ಬ್ರೇಕಿಂಗ್ ನ್ಯೂಸ್
19-06-24 11:19 am HK News Desk ದೇಶ - ವಿದೇಶ
ನವದೆಹಲಿ, ಜೂನ್.19: ಮುಸ್ಲಿಮರ ಪವಿತ್ರ ಸ್ಥಳ ಮೆಕ್ಕಾದಲ್ಲಿ ಅತಿ ತಾಪಮಾನದಿಂದಾಗಿ 550ಕ್ಕೂ ಹೆಚ್ಚು ಮಂದಿ ಹಜ್ ಯಾತ್ರಿಗಳು ಸಾವನ್ನಪ್ಪಿದ್ದಾರೆ ಎಂದು ಅಲ್ಲಿನ ಅಧಿಕಾರಿಗಳು ಮಾಧ್ಯಮ ಸಂಸ್ಥೆಗೆ ತಿಳಿಸಿದ್ದಾರೆ. ಈ ಪೈಕಿ ಬಹುಪಾಲು ಅಂದರೆ, 323 ಮಂದಿ ಈಜಿಪ್ಟ್ ದೇಶದ ಪ್ರಜೆಗಳು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
60 ಮಂದಿ ಜೋರ್ಡಾನ್ ಪ್ರಜೆಗಳು ಸಾವಿಗೀಡಾಗಿದ್ದಾರೆ. ಇಂಡೋನೇಶ್ಯಾ, ಇರಾನ್, ಸೆನೆಗಲ್ ದೇಶದ ಪ್ರಜೆಗಳು ಹೆಚ್ಚಾಗಿ ಸಾವು ಕಂಡಿದ್ದಾರೆ. ಹಗಲಿನ ವೇಳೆಯಲ್ಲಿ ಮೆಕ್ಕಾದಲ್ಲಿ 51.8 ಡಿಗ್ರಿ ಸೆಲ್ಶಿಯಸ್ ಉಷ್ಣತೆ ಇರುವುದಾಗಿ ಸೌದಿ ರಾಷ್ಟ್ರೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಪ್ರತಿ ಹತ್ತು ವರ್ಷದಲ್ಲಿ 0.4 ಡಿಗ್ರಿ ಸೆಲ್ಶಿಯಸ್ ಉಷ್ಣತೆ ಹೆಚ್ಚುತ್ತಿದ್ದು, ಇದರಿಂದಾಗಿ ಮೆಕ್ಕಾದಲ್ಲಿ ಹಗಲಿನ ವೇಳೆಯಲ್ಲಿ ಜನರು ಕಾಲಿಡದ ಸ್ಥಿತಿಯಾಗಿದೆ ಎಂದು ಅಲ್ಲಿನ ಆಡಳಿತ ಮಾಹಿತಿ ಉಲ್ಲೇಖಿಸಿ ಇಂಡಿಯಾ ಟುಡೇ ವರದಿ ಮಾಡಿದೆ.
ಸೌದಿ ಆಡಳಿತದ ಮಾಹಿತಿ ಪ್ರಕಾರ, 2 ಸಾವಿರಕ್ಕೂ ಹೆಚ್ಚು ಮಂದಿ ಅಸ್ವಸ್ಥಕ್ಕೀಡಾಗಿದ್ದು, ಅವರಿಗೆ ಆರೈಕೆ ಮಾಡಲಾಗಿದೆ. ಆದರೆ ಎಷ್ಟು ಮಂದಿ ಸಾವಿಗೀಡಾಗಿದ್ದಾರೆ ಎನ್ನುವ ಬಗ್ಗೆ ಅಧಿಕೃತ ಮಾಹಿತಿ ನೀಡಿಲ್ಲ. ಇದೇ ವೇಳೆ, ಹಜ್ ಯಾತ್ರಿಗಳು ಕೊಡೆ ಹಿಡಿದು ಬಿಸಿಲಿನಿಂದ ದೂರ ಇರಬೇಕು, ಸಾಕಷ್ಟು ನೀರು ಕುಡಿಯಿರಿ, ಬಿಸಿಲಿನ ನೇರ ಹೊಡೆತದಿಂದ ದೂರವಿರಿ ಎಂದು ಸಲಹೆ ಮಾಡಿದೆ. ಈ ಬಾರಿ ಒಟ್ಟು 1.8 ಮಿಲಿಯನ್ ಹಜ್ ಯಾತ್ರಿಗಳು ಮೆಕ್ಕಾ ಯಾತ್ರೆ ಕೈಗೊಂಡಿದ್ದಾರೆ. ಕಳೆದ ವರ್ಷ 1.6 ಮಿಲಿಯನ್ ಜನರು ಹಜ್ ಯಾತ್ರೆ ಮಾಡಿದ್ದರು. ಮುಸ್ಲಿಮರಿಗೆ ಐದು ಕಡ್ಡಾಯ ನಿಮಯಗಳಲ್ಲಿ ಜೀವನದಲ್ಲಿ ಒಂದು ಬಾರಿಯಾದರೂ ಹಜ್ ಯಾತ್ರೆ ಕೈಗೊಳ್ಳಬೇಕು ಎಂಬುದೂ ಒಂದಾಗಿದೆ.
Diplomats on Tuesday said at least 550 pilgrims died during the Haj, underscoring the grueling nature of the pilgrimage which again unfolded in scorching temperatures this year. At least 323 of those who died were Egyptians, most of them succumbing to heat-related illnesses, two Arab diplomats coordinating their countries’ responses told AFP.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 06:14 pm
Mangalore Correspondent
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
11-09-25 02:25 pm
HK STAFF
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm