ಬ್ರೇಕಿಂಗ್ ನ್ಯೂಸ್
13-05-24 07:56 pm HK News Desk ದೇಶ - ವಿದೇಶ
ವಾರಾಣಸಿ, ಮೇ 13: ಬಿಹಾರದಲ್ಲಿ ಲೋಕಸಭಾ ಚುನಾವಣಾ ಪ್ರಚಾರ ಮುಗಿಸಿ ವಾರಾಣಸಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರು ರೋಡ್ಶೋ ನಡೆಸಿದರು. ಉತ್ತರ ಪ್ರದೇಶದ ವಾರಾಣಸಿ ಕ್ಷೇತ್ರದಿಂದಲೇ ಬಿಜೆಪಿ ಅಭ್ಯರ್ಥಿಯಾಗಿ ಮೋದಿ ಮಂಗಳವಾರ ನಾಮಪತ್ರ ಸಲ್ಲಿಸಲಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮುನ್ನ ರೋಡ್ಶೋ ನಡೆಸಿರುವ ಮೋದಿಗೆ ಅಪಾರ ಜನ ಬೆಂಬಲ ವ್ಯಕ್ತವಾಗಿದೆ. ರೋಡ್ಶೋ ಆರಂಭದಲ್ಲಿ ಅವರು ಪಂಡಿತ್ ಮದನ್ ಮೋಹನ್ ಮಾಳವಿಯಾ ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದರು. ವಾರಾಣಸಿಯ ಹಾಲಿ ಸಂಸದರಾಗಿರುವ ಪ್ರಧಾನಿ ಮೋದಿ ಅವರು ಮೂರನೇ ಬಾರಿಗೆ ಇದೇ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.






ಸೋಮವಾರದ ರೋಡ್ಶೋನಲ್ಲಿ ಮೋದಿ ಅವರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಾಥ್ ಕೊಟ್ಟರು. ಮೋದಿ ಅವರು ಸಾಗುವ ಹಾದಿಯುದ್ದಕ್ಕೂ ದೊಡ್ಡ ಸಂಖ್ಯೆಯಲ್ಲಿ ಜನರು ಸೇರಿದ್ದರು. ಮೆರವಣಿಗೆಯಲ್ಲಿ ಬಿಜೆಪಿಯ ಮಹಿಳಾ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಮುಂಚೂಣಿಯಲ್ಲಿದ್ದರು. ಮರಾಠಿ, ಗುಜರಾತಿ, ತಮಿಳರು, ಬೆಂಗಾಲಿ, ಮಹೇಶ್ವರಿ, ಮಾರವಾಡಿಗಳು, ಪಂಜಾಬಿಗಳು ಸೇರಿದಂತೆ ಇತರೆ ಸಮುದಾಯದವರು ರೋಡ್ಶೋ ಉದ್ದಕ್ಕೂ 11 ವಲಯಗಳಲ್ಲಿ ಮೋದಿ ಅವರಿಗೆ ವಿಶೇಷ ಸ್ವಾಗತ ಕೋರಿದರು.

ಕಣ್ಣು ಹಾಯಿಸುವಷ್ಟು ದೂರದಲ್ಲೂ ಕೇಸರಿ ಧ್ವಜಗಳ, ಬಲೂನ್, ಬ್ಯಾನರ್ಗಳು ಕಾಣುತ್ತಿದ್ದವು. ವಾರಾಣಸಿಯ ಲಂಕಾ ಚೌಕದಿಂದ ಸುಮಾರು 6 ಕಿಲೋ ಮೀಟರ್ ದೂರದವರೆಗೂ ಮೋದಿ ರೋಡ್ಶೋ ನಡೆಸಿದರು. ವಾರಾಣಸಿಯಲ್ಲಿಯೇ ರಾತ್ರಿ ಉಳಿಯಲಿರುವ ಮೋದಿ, ಮಂಗಳವಾರ ಬೆಳಿಗ್ಗೆ ಗಂಗಾ ನದಿಯಲ್ಲಿ ಸ್ನಾನ ಮಾಡಿ, ಪೂಜೆ ಸಲ್ಲಿಸ ಬಳಿಕ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದಾರೆ.
ವಾರಾಣಸಿ ಲೋಕಸಭಾ ಕ್ಷೇತ್ರಕ್ಕೆ ಜೂನ್ 1ರಂದು ಕೊನೆಯ ಹಂತದಲ್ಲಿ ಮತದಾನ ನಿಗದಿಯಾಗಿದೆ. ಮೋದಿ ಅವರು ವಾರಾಣಸಿಯಿಂದ ಎರಡು ಬಾರಿ ಗೆಲುವು ದಾಖಲಿಸಿದ್ದು ಮೂರನೇ ಬಾರಿಯೂ ಇಲ್ಲಿಂದಲೇ ಜನಾಭಿಪ್ರಾಯಕ್ಕೆ ಮುಂದಾಗಿದ್ದಾರೆ. ಕಣದಲ್ಲಿ ಕಾಂಗ್ರೆಸ್ನಿಂದ ಉತ್ತರ ಪ್ರದೇಶ ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಜಯ್ ರಾಯ್ ಅವರನ್ನು ಕಣಕ್ಕಿಳಿಸಿದೆ.
The streets of Varanasi are set to witness a spectacle on Monday evening for a roadshow by Prime Minister Narendra Modi, who is poised to file his nomination for a third consecutive term from the parliamentary constituency, a day later.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
19-04-26 10:20 am
HK News Staffer
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm