ಬ್ರೇಕಿಂಗ್ ನ್ಯೂಸ್
23-05-24 08:49 pm HK NEWS ದೇಶ - ವಿದೇಶ
ನವದೆಹಲಿ, ಮೇ 23 ಎರಡು ವರ್ಷಗಳ ಹಿಂದೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ನಿಷೇಧ ಸಂದರ್ಭದಲ್ಲಿ ಯುಎಪಿಎ ಕಾಯ್ದೆಯಡಿ ಬಂಧಿತರಾಗಿದ್ದ ಎಂಟು ಮಂದಿ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದ್ದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದು ಕೂಡಲೇ ಆರೋಪಿಗಳನ್ನು ಜೈಲಿಗೆ ತಳ್ಳುವಂತೆ ಆದೇಶ ಮಾಡಿದೆ.
ರಾಷ್ಟ್ರೀಯ ಭದ್ರತೆಯೇ ಮುಖ್ಯ ಎಂದು ಹೇಳಿರುವ ಸುಪ್ರೀಂ ಕೋರ್ಟ್, ಜಾಮೀನು ಪಡೆದ ಪಿಎಫ್ಐ ಕಾರ್ಯಕರ್ತರನ್ನು ತಕ್ಷಣವೇ ಜೈಲಿಗೆ ಕಳುಹಿಸಲು ಸೂಚಿಸಿದೆ. ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ ಮತ್ತು ನ್ಯಾಯಮೂರ್ತಿ ಪಂಕಜ್ ಮಿತ್ತಲ್ ಅವರಿದ್ದ ಪೀಠವು ಕಳೆದ ವರ್ಷ ಅಕ್ಟೋಬರ್ 19 ರಂದು ಹೈಕೋರ್ಟ್ನಿಂದ ಜಾಮೀನು ಪಡೆದ ಆರೋಪಿಗಳಿಗೆ ತಕ್ಷಣವೇ ಶರಣಾಗಿ ಜೈಲಿಗೆ ಹೋಗುವಂತೆ ಸೂಚಿಸಿದೆ.
ಭಯೋತ್ಪಾದನೆಗೆ ಸಂಬಂಧಿಸಿದ ಯಾವುದೇ ಕೃತ್ಯವನ್ನು ಲಘುವಾಗಿ ಪರಿಗಣಿಸಲಾಗದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಪಿಎಫ್ಐ ಸಂಘಟನೆಯ ಪ್ರಮುಖರಿಗೆ ಜಾಮೀನು ನೀಡಿದ ಆದೇಶವನ್ನು ಪ್ರಶ್ನಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಪೀಠವು ಈ ತೀರ್ಪು ನೀಡಿದೆ.
ಪಿಎಫ್ಐ ಸಂಘಟನೆ ನಿಷೇಧ ಸಂದರ್ಭದಲ್ಲಿ ತಮಿಳುನಾಡು ಘಟಕದಲ್ಲಿ ಪ್ರಮುಖರಾಗಿದ್ದ ಬರ್ಕತುಲ್ಲಾ, ಇದ್ರಿಸ್, ಮೊಹಮ್ಮದ್ ಅಬುತಾಹಿರ್, ಖಾಲಿದ್ ಮೊಹಮ್ಮದ್, ಸಯೀದ್ ಇಶಾಕ್, ಖ್ವಾಜಾ ಮೊಹಿದಿನ್, ಯಾಸಿರ್ ಅರಾಫತ್ ಮತ್ತು ಫಯೇಜ್ ಅಹ್ಮದ್ ಅವರಿಗೆ ನೀಡಿದ್ದ ಜಾಮೀನನ್ನು ಈಗ ರದ್ದುಪಡಿಸಲಾಗಿದೆ. 2022ರ ಸೆಪ್ಟೆಂಬರ್ ತಿಂಗಳಲ್ಲಿ ಪಿಎಫ್ಐ ನಿಷೇಧ ಬೆನ್ನಲ್ಲೇ ಇವರನ್ನು ಬಂಧಿಸಲಾಗಿತ್ತು.
ಪಿಎಫ್ಐ ಮೂಲಭೂತವಾದಿ ಇಸ್ಲಾಮಿಕ್ ಸಂಘಟನೆಯಾಗಿದ್ದು ಭಾರತದಲ್ಲಿ ಮುಸ್ಲಿಂ ಆಡಳಿತ ಸ್ಥಾಪಿಸಲು ಯೋಜನೆ ಹಾಕಿದೆ. ಷರಿಯಾ ಕಾನೂನು ಜಾರಿಗೊಳಿಸಿ ದೇಶವನ್ನು ಆಳಬೇಕೆಂಬ ಗುರಿಯನ್ನು ಪೂರೈಸಲು ಸ್ಥಾಪಿಸಲಾಗಿದೆ ಎಂದು ಎನ್ಐಎ ತನ್ನ ಅರ್ಜಿಯಲ್ಲಿ ಹೇಳಿಕೊಂಡಿತ್ತು.
The Supreme Court Wednesday faulted the “lenient view” taken by the Madras High Court in granting bail to eight members of the banned outfit Popular Front of India (PFI) and set aside its seven-month-old decision to set them free.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
02-03-26 03:10 pm
HK News Staffer
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
Ayatollah Khamenei Killed: ಇರಾನ್ ಪರಮೋಚ್ಚ ನಾಯಕ...
01-03-26 09:52 am
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm