ಬ್ರೇಕಿಂಗ್ ನ್ಯೂಸ್
23-05-24 08:49 pm HK NEWS ದೇಶ - ವಿದೇಶ
ನವದೆಹಲಿ, ಮೇ 23 ಎರಡು ವರ್ಷಗಳ ಹಿಂದೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ನಿಷೇಧ ಸಂದರ್ಭದಲ್ಲಿ ಯುಎಪಿಎ ಕಾಯ್ದೆಯಡಿ ಬಂಧಿತರಾಗಿದ್ದ ಎಂಟು ಮಂದಿ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದ್ದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದು ಕೂಡಲೇ ಆರೋಪಿಗಳನ್ನು ಜೈಲಿಗೆ ತಳ್ಳುವಂತೆ ಆದೇಶ ಮಾಡಿದೆ.
ರಾಷ್ಟ್ರೀಯ ಭದ್ರತೆಯೇ ಮುಖ್ಯ ಎಂದು ಹೇಳಿರುವ ಸುಪ್ರೀಂ ಕೋರ್ಟ್, ಜಾಮೀನು ಪಡೆದ ಪಿಎಫ್ಐ ಕಾರ್ಯಕರ್ತರನ್ನು ತಕ್ಷಣವೇ ಜೈಲಿಗೆ ಕಳುಹಿಸಲು ಸೂಚಿಸಿದೆ. ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ ಮತ್ತು ನ್ಯಾಯಮೂರ್ತಿ ಪಂಕಜ್ ಮಿತ್ತಲ್ ಅವರಿದ್ದ ಪೀಠವು ಕಳೆದ ವರ್ಷ ಅಕ್ಟೋಬರ್ 19 ರಂದು ಹೈಕೋರ್ಟ್ನಿಂದ ಜಾಮೀನು ಪಡೆದ ಆರೋಪಿಗಳಿಗೆ ತಕ್ಷಣವೇ ಶರಣಾಗಿ ಜೈಲಿಗೆ ಹೋಗುವಂತೆ ಸೂಚಿಸಿದೆ.
ಭಯೋತ್ಪಾದನೆಗೆ ಸಂಬಂಧಿಸಿದ ಯಾವುದೇ ಕೃತ್ಯವನ್ನು ಲಘುವಾಗಿ ಪರಿಗಣಿಸಲಾಗದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಪಿಎಫ್ಐ ಸಂಘಟನೆಯ ಪ್ರಮುಖರಿಗೆ ಜಾಮೀನು ನೀಡಿದ ಆದೇಶವನ್ನು ಪ್ರಶ್ನಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಪೀಠವು ಈ ತೀರ್ಪು ನೀಡಿದೆ.
ಪಿಎಫ್ಐ ಸಂಘಟನೆ ನಿಷೇಧ ಸಂದರ್ಭದಲ್ಲಿ ತಮಿಳುನಾಡು ಘಟಕದಲ್ಲಿ ಪ್ರಮುಖರಾಗಿದ್ದ ಬರ್ಕತುಲ್ಲಾ, ಇದ್ರಿಸ್, ಮೊಹಮ್ಮದ್ ಅಬುತಾಹಿರ್, ಖಾಲಿದ್ ಮೊಹಮ್ಮದ್, ಸಯೀದ್ ಇಶಾಕ್, ಖ್ವಾಜಾ ಮೊಹಿದಿನ್, ಯಾಸಿರ್ ಅರಾಫತ್ ಮತ್ತು ಫಯೇಜ್ ಅಹ್ಮದ್ ಅವರಿಗೆ ನೀಡಿದ್ದ ಜಾಮೀನನ್ನು ಈಗ ರದ್ದುಪಡಿಸಲಾಗಿದೆ. 2022ರ ಸೆಪ್ಟೆಂಬರ್ ತಿಂಗಳಲ್ಲಿ ಪಿಎಫ್ಐ ನಿಷೇಧ ಬೆನ್ನಲ್ಲೇ ಇವರನ್ನು ಬಂಧಿಸಲಾಗಿತ್ತು.
ಪಿಎಫ್ಐ ಮೂಲಭೂತವಾದಿ ಇಸ್ಲಾಮಿಕ್ ಸಂಘಟನೆಯಾಗಿದ್ದು ಭಾರತದಲ್ಲಿ ಮುಸ್ಲಿಂ ಆಡಳಿತ ಸ್ಥಾಪಿಸಲು ಯೋಜನೆ ಹಾಕಿದೆ. ಷರಿಯಾ ಕಾನೂನು ಜಾರಿಗೊಳಿಸಿ ದೇಶವನ್ನು ಆಳಬೇಕೆಂಬ ಗುರಿಯನ್ನು ಪೂರೈಸಲು ಸ್ಥಾಪಿಸಲಾಗಿದೆ ಎಂದು ಎನ್ಐಎ ತನ್ನ ಅರ್ಜಿಯಲ್ಲಿ ಹೇಳಿಕೊಂಡಿತ್ತು.
The Supreme Court Wednesday faulted the “lenient view” taken by the Madras High Court in granting bail to eight members of the banned outfit Popular Front of India (PFI) and set aside its seven-month-old decision to set them free.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm