ಬ್ರೇಕಿಂಗ್ ನ್ಯೂಸ್
10-06-24 10:08 pm HK News Desk ದೇಶ - ವಿದೇಶ
ಶ್ರೀನಗರ, ಜೂ 10: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿಭಾನುವಾರ ಬಸ್ವೊಂದು ಪ್ರಪಾತಕ್ಕೆ ಉರುಳಿದ್ದು, ದುರಂತದಲ್ಲಿ10 ಮಂದಿ ಮೃತಪಟ್ಟು, 33 ಮಂದಿ ಗಾಯಗೊಂಡಿದ್ದಾರೆ.
ಶಿವಖೋಡ ದೇವಸ್ಥಾನದಿಂದ ಕಾತ್ರಾಗೆ ಮರಳುತ್ತಿದ್ದ ಪ್ರವಾಸಿಗರಿದ್ದ ಬಸ್ ಗುರಿಯಾಗಿಸಿ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ದಾಳಿಗೆ ಗಾಬರಿಗೊಂಡ ಬಸ್ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆಯಿಂದ ಪಕ್ಕದ ಪ್ರಪಾತಕ್ಕೆ ಉರುಳಿದೆ.
ತೆರ್ಯಾಥ್ ಗ್ರಾಮದ ಬಳಿ ಘಟನೆ ಜರುಗಿದೆ. ಪ್ರಪಾತದಲ್ಲಿದ್ದ ಬಸ್ನಿಂದ 30 ಮಂದಿಯನ್ನು ಕಾರ್ಯಾಚರಣೆ ನಡೆಸಿ ಪೊಲೀಸರು ಮತ್ತು ಅರೆಸೇನಾ ಪಡೆಗಳು ರಕ್ಷಿಸಿದ್ದಾರೆ.
ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಮೀಪದ ಅರಣ್ಯದಿಂದ ಏಕಾಏಕಿ ರಸ್ತೆಗೆ ಧುಮುಕಿದ ಉಗ್ರರು ಹಲವು ಸುತ್ತಿನ ಗುಂಡಿನ ದಾಳಿಯನ್ನು ಬಸ್ ಮೇಲೆ ನಡೆಸಿದ್ದಾರೆ. ದಾಳಿಯ ಸ್ಥಳದಲ್ಲಿಅಪಾರ ಸಂಖ್ಯೆಯಲ್ಲಿ ಗುಂಡುಗಳು ಪತ್ತೆಯಾಗಿವೆ,'' ಎಂದು ಹಿರಿಯ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಶಂಕಿತ ಉಗ್ರರು ರಜೌರಿ, ಪೂಂಛ್ ಮತ್ತು ರಿಯಾಸಿಯ ಅರಣ್ಯ ಪ್ರದೇಶಗಳಲ್ಲಿಅಡಗಿರುವ ಸಾಧ್ಯತೆ ಇದ್ದು, ಶೋಧ ಕಾರ್ಯಾಚರಣೆ ತೀವ್ರಗೊಳಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಈ ಘಟನೆಯಲ್ಲಿ 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಪ್ರಯಾಣಿಕರ ಗುರುತುಗಳನ್ನು ಇನ್ನೂ ದೃಢಪಡಿಸಲಾಗಿಲ್ಲ ಎಂದು ತಿಳಿದ್ದಾರೆ.
ದಾಳಿಯ ಹೊಣೆಯನ್ನು ಪಾಕಿಸ್ತಾನ ಬೆಂಬಲಿತ 'ದಿ ರೆಸಿಸ್ಟೆನ್ಸ್ ಫ್ರಂಟ್' ವಹಿಸಿಕೊಂಡಿದೆ.
ಪ್ರವಾಸಿಗರು ಮತ್ತು ಸ್ಥಳೀಯರಲ್ಲದವರ' ಮೇಲೆ ಇಂತಹ ದಾಳಿಗಳನ್ನು ಮುಂದವರಿಸುತ್ತೇವೆ ಎಂಬುದಾಗಿಯೂ ಉಗ್ರರು ಹೇಳಿಕೊಂಡಿದ್ದಾರೆ. ಅಲ್ಲದೆ ರಿಯಾಸಿ ದಾಳಿಯನ್ನು 'ಹೊಸ ಆರಂಭಕ್ಕೆ ಮುನ್ನುಡಿ' ಎಂದು ಕರೆದಿದೆ.
ಭಯೋತ್ಪಾದಕರನ್ನು ಪತ್ತೆಹಚ್ಚಲು ಉಗ್ರ ನಿಗ್ರ ದಳದ ಅಧಿಕಾರಿಗಳು ಬೃಹತ್ ಶೋಧ ಕಾರ್ಯಾಚರಣೆ ಪ್ರಾರಂಭಿಸಿದೆ. ಈ ಪ್ರದೇಶದಲ್ಲಿ ಭದ್ರತೆಯನ್ನು ಬಲಪಡಿಸಲಾಗಿದ್ದು, ದಾಳಿಯ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ವಹಿಸಲಾಗಿದೆ ಎಂದು ಗೃಹ ಸಚಿವಾಲಯದ ಮೂಲಗಳು ತಿಳಿಸಿವೆ.
The deadly terror attack in Jammu and Kashmir’s Reasi district has shocked India. At least nine people died and 33 were injured after terrorists fired upon a bus carrying Hindu pilgrims, resulting in the vehicle plunging into a deep gorge on Sunday (9 June).
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm