Arvind Kejriwal: ಎಕ್ಸಿಟ್ ಪೋಲ್ ಭವಿಷ್ಯ ನಕಲಿ ; 21 ದಿನಗಳ ಜಾಮೀನು ಅವಧಿ ಮುಗಿಸಿ ಮರಳಿ ತಿಹಾರ್ ಜೈಲು ಸೇರಿದ ಅರವಿಂದ ಕೇಜ್ರಿವಾಲ್ 

02-06-24 07:39 pm       HK News Desk   ದೇಶ - ವಿದೇಶ

ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧಿಸಿ ಮಧ್ಯಂತರ ಜಾಮೀನು ಪೂರ್ತಿಗೊಂಡ ಹಿನ್ನೆಲೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಭಾನುವಾರ ಸಂಜೆ ತಿಹಾರ್ ಜೈಲಿಗೆ ಶರಣಾಗಿದ್ದಾರೆ.

ನವದೆಹಲಿ, ಜೂನ್.2: ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧಿಸಿ ಮಧ್ಯಂತರ ಜಾಮೀನು ಪೂರ್ತಿಗೊಂಡ ಹಿನ್ನೆಲೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಭಾನುವಾರ ಸಂಜೆ ತಿಹಾರ್ ಜೈಲಿಗೆ ಶರಣಾಗಿದ್ದಾರೆ.

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಈ ಹಿಂದೆ ಸುಪ್ರೀಂ ಕೋರ್ಟ್ ನೀಡಿದ್ದ ಮಧ್ಯಂತರ ಜಾಮೀನು ಜೂನ್ 1 ರಂದು ಕೊನೆಗೊಂಡಿತ್ತು. ಹೀಗಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ತಿಹಾರ್ ಜೈಲಿಗೆ ಬಂದು ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ. 

ಲೋಕಸಭೆ ಚುನಾವಣೆಗೆ ಪ್ರಚಾರ ನಡೆಸಲು ಕೇಜ್ರಿವಾಲ್ ಗೆ ಷರತ್ತಿನ ಜಾಮೀನು ನೀಡಲಾಗಿತ್ತು. ಶರಣಾಗುವ ಮುನ್ನ ಕೇಜ್ರಿವಾಲ್ ಅವರು ರಾಜ್ ಘಾಟ್‌ನಲ್ಲಿ ಮಹಾತ್ಮ ಗಾಂಧಿ ಸಮಾಧಿಗೆ ನಮನ ಸಲ್ಲಿಸಿದರು. ಬಳಿಕ ಕನ್ನಾಟ್ ನಲ್ಲಿರುವ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಇದಕ್ಕೂ ಮೊದಲು ಆಮ್ ಆದ್ಮಿ ಪಕ್ಷದ ಕಚೇರಿಯಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ಈ ವೇಳೆ, ''ನಾನು ಮತ್ತೆ ಜೈಲಿಗೆ ಹೋಗುತ್ತಿರುವುದು ಭ್ರಷ್ಟಾಚಾರದಲ್ಲಿ ತೊಡಗಿದ್ದಕ್ಕಾಗಿ ಅಲ್ಲ, ನಾನು ಸರ್ವಾಧಿಕಾರದ ವಿರುದ್ಧ ಧ್ವನಿ ಎತ್ತಿದ್ದರಿಂದ ಜೈಲಿಗೆ ಹೋಗುತ್ತಿದ್ದೇನೆ. ನನಗೆ ಸುಪ್ರೀಂ ಕೋರ್ಟ್ 21 ದಿನಗಳ ಅವಕಾಶ ನೀಡಿತ್ತು. ಈ 21 ದಿನಗಳು ಅವಿಸ್ಮರಣೀಯ. ನಾನು ಒಂದು ನಿಮಿಷವೂ ವ್ಯರ್ಥ ಮಾಡಲಿಲ್ಲ. ನಾನು ದೇಶವನ್ನು ಉಳಿಸಲು ಪ್ರಚಾರ ಮಾಡಿದ್ದೇನೆ. ಎಎಪಿಗಿಂತ ಮೊದಲು ನನಗೆ ನನ್ನ ದೇಶ ಮುಖ್ಯ ಎಂದು ಕೇಜ್ರಿವಾಲ್ ಹೇಳಿದರು. ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಮೂರನೇ ಬಾರಿಗೆ ಅಧಿಕಾರಿದ ಗದ್ದುಗೆ ಏರಲಿದೆ ಎಂಬ ಭವಿಷ್ಯ ನುಡಿಯುವ ಎಲ್ಲಾ ಎಕ್ಸಿಟ್ ಪೋಲ್‌ಗಳು "ನಕಲಿ" ಎಂದು ಕೇಜ್ರಿವಾಲ್ ಪ್ರತಿಪಾದಿಸಿದರು.

Delhi Chief Minister Arvind Kejriwal on Sunday surrender at the Tihar jail after 21 days interim bail granted to him by the Supreme Court to campaign for Lok Sabha elections ended.