ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿ ; ಬಸ್ಸಿಗೆ ಬೆಂಕಿ ಹಚ್ಚಲು ಯತ್ನ, ಪ್ರಪಾತಕ್ಕೆ ಉರುಳಿದ ಬಸ್, ಹತ್ತು ಮಂದಿ ಸಾವು 

09-06-24 10:58 pm       HK News Desk   ದೇಶ - ವಿದೇಶ

ಇತ್ತ ಮೋದಿ ಸರಕಾರದ ಪಟ್ಟಾಭಿಷೇಕ ಆಗುತ್ತಿದ್ದಂತೆ ಜಮ್ಮು ಕಾಶ್ಮೀರದಲ್ಲಿ ಮತ್ತೊಂದು ಉಗ್ರರ ದಾಳಿ ನಡೆದಿದೆ. ಯಾತ್ರಿಗಳನ್ನು ಒಯ್ಯುತ್ತಿದ್ದ ಬಸ್ಸಿಗೆ ಉಗ್ರರು ಬೆಂಕಿ ಹಚ್ಚಿದ್ದು, ಹತ್ತು ಮಂದಿ ಸಾವನ್ನಪ್ಪಿದ್ದಾರೆ. 33ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಶ್ರೀನಗರ, ಜೂನ್ 9: ಇತ್ತ ಮೋದಿ ಸರಕಾರದ ಪಟ್ಟಾಭಿಷೇಕ ಆಗುತ್ತಿದ್ದಂತೆ ಜಮ್ಮು ಕಾಶ್ಮೀರದಲ್ಲಿ ಮತ್ತೊಂದು ಉಗ್ರರ ದಾಳಿ ನಡೆದಿದೆ. ಯಾತ್ರಿಗಳನ್ನು ಒಯ್ಯುತ್ತಿದ್ದ ಬಸ್ಸಿಗೆ ಉಗ್ರರು ಬೆಂಕಿ ಹಚ್ಚಿದ್ದು, ಹತ್ತು ಮಂದಿ ಸಾವನ್ನಪ್ಪಿದ್ದಾರೆ. 33ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಜಮ್ಮು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಶಿವ್ ಖೋರಿ ದೇವಸ್ಥಾನಕ್ಕೆ ತೆರಳಿ ಯಾತ್ರಿಗಳು ರಿಯಾಸಿಯಿಂದ ಕತ್ರಾಗೆ ತೆರಳುತ್ತಿದ್ದಾಗ ಬಸ್ ಪ್ರಪಾತಕ್ಕೆ ಉರುಳಿ ಬಿದ್ದು ದುರ್ಘಟನೆ ಸಂಭವಿಸಿದೆ.

ಬಸ್ ಪರ್ವತ ಮಾರ್ಗದಲ್ಲಿ ಸಾಗುತ್ತಿದ್ದಾಗ ಬಸ್ಸಿಗೆ ಉಗ್ರರು ಬೆಂಕಿ ಹಚ್ಚಲು ಯತ್ನಿಸಿದ್ದಾರೆ. ಈ ವೇಳೆ, ಚಾಲಕ ಬಸ್ಸಿನ ನಿಯಂತ್ರಣ ತಪ್ಪಿದ್ದು, ಬಸ್ ನೇರವಾಗಿ ಪ್ರಪಾತಕ್ಕೆ ಬಿದ್ದಿದೆ. ಬಸ್ಸಿನಲ್ಲಿದ್ದ ಹತ್ತು ಮಂದಿ ಸಾವು ಕಂಡಿದ್ದಾರೆ. 33 ಮಂದಿ ಗಾಯಗೊಂಡಿದ್ದಾರೆ. ಮೃತರು ಸ್ಥಳೀಯರು ಅಲ್ಲ, ಬೇರೆ ಬೇರೆ ಕಡೆಯ ಪ್ರವಾಸಿಗರು ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Suspected militants in Indian-controlled Kashmir's Jammu province fired at a bus carrying Hindu pilgrims on Sunday and at least nine were killed after the vehicle fell into a deep gorge, officials said. The bus was carrying pilgrims to the base camp of the famed Hindu temple Mata Vaishno Devi when it came under attack in the region's Reasi district, senior administrative officer Vishesh Mahajan said.