ಬ್ರೇಕಿಂಗ್ ನ್ಯೂಸ್
18-05-24 10:18 pm HK News Desk ದೇಶ - ವಿದೇಶ
ನವದೆಹಲಿ, ಮೇ 18: ರಾಹುಲ್ ಗಾಂಧಿ ಪ್ರಧಾನ ಮಂತ್ರಿ ಸ್ಥಾನವನ್ನು ಅತ್ಯುತ್ತಮ ರೀತಿಯಲ್ಲಿ ನಿಭಾಯಿಸಲಿದ್ದಾರೆ, ಯಾಕಂದ್ರೆ ಅವರಿಗೆ ಈ ದೇಶದ ಜನರ ನಾಡಿಮಿಡಿತ ಗೊತ್ತಿದೆ. ಜನರನ್ನು ಚೆನ್ನಾಗಿ ಅರ್ಥ ಮಾಡಿಕೊಂಡಿದ್ದಾರೆ ಎಂದು ರಾಹುಲ್ ಗಾಂಧಿ ಸೋದರಿ ಪ್ರಿಯಾಂಕ ಗಾಂಧಿ ಹೇಳಿದ್ದಾರೆ.
ಇಂಡಿಯಾ ಟುಡೇಗೆ ನೀಡಿದ ಸಂದರ್ಶನದಲ್ಲಿ ಪ್ರಿಯಾಂಕ ಗಾಂಧಿಗೆ, ರಾಹುಲ್ ಪ್ರಧಾನ ಮಂತ್ರಿ ಆಗುತ್ತಾರೆಯೇ ಎಂಬ ಪ್ರಶ್ನೆ ಬಂತು. ಇದಕ್ಕುತ್ತರಿಸಿದ ಪ್ರಿಯಾಂಕ, ಯಾಕೆ ರಾಹುಲ್ ಪಿಎಂ ಆಗಬಾರದು. ಅವರೊಬ್ಬ ಅತ್ಯುತ್ತಮ ಪ್ರಧಾನ ಮಂತ್ರಿ ಆಗಲಿದ್ದಾರೆ. ಈ ದೇಶದ ಜನರ ನಾಡಿ ಮಿಡಿತವನ್ನು ರಾಹುಲ್ ಗಾಂಧಿ ಚೆನ್ನಾಗಿಯೇ ಅರಿತುಕೊಂಡಿದ್ದಾರೆ ಎಂದು ಹೇಳಿದರು.
ರಾಹುಲ್ ಗಾಂಧಿ ಹಿಂದು ಧರ್ಮದ ಬಗ್ಗೆ ತಿಳಿದುಕೊಂಡಿದ್ದಾರೆ. ಮೋದಿ ಈ ಕುರಿತು ಡಿಬೇಟ್ ಗೆ ಬಂದರೂ ಅವರಿಗೆ ಹಿಂದು ಧರ್ಮದ ಬಗ್ಗೆ ರಾಹುಲ್ ಜೊತೆಗೆ ಮಾತನಾಡಲು ಸಾಧ್ಯವಿಲ್ಲ. ರಾಹುಲ್ ಗಾಂಧಿ ಯಾರಿಗೂ ಹೆದರುವುದಿಲ್ಲ, ಸತ್ಯವನ್ನು ಹೇಳುವುದಕ್ಕೆ ಹಿಂಜರಿಕೆ ಇಲ್ಲ. ಇವರು ಸತ್ಯ ಹೇಳುತ್ತಾರೆ ಎಂಬುದನ್ನು ದೇಶ ಅರಿತುಕೊಂಡಿದೆ ಎಂದರು. ಬೇರಾವುದೇ ನಾಯಕ ಈ ಪರಿಯಾಗಿ ಟೀಕೆಯನ್ನು ಎದುರಿಸಿರಲಿಕ್ಕಿಲ್ಲ. ಬಿಜೆಪಿ ನಾಯಕರು ಸೇರಿದಂತೆ ಮೂಲೆ ಮೂಲೆಯಿಂದ ನಾನಾ ರೀತಿಯ ಟೀಕೆಯನ್ನು ಎದುರಿಸಿದ್ದಾರೆ. ಸಂಸತ್ತಿನಿಂದ ಅವರನ್ನು ಹೊರಕ್ಕಟ್ಟಿದರು, ದೇಶದ ವಿವಿಧ ಕಡೆ ಕೇಸುಗಳನ್ನು ಹಾಕಿದರು. ಆದರೆ ಅವನ್ನೆಲ್ಲ ರಾಹುಲ್ ಎದುರಿಸಿದ್ದಾರೆ. ಅವರನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪ್ರಿಯಾಂಕ ಹೇಳಿದರು.
ಈ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟ ಯಾರು ಪ್ರಧಾನಿ ಆಗಬೇಕೆಂದು ನಿರ್ಧಾರ ಮಾಡುತ್ತಾರೆ. ಯಾರು ಪ್ರಧಾನಿ ಆದ್ರೂ ಅವರಿಗೆ ನಮ್ಮ ಬೆಂಬಲ ಇದೆ ಎಂದು ಪ್ರಿಯಾಂಕ ಗಾಂಧಿ ಹೇಳಿದರು.
Congress General Secretary Priyanka Gandhi on Saturday stated that Rahul Gandhi would be a very good Prime Minister and that he has always stood for the people. She said Rahul Gandhi understands the pulse of the country, which makes him a perfect pick for PM.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
02-03-26 06:51 pm
HK News Staffer
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm