ಬ್ರೇಕಿಂಗ್ ನ್ಯೂಸ್
10-05-24 10:06 am HK News Desk ದೇಶ - ವಿದೇಶ
ತಿರುವನಂತಪುರಂ, ಮೇ. 10 : ಕೇರಳದ ಹರಿಪಾಡ್ ಸಮೀಪದ ಪಲ್ಲಿಪ್ಪಾಡ್ನಲ್ಲಿ ಕಣಗಿಲೆ (ಒಲಿಂಡರ್) ಹೂವು ಮತ್ತು ಎಲೆಯ ರಸವನ್ನು ಸೇವಿಸಿದ 24 ವರ್ಷದ ಯುವತಿ ಮೃತಪಟ್ಟ ಘಟನೆ ನಡೆದಿದೆ. ಕನಸುಗಳ ಬೆನ್ನೇರಿ ಬ್ರಿಟನ್ಗೆ ತೆರಳುತಿದ್ದ ಯುವತಿ ಏರ್ಪೋರ್ಟ್ ತೆರಳುವಾಗಲೇ ಮೃತಪಟ್ಟಿದ್ದಾರೆ.
ಪಲ್ಲಿಪ್ಪಾಡ್ನ ನೀಂದೂರ್ನ ಕೊಂಡುರೆತ್ತು ಮನೆಯ ಸುರೇಂದ್ರನ್ ಅವರ ಪುತ್ರಿ ಸೂರ್ಯ ಅವರು ಭಾನುವಾರ ನರ್ಸಿಂಗ್ ಕೆಲಸಕ್ಕೆ ಸೇರಲು ಯುಕೆಗೆ ತೆರಳುತಿದ್ದರು. ಕೆಲಸಕ್ಕಾಗಿ ವಿಮಾನ ನಿಲ್ದಾಣಕ್ಕೆ ಬಂದಾಗ ನೆಡುಂಬಶ್ಶೇರಿ ವಿಮಾನ ನಿಲ್ದಾಣದಲ್ಲಿ ಕುಸಿದು ಬಿದ್ದಿದ್ದಾರೆ. ನಂತರ ಆಕೆಯನ್ನು ಅಂಗಮಾಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ತಿರುವಲ್ಲಾ ಬಳಿಯ ಪರುಮಳದ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ, ಮೃತಪಟ್ಟಿದ್ದಾಳೆ.
ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಕಣಗಿಲೆ ಹೂವು ಮತ್ತು ಎಲೆ ತಿಂದದ್ದೇ ಸಾವಿಗೆ ಕಾರಣ ಎಂದು ತಿಳಿದುಬಂದಿದೆ.
ಮನೆಯಿಂದ ಫೋನ್ ಮೂಲಕ ಸಂಬಂಧಿಕರು ಮತ್ತು ಸ್ನೇಹಿತರಿಗೆ ತನ್ನ ಪ್ರಯಾಣದ ವಿಷಯವನ್ನು ತಿಳಿಸಿದ್ದಾಳೆ. ಮೊಬೈಲ್ ಫೋನ್ನಲ್ಲಿ ಮಾತನಾಡುತ್ತಾ ಓಡಾಡುವಾಗ, ಗೊತ್ತಿಲ್ಲದೆ ಎಲೆ ಮತ್ತು ಹೂವನ್ನು ಕಚ್ಚಿದ್ದಾರೆ. ತಕ್ಷಣವೇ ಅದನ್ನು ಉಗುಳಿದ್ದಾರೆ. ಆದರೂ, ಎಲೆ ಮತ್ತು ಹೂವಿನ ರಸದ ಕೆಲವು ಹನಿಗಳು ದೇಹಕ್ಕೆ ಸೇರಿಕೊಂಡಿದ್ದವು ಎಂದು ಮೃತ ಯುವತಿ ಸೂರ್ಯ ಸುರೇಂದ್ರನ್ ಪೋಷಕರು ಮತ್ತು ವೈದ್ಯರಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕಣಗಿಲೆ ಹೂವಿನ ವಿಷತ್ವದ ಬಗ್ಗೆ ಅಧ್ಯಯನ ನಡೆಸಿರುವ ಡಾ.ಬೆನಿಲ್ ಕೊಟ್ಟಕ್ಕಲ್, ಹೂವಿನಲ್ಲಿರುವ ಆಲ್ಕಲಾಯ್ಡ್ಗಳು ಕಾರ್ಡಿಯಾಕ್ ಗ್ಲೈಕೋಸೈಡ್ಗಳ ವರ್ಗದಲ್ಲಿ ಬರುತ್ತವೆ. "ನೆರಿಯಮ್ ಒಲಿಯಾಂಡರ್ನಲ್ಲಿರುವ ಈ ಆಲ್ಕಲಾಯ್ಡ್ಗಳು ನೇರವಾಗಿ ಹೃದಯದ ಮೇಲೆ ಪರಿಣಾಮ ಬೀರುತ್ತವೆ. ಕಾಂಡದೊಳಗೆ ಕಂಡುಬರುವ ಲ್ಯಾಟೆಕ್ಸ್ನಲ್ಲಿ ಆಲ್ಕಲಾಯ್ಡ್ಗಳ ಉಪಸ್ಥಿತಿಯು ತುಂಬಾ ಹೆಚ್ಚಾಗಿದೆ. ಹೆಚ್ಚು ಹೂ ಬಿಡಲು ಅಭಿವೃದ್ಧಿಪಡಿಸಿದ ಹೊಸ ತಳಿಯ ಕಣಗಿಲೆ ಗಿಡಗಳಲ್ಲಿ ಈ ವಿಷಾಂಶ ಹೆಚ್ಚಿರುವ ಶಂಕೆ ವ್ಯಕ್ತವಾಗಿದೆ.
24 year old girl in Kerala dies after after Consuming Arali Flower accidentally. A 24-year-old young woman named Surya Surendran passed away after unintentionally chewing the Oleander flower. It is locally known as the Arali flower in the Malayalam language.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm