ಬ್ರೇಕಿಂಗ್ ನ್ಯೂಸ್
06-06-24 10:23 pm HK News Desk ದೇಶ - ವಿದೇಶ
ಚಂಡೀಗಢ, ಜೂನ್ 6: ಬಾಲಿವುಡ್ ನಟಿ, ಬಿಜೆಪಿಯ ನೂತನ ಸಂಸದೆ ಕಂಗನಾ ರನೌತ್ ಮೇಲೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸಿಐಎಸ್ಎಫ್ ಮಹಿಳಾ ಸಿಬಂದಿಯೊಬ್ಬರು ಹಲ್ಲೆ ನಡೆಸಿದ್ದಾರೆ.
ಸಂಸದೆಯಾದ ಬಳಿಕ ದೆಹಲಿಗೆ ತೆರಳಲು ವಿಮಾನ ನಿಲ್ದಾಣಕ್ಕೆ ಬಂದು ತಪಾಸಣೆಗೆ ಒಳಗಾಗಿದ್ದಾಗ ಮಹಿಳಾ ಸೆಕ್ಯುರಿಟಿ ಸಿಬಂದಿ ಕುಲ್ವಿಂದರ್ ಸಿಂಗ್ ಎಂಬವರು ಮಾತಿಗೆ ಮಾತು ಬೆಳೆಸಿ ಜಟಾಪಟಿ ನಡೆಸಿದ್ದು, ಆನಂತರ ಕಂಗನಾ ಕೆನ್ನೆಗೆ ಬಾರಿಸಿದ್ದಾರೆ. ಪಂಜಾಬ್ ನಲ್ಲಿ ರೈತರ ಪ್ರತಿಭಟನೆ ವಿಚಾರದಲ್ಲಿ ಕಂಗನಾ ನೀಡಿದ್ದ ಹೇಳಿಕೆಯನ್ನು ಖಂಡಿಸಿ ಕುಲ್ವಿಂದರ್ ಕೌರ್ ಹಲ್ಲೆ ನಡೆಸಿದ್ದಾರೆ ಎನ್ನಲಾಗುತ್ತಿದೆ.
ತಕ್ಷಣವೇ ಹಲ್ಲೆಗೈದ ಸಿಬಂದಿಯನ್ನು ಅಮಾನತು ಮಾಡಿದ್ದು, ಘಟನೆ ಬಗ್ಗೆ ಎಫ್ಐಆರ್ ದಾಖಲು ಮಾಡಲಾಗಿದೆ. ಕಂಗನಾ ಈ ಬಗ್ಗೆ ವಿಡಿಯೋ ಮಾಡಿ ಟ್ವೀಟ್ ಮಾಡಿದ್ದು, ಪಂಜಾಬಿನಲ್ಲಿ ಹೆಚ್ಚುತ್ತಿರುವ ಭಯೋತ್ಪಾದನೆಯನ್ನು ಹೇಗೆ ನಿಯಂತ್ರಣ ಮಾಡೋದು ಎಂದು ಪ್ರಶ್ನೆ ಮಾಡಿದ್ದಾರೆ. ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸೆಕ್ಯುರಿಟಿ ಚೆಕ್ ಮಾಡುತ್ತಿದ್ದಾಗ ಘಟನೆ ನಡೆದಿದೆ. ಮಹಿಳಾ ಸಿಬಂದಿಯಿಂದ ತಪಾಸಣೆಗೆ ಕಾಯುತ್ತಿದ್ದಾಗಲೇ ಒಬ್ಬಾಕೆ ಬಂದು ಹಲ್ಲೆ ನಡೆಸಿದ್ದಾಳೆ. ನನ್ನನ್ನು ತುಚ್ಛವಾಗಿ ನಿಂದಿಸಿದ್ದಾಳೆ. ಪ್ರಶ್ನೆ ಮಾಡಿದ್ದಕ್ಕೆ, ನಾನು ಪಂಜಾಬಿ ರೈತರ ಪರವಾಗಿದ್ದೇನೆ ಎಂದು ಆಕೆ ತಿಳಿಸಿದ್ದಾನೆ. ನಾನು ಸ್ವಸ್ಥಳಿದ್ದೇನೆ. ಆದರೆ ಪ್ರಶ್ನೆ ಇರುವುದು, ಪಂಜಾಬಿನಲ್ಲಿ ಬೆಳೆಯುತ್ತಿರುವ ಈ ರೀತಿಯ ಆತಂಕವಾದ ಮತ್ತು ಅಲ್ಲಿನ ಜನರಲ್ಲಿ ಹಿಂಸೆಯ ಬಗ್ಗೆ ಎಂದು ಹೇಳಿದ್ದಾರೆ.
ಇದೇ ವೇಳೆ, ಮತ್ತೊಂದು ವಿಡಿಯೋ ವೈರಲ್ ಆಗಿದ್ದು ಅದರಲ್ಲಿ ಹಲ್ಲೆಗೈದ ಮಹಿಳಾ ಸಿಬಂದಿ ತನ್ನ ತಾಯಿಯೂ ಅಂದು ರೈತರ ಪ್ರತಿಭಟನೆಯಲ್ಲಿದ್ದರು, ಅದಕ್ಕಾಗಿ ಸಿಟ್ಟು ಇತ್ತು ಎಂಬ ಮಾತನ್ನು ಹೇಳುತ್ತಿದ್ದಾಳೆ. ಆಕೆಯನ್ನು ಕೂಡಲೇ ಹಿರಿಯ ಅಧಿಕಾರಿಗಳು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ. ದೆಹಲಿಗೆ ತೆರಳಿದ ಬಳಿಕ ಕಂಗನಾ ರನೌತ್ ಅವರು ಸಿಐಎಸ್ಎಫ್ ಡಿಜಿ ನೈನಾ ಸಿಂಗ್ ಮತ್ತಿತರ ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿದ್ದು, ಘಟನೆಯ ಬಗ್ಗೆ ವಿವರಿಸಿದ್ದಾರೆ. ಕಂಗನಾ ಹಿಮಾಚಲ ಪ್ರದೇಶದ ಮಂಡಿ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಕಂಡಿದ್ದಾರೆ.
Kangana Ranaut, Bollywood actor and BJP’s MP-elect from Himachal Pradesh's Mandi, on Thursday alleged that a CISF security official at Chandigarh Airport slapped her while she was travelling to Delhi.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
18-04-26 10:37 pm
HK News Staffer
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm