ಬ್ರೇಕಿಂಗ್ ನ್ಯೂಸ್
06-06-24 10:23 pm HK News Desk ದೇಶ - ವಿದೇಶ
ಚಂಡೀಗಢ, ಜೂನ್ 6: ಬಾಲಿವುಡ್ ನಟಿ, ಬಿಜೆಪಿಯ ನೂತನ ಸಂಸದೆ ಕಂಗನಾ ರನೌತ್ ಮೇಲೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸಿಐಎಸ್ಎಫ್ ಮಹಿಳಾ ಸಿಬಂದಿಯೊಬ್ಬರು ಹಲ್ಲೆ ನಡೆಸಿದ್ದಾರೆ.
ಸಂಸದೆಯಾದ ಬಳಿಕ ದೆಹಲಿಗೆ ತೆರಳಲು ವಿಮಾನ ನಿಲ್ದಾಣಕ್ಕೆ ಬಂದು ತಪಾಸಣೆಗೆ ಒಳಗಾಗಿದ್ದಾಗ ಮಹಿಳಾ ಸೆಕ್ಯುರಿಟಿ ಸಿಬಂದಿ ಕುಲ್ವಿಂದರ್ ಸಿಂಗ್ ಎಂಬವರು ಮಾತಿಗೆ ಮಾತು ಬೆಳೆಸಿ ಜಟಾಪಟಿ ನಡೆಸಿದ್ದು, ಆನಂತರ ಕಂಗನಾ ಕೆನ್ನೆಗೆ ಬಾರಿಸಿದ್ದಾರೆ. ಪಂಜಾಬ್ ನಲ್ಲಿ ರೈತರ ಪ್ರತಿಭಟನೆ ವಿಚಾರದಲ್ಲಿ ಕಂಗನಾ ನೀಡಿದ್ದ ಹೇಳಿಕೆಯನ್ನು ಖಂಡಿಸಿ ಕುಲ್ವಿಂದರ್ ಕೌರ್ ಹಲ್ಲೆ ನಡೆಸಿದ್ದಾರೆ ಎನ್ನಲಾಗುತ್ತಿದೆ.
ತಕ್ಷಣವೇ ಹಲ್ಲೆಗೈದ ಸಿಬಂದಿಯನ್ನು ಅಮಾನತು ಮಾಡಿದ್ದು, ಘಟನೆ ಬಗ್ಗೆ ಎಫ್ಐಆರ್ ದಾಖಲು ಮಾಡಲಾಗಿದೆ. ಕಂಗನಾ ಈ ಬಗ್ಗೆ ವಿಡಿಯೋ ಮಾಡಿ ಟ್ವೀಟ್ ಮಾಡಿದ್ದು, ಪಂಜಾಬಿನಲ್ಲಿ ಹೆಚ್ಚುತ್ತಿರುವ ಭಯೋತ್ಪಾದನೆಯನ್ನು ಹೇಗೆ ನಿಯಂತ್ರಣ ಮಾಡೋದು ಎಂದು ಪ್ರಶ್ನೆ ಮಾಡಿದ್ದಾರೆ. ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸೆಕ್ಯುರಿಟಿ ಚೆಕ್ ಮಾಡುತ್ತಿದ್ದಾಗ ಘಟನೆ ನಡೆದಿದೆ. ಮಹಿಳಾ ಸಿಬಂದಿಯಿಂದ ತಪಾಸಣೆಗೆ ಕಾಯುತ್ತಿದ್ದಾಗಲೇ ಒಬ್ಬಾಕೆ ಬಂದು ಹಲ್ಲೆ ನಡೆಸಿದ್ದಾಳೆ. ನನ್ನನ್ನು ತುಚ್ಛವಾಗಿ ನಿಂದಿಸಿದ್ದಾಳೆ. ಪ್ರಶ್ನೆ ಮಾಡಿದ್ದಕ್ಕೆ, ನಾನು ಪಂಜಾಬಿ ರೈತರ ಪರವಾಗಿದ್ದೇನೆ ಎಂದು ಆಕೆ ತಿಳಿಸಿದ್ದಾನೆ. ನಾನು ಸ್ವಸ್ಥಳಿದ್ದೇನೆ. ಆದರೆ ಪ್ರಶ್ನೆ ಇರುವುದು, ಪಂಜಾಬಿನಲ್ಲಿ ಬೆಳೆಯುತ್ತಿರುವ ಈ ರೀತಿಯ ಆತಂಕವಾದ ಮತ್ತು ಅಲ್ಲಿನ ಜನರಲ್ಲಿ ಹಿಂಸೆಯ ಬಗ್ಗೆ ಎಂದು ಹೇಳಿದ್ದಾರೆ.
ಇದೇ ವೇಳೆ, ಮತ್ತೊಂದು ವಿಡಿಯೋ ವೈರಲ್ ಆಗಿದ್ದು ಅದರಲ್ಲಿ ಹಲ್ಲೆಗೈದ ಮಹಿಳಾ ಸಿಬಂದಿ ತನ್ನ ತಾಯಿಯೂ ಅಂದು ರೈತರ ಪ್ರತಿಭಟನೆಯಲ್ಲಿದ್ದರು, ಅದಕ್ಕಾಗಿ ಸಿಟ್ಟು ಇತ್ತು ಎಂಬ ಮಾತನ್ನು ಹೇಳುತ್ತಿದ್ದಾಳೆ. ಆಕೆಯನ್ನು ಕೂಡಲೇ ಹಿರಿಯ ಅಧಿಕಾರಿಗಳು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ. ದೆಹಲಿಗೆ ತೆರಳಿದ ಬಳಿಕ ಕಂಗನಾ ರನೌತ್ ಅವರು ಸಿಐಎಸ್ಎಫ್ ಡಿಜಿ ನೈನಾ ಸಿಂಗ್ ಮತ್ತಿತರ ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿದ್ದು, ಘಟನೆಯ ಬಗ್ಗೆ ವಿವರಿಸಿದ್ದಾರೆ. ಕಂಗನಾ ಹಿಮಾಚಲ ಪ್ರದೇಶದ ಮಂಡಿ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಕಂಡಿದ್ದಾರೆ.
Kangana Ranaut, Bollywood actor and BJP’s MP-elect from Himachal Pradesh's Mandi, on Thursday alleged that a CISF security official at Chandigarh Airport slapped her while she was travelling to Delhi.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
02-03-26 03:10 pm
HK News Staffer
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
Ayatollah Khamenei Killed: ಇರಾನ್ ಪರಮೋಚ್ಚ ನಾಯಕ...
01-03-26 09:52 am
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm