀವ್ರ ಪರದಾಟ ಅನುಭವಿಸುವಂತಾಯಿತು.
ಬೆಂಗಳೂರು, ಕೊಚ್ಚಿ ಸೇರಿದಂತೆ ಹಲವು ವಿಮಾನ ನಿಲ್ದಾಣಗಳಲ್ಲಿ ಕೊನೆ ಕ್ಷಣದಲ್ಲಿ ದೇಶೀಯ ಮತ್ತು ಅಂತಾರಾಷ್ಟ್ರೀಯ ಮಾರ್ಗದ ವಿಮಾನಗಳ ಹಾರಾಟ ರದ್ದುಗೊಂಡಿದ್ದರಿಂದ ವಿಷಯ ತಿಳಿಯದೆ ಏರ್ಪೋರ್ಟ್ ತೆರಳಿದ್ದ ಪ್ರಯಾಣಿಕರು ಪೇಚಿಗೆ ಸಿಲುಕಿದ್ದು ಸಂಸ್ಥೆಯ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದರು. ಟಾಟಾ ಗ್ರೂಪ್ ಸಂಸ್ಥೆಯ ಏರ್ ಇಂಡಿಯಾ ಎಕ್ಸ್ ಪ್ರೆಸ್ ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆಯ ಭಾಗವಾಗಿ ಸಿಬಂದಿ ಸಾಮೂಹಿಕ ರಜೆ ಹಾಕಿದ್ದಾರೆ ಎನ್ನಲಾಗಿದೆ. ಬುಧವಾರ ಹಠಾತ್ತಾಗಿ ಉದ್ಯೋಗಿಗಳು ರಜೆ ಹಾಕಿದ್ದರಿಂದ ವಿಮಾನ ಯಾನಕ್ಕೆ ತೊಡಕಾಗಿದ್ದು ದೇಶಾದ್ಯಂತ ಸಾವಿರಾರು ಪ್ರಯಾಣಿಕರು ಪರದಾಟ ಅನುಭವಿಸಿದ್ದಾರೆ.
ಸೋಮವಾರ ರಾತ್ರಿ ವೇಳೆ ನೂರಕ್ಕೂ ಹೆಚ್ಚು ಕ್ಯಾಬಿನ್ ಸಿಬಂದಿ ತಮಗೆ ಹುಷಾರಿಲ್ಲ ಎಂದು ಕರ್ತವ್ಯಕ್ಕೆ ರಜೆ ಹಾಕಿದ್ದರು. ಇದಕ್ಕೆ ಪ್ರತಿಯಾಗಿ ಏರ್ ಇಂಡಿಯಾ, 25ರಷ್ಟು ಹಿರಿಯ ಸಿಬಂದಿಯನ್ನು ಕೆಲಸದಿಂದ ತೆಗೆದು ಹಾಕಲು ನಿರ್ಧರಿಸಿದೆ. ಈ ಬಗ್ಗೆ ಹೇಳಿಕೆ ನೀಡಿರುವ ಟಾಟಾ ಗ್ರೂಪ್ ಸಂಸ್ಥೆ, ಪ್ರಯಾಣಿಕರಿಗೆ ಆಗಿರುವ ಅನಾನುಕೂಲವನ್ನು ನಿವಾರಿಸಲು ಶಕ್ತಿಮೀರಿ ಪ್ರಯತ್ನಿಸುತ್ತೇವೆ. ಪ್ರಯಾಣಿಕರಿಗಾದ ತೊಂದರೆಗೆ ಕ್ಷಮೆ ಯಾಚಿಸುತ್ತೇವೆ. ಟಿಕೆಟ್ ಖರೀದಿಸಿದವರಿಗೆ ಪೂರ್ತಿ ಹಣ ಮರುಪಾವತಿ ಮಾಡುತ್ತೇವೆ. ಇಲ್ಲವೇ ಪ್ರಯಾಣದ ಸಮಯವನ್ನು ಮರು ನಿಗದಿ ಮಾಡುತ್ತೇವೆ ಎಂದು ಹೇಳಿದೆ.
ಉದ್ಯೋಗಿಗಳ ಗೈರು ಹಾಜರಿಯಿಂದ ಆಗಿರುವ ತೊಂದರೆಯಿಂದಾಗಿ ಕೆಲವು ವಿಮಾನಗಳನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗುವುದು ಎಂದು ವಿಮಾನ ಸಂಸ್ಥೆಯ ಸಿಇವೆ ಅಲೋಕ್ ಸಿಂಗ್ ತಿಳಿಸಿದ್ದಾರೆ. ನೂರಕ್ಕೂ ಹೆಚ್ಚು ಕ್ಯಾಬಿನ್ ಸಿಬಂದಿ ರಜೆ ಹಾಕಿದ್ದಾರೆ. ಇವರು ನಮ್ಮ ಸಂಸ್ಥೆಯ 2 ಸಾವಿರಕ್ಕೂ ಹೆಚ್ಚು ಕ್ಯಾಬಿನ್ ಸಿಬಂದಿಯನ್ನು ಪ್ರತಿನಿಧಿಸುವುದಿಲ್ಲ ಎಂದು ಹೇಳಿದ್ದಾರೆ.
Air India Express has sacked at least 30 cabin crew, a day after nearly 300 employees of the airline called in sick and switched off their phones, leading to large-scale flight disruptions. The number of job terminations is likely to increase. The management, sources said, has given an ultimatum to the employees to join work by 4 pm today or face action.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm