ಬ್ರೇಕಿಂಗ್ ನ್ಯೂಸ್
04-12-20 01:11 pm Headline Karnataka News Network ದೇಶ - ವಿದೇಶ
ಲಂಡನ್, ಡಿ.4: ವಾರ್ಕಿ ಫೌಂಡೇಷನ್ ನೀಡುವ ಜಾಗತಿಕ ಶಿಕ್ಷಕ ಪ್ರಶಸ್ತಿಗೆ ಈ ಬಾರಿ ಮಹಾರಾಷ್ಟ್ರದ ಶಿಕ್ಷಕ ರಣಜಿತ್ಸಿನ್ಹಾ ದಿಸಾಲೆ ಪಾತ್ರರಾಗುವ ಮೂಲಕ 7.5 ಕೋಟಿ ರೂ.ಗಳನ್ನು ಪ್ರಶಸ್ತಿ ರೂಪದಲ್ಲಿ ಗೆದ್ದಿದ್ದಾರೆ.
ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಪರಿಟೆವಾಡಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ರಣಜಿತ್, ಹೆಣ್ಣು ಮಕ್ಕಳಿಗೆ ಕಡ್ಡಾಯ ಶಿಕ್ಷಣ ಸಿಗಬೇಕೆಂದು ಹೋರಾಟ ನಡೆಸಿದ್ದರಲ್ಲದೆ ಗ್ರಾಮೀಣ ಪ್ರದೇಶಗಳಲ್ಲೂ ಕ್ಯು ಆರ್ ಕೋಡ್ ಮೂಲಕ ಸುಲಭ ರೀತಿಯಲ್ಲಿ ಪಠ್ಯಗಳನ್ನು ಪರಿಚಯಿಸಿದ ಖ್ಯಾತಿ ಹೊಂದಿದ್ದಾರೆ.

ರಣಜಿತ್ ಸಿನ್ಹಾ ಅವರು ಕ್ಯು ಆರ್ ಕೋಡ್ ಅನ್ನು ಪರಿಚಯಿಸಿ ಅದರ ಮೂಲಕ ಬೇರೆ ಭಾಷೆಗಳಲ್ಲಿನ ಪಠ್ಯಪುಸ್ತಕಗಳಲ್ಲಿನ ಪಾಠಗಳನ್ನು ಮಾತೃಭಾಷೆಗೆ ತರ್ಜುಮೆ ಮಾಡಿದ್ದಲ್ಲದೆ, ವಿಡಿಯೋ ಪಾಠ, ಆಡಿಯೋ ಗೀತೆ, ಮಕ್ಕಳಿಗೆ ಇಷ್ಟವಾಗುವಂತಹ ಕಥೆಯನ್ನು ಇದರಲ್ಲಿ ಅಳವಡಿಸಿದ್ದರು.

ಈ ಪಠ್ಯವನ್ನು ಮಹಾರಾಷ್ಟ್ರ ಸರ್ಕಾರ ಪ್ರಾಥಮಿಕ ಶಾಲಾ ಹಂತದಲ್ಲಿ ಬಳಸಿಕೊಳ್ಳಲು ಅನುಮತಿ ನೀಡಿತ್ತು.
ಈ ಬಾರಿಯ ಜಾಗತಿಕ ಶಿಕ್ಷಕ ಪ್ರಶಸ್ತಿಯ ಅಂತಿಮ ಸುತ್ತಿನಲ್ಲಿ ವಿಶ್ವದ ಹಲವೆಡೆಯಿಂದ 10 ಮಂದಿ ಪ್ರವೇಶ ಪಡೆದಿದ್ದರು, ಆದರೆ ರಣಜಿತ್ ಸಿನ್ಹಾ 7.5 ಕೋಟಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.
ರಣಜಿತ್ ಸಿನ್ಹಾ ಅವರು ತಾವು ಗೆದ್ದ ಬಹುಮಾನದಲ್ಲಿ ಅಂತಿಮ ಸುತ್ತಿಗೆ ಬಂದಿದ್ದ ಉಳಿದ 9 ಮಂದಿಗೆ ತಲಾ 40 ಲಕ್ಷ ರೂ.ಗಳನ್ನು ನೀಡಲು ನಿರ್ಧರಿಸಿದ್ದಾರೆ. 2014ರಲ್ಲಿ ಸ್ಥಾಪನೆಕೊಂಡ ವಾರ್ಕಿ ಫೌಂಡೇಷನ್ ನೀಡುವ ಜಾಗತಿಕ ಪ್ರಶಸ್ತಿ ಗೆದ್ದ ಶಿಕ್ಷಕ ರಣಜಿತ್ಸಿನ್ಹಾ ಅವರನ್ನು ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಭವ್ಠಾಕ್ರೆ ಅಭಿನಂದಿಸಿದ್ದಾರೆ.
This year’s Global Teacher Prize has been awarded to Ranjitsinh Disale for his work helping girls, most of them from poor tribal communities, at a village school in western India.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm