ಬ್ರೇಕಿಂಗ್ ನ್ಯೂಸ್
23-05-24 08:49 pm HK NEWS ದೇಶ - ವಿದೇಶ
ನವದೆಹಲಿ, ಮೇ 23 ಎರಡು ವರ್ಷಗಳ ಹಿಂದೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ನಿಷೇಧ ಸಂದರ್ಭದಲ್ಲಿ ಯುಎಪಿಎ ಕಾಯ್ದೆಯಡಿ ಬಂಧಿತರಾಗಿದ್ದ ಎಂಟು ಮಂದಿ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದ್ದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದು ಕೂಡಲೇ ಆರೋಪಿಗಳನ್ನು ಜೈಲಿಗೆ ತಳ್ಳುವಂತೆ ಆದೇಶ ಮಾಡಿದೆ.
ರಾಷ್ಟ್ರೀಯ ಭದ್ರತೆಯೇ ಮುಖ್ಯ ಎಂದು ಹೇಳಿರುವ ಸುಪ್ರೀಂ ಕೋರ್ಟ್, ಜಾಮೀನು ಪಡೆದ ಪಿಎಫ್ಐ ಕಾರ್ಯಕರ್ತರನ್ನು ತಕ್ಷಣವೇ ಜೈಲಿಗೆ ಕಳುಹಿಸಲು ಸೂಚಿಸಿದೆ. ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ ಮತ್ತು ನ್ಯಾಯಮೂರ್ತಿ ಪಂಕಜ್ ಮಿತ್ತಲ್ ಅವರಿದ್ದ ಪೀಠವು ಕಳೆದ ವರ್ಷ ಅಕ್ಟೋಬರ್ 19 ರಂದು ಹೈಕೋರ್ಟ್ನಿಂದ ಜಾಮೀನು ಪಡೆದ ಆರೋಪಿಗಳಿಗೆ ತಕ್ಷಣವೇ ಶರಣಾಗಿ ಜೈಲಿಗೆ ಹೋಗುವಂತೆ ಸೂಚಿಸಿದೆ.
ಭಯೋತ್ಪಾದನೆಗೆ ಸಂಬಂಧಿಸಿದ ಯಾವುದೇ ಕೃತ್ಯವನ್ನು ಲಘುವಾಗಿ ಪರಿಗಣಿಸಲಾಗದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಪಿಎಫ್ಐ ಸಂಘಟನೆಯ ಪ್ರಮುಖರಿಗೆ ಜಾಮೀನು ನೀಡಿದ ಆದೇಶವನ್ನು ಪ್ರಶ್ನಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಪೀಠವು ಈ ತೀರ್ಪು ನೀಡಿದೆ.
ಪಿಎಫ್ಐ ಸಂಘಟನೆ ನಿಷೇಧ ಸಂದರ್ಭದಲ್ಲಿ ತಮಿಳುನಾಡು ಘಟಕದಲ್ಲಿ ಪ್ರಮುಖರಾಗಿದ್ದ ಬರ್ಕತುಲ್ಲಾ, ಇದ್ರಿಸ್, ಮೊಹಮ್ಮದ್ ಅಬುತಾಹಿರ್, ಖಾಲಿದ್ ಮೊಹಮ್ಮದ್, ಸಯೀದ್ ಇಶಾಕ್, ಖ್ವಾಜಾ ಮೊಹಿದಿನ್, ಯಾಸಿರ್ ಅರಾಫತ್ ಮತ್ತು ಫಯೇಜ್ ಅಹ್ಮದ್ ಅವರಿಗೆ ನೀಡಿದ್ದ ಜಾಮೀನನ್ನು ಈಗ ರದ್ದುಪಡಿಸಲಾಗಿದೆ. 2022ರ ಸೆಪ್ಟೆಂಬರ್ ತಿಂಗಳಲ್ಲಿ ಪಿಎಫ್ಐ ನಿಷೇಧ ಬೆನ್ನಲ್ಲೇ ಇವರನ್ನು ಬಂಧಿಸಲಾಗಿತ್ತು.
ಪಿಎಫ್ಐ ಮೂಲಭೂತವಾದಿ ಇಸ್ಲಾಮಿಕ್ ಸಂಘಟನೆಯಾಗಿದ್ದು ಭಾರತದಲ್ಲಿ ಮುಸ್ಲಿಂ ಆಡಳಿತ ಸ್ಥಾಪಿಸಲು ಯೋಜನೆ ಹಾಕಿದೆ. ಷರಿಯಾ ಕಾನೂನು ಜಾರಿಗೊಳಿಸಿ ದೇಶವನ್ನು ಆಳಬೇಕೆಂಬ ಗುರಿಯನ್ನು ಪೂರೈಸಲು ಸ್ಥಾಪಿಸಲಾಗಿದೆ ಎಂದು ಎನ್ಐಎ ತನ್ನ ಅರ್ಜಿಯಲ್ಲಿ ಹೇಳಿಕೊಂಡಿತ್ತು.
The Supreme Court Wednesday faulted the “lenient view” taken by the Madras High Court in granting bail to eight members of the banned outfit Popular Front of India (PFI) and set aside its seven-month-old decision to set them free.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm