ಬ್ರೇಕಿಂಗ್ ನ್ಯೂಸ್
24-05-24 10:43 pm HK News Desk ದೇಶ - ವಿದೇಶ
ನವದೆಹಲಿ, ಮೇ.24: ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದುಪಡಿಸಲು ಕೇಂದ್ರ ಸರಕಾರ ಮುಂದಾಗಿದೆ. ಈ ಬಗ್ಗೆ ಪ್ರಾಥಮಿಕವಾಗಿ ವಿದೇಶಾಂಗ ಸಚಿವಾಲಯ, ಪ್ರಜ್ವಲ್ ಗೆ ನಿಮ್ಮ ಪಾಸ್ ಪೋರ್ಟ್ ಯಾಕೆ ರದ್ದುಪಡಿಸಬಾರದು ಎಂದು ನೋಟೀಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.
ಕರ್ನಾಟಕದ ಸಿಎಂ ಸಿದ್ದರಾಮಯ್ಯ ಎರಡನೇ ಬಾರಿಗೆ ಮೇ 23ರಂದು ಪ್ರಜ್ವಲ್ ರೇವಣ್ಣ ಅವರ ಪಾಸ್ ಪೋರ್ಟ್ ರದ್ದುಪಡಿಸುವಂತೆ ಕೇಂದ್ರ ಸರಕಾರಕ್ಕೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ವಿದೇಶಾಂಗ ಸಚಿವಾಲಯ ಪ್ರತಿಕ್ರಿಯಿಸಿದ್ದು, ಪಾಸ್ ಪೋರ್ಟ್ ರದ್ದತಿಯ ಬಗ್ಗೆ ಕ್ರಮ ಕೈಗೊಳ್ಳುತ್ತಿರುವುದಾಗಿ ಹೇಳಿತ್ತು.



ಪ್ರಜ್ವಲ್ ಸದ್ಯ ಜರ್ಮನಿಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದರ ನಡುವೆ, ಮಾಜಿ ಪ್ರಧಾನಿ ದೇವೇಗೌಡರು ಬಹಿರಂಗ ಪತ್ರ ಬರೆದಿದ್ದು ಎಲ್ಲಿದ್ದರೂ ಮರಳಿ ಬರುವಂತೆ ಕೇಳಿಕೊಂಡಿದ್ದರು. ಇಲ್ಲದೇ ಇದ್ದರೆ, ಕುಟುಂಬದಿಂದ ದೂರ ಇರಬೇಕಾಗುತ್ತದೆ, ನಾವು ಸಂಬಂಧ ಕಡಿದುಕೊಳ್ಳುತ್ತೇವೆ. ನಮಗೆ ಸಂತ್ರಸ್ತರಿಗೆ ನ್ಯಾಯ ಸಿಗುವುದು ಮುಖ್ಯ ಎನ್ನುವ ರೀತಿಯಲ್ಲಿ ಪತ್ರ ಬರೆದಿದ್ದರು. ಇದೇ ವೇಳೆ, ವಿದೇಶಾಂಗ ಇಲಾಖೆ ಪಾಸ್ ಪೋರ್ಟ್ ರದ್ದತಿಗೆ ಮುಂದಾಗಿದ್ದು, ಇಮೇಲ್ ಮೂಲಕ ನೋಟೀಸ್ ಜಾರಿ ಮಾಡಿದೆ.
ಒಂದ್ವೇಳೆ, ಪಾಸ್ ಪೋರ್ಟ್ ರದ್ದಾದರೆ ಪ್ರಜ್ವಲ್ ವಿದೇಶದಲ್ಲಿ ಇರುವುದು ಅಕ್ರಮವಾಗುತ್ತದೆ. ಅಲ್ಲಿನ ಪ್ರಜೆ ಆಗಿಲ್ಲದೇ ಇದ್ದರೆ ಪಾಸ್ ಪೋರ್ಟ್ ಇಲ್ಲದೆ ಯಾವುದೇ ದೇಶದಲ್ಲಿ ನೆಲೆಸುವಂತಿಲ್ಲ. ಪಾಸ್ ಪೋರ್ಟ್ ರದ್ದಾದ ಕೂಡಲೇ ಅಲ್ಲಿನ ಅಧಿಕಾರಿಗಳಿಗೆ ಕ್ರಮ ಜರುಗಿಸಲು ಭಾರತದಿಂದ ಕೋರಿಕೆ ಕಳಿಸುವ ಅವಕಾಶ ಇರುತ್ತದೆ.
The Ministry of External Affairs (MEA) has served a show-cause notice to suspended JD(S) MP Prajwal Revanna asking why his diplomatic passport should not be cancelled as sought by the Karnataka government in view of allegations of sexual abuse against him, people familiar with the matter said on May 24.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm