ಬ್ರೇಕಿಂಗ್ ನ್ಯೂಸ್
19-06-24 11:19 am HK News Desk ದೇಶ - ವಿದೇಶ
ನವದೆಹಲಿ, ಜೂನ್.19: ಮುಸ್ಲಿಮರ ಪವಿತ್ರ ಸ್ಥಳ ಮೆಕ್ಕಾದಲ್ಲಿ ಅತಿ ತಾಪಮಾನದಿಂದಾಗಿ 550ಕ್ಕೂ ಹೆಚ್ಚು ಮಂದಿ ಹಜ್ ಯಾತ್ರಿಗಳು ಸಾವನ್ನಪ್ಪಿದ್ದಾರೆ ಎಂದು ಅಲ್ಲಿನ ಅಧಿಕಾರಿಗಳು ಮಾಧ್ಯಮ ಸಂಸ್ಥೆಗೆ ತಿಳಿಸಿದ್ದಾರೆ. ಈ ಪೈಕಿ ಬಹುಪಾಲು ಅಂದರೆ, 323 ಮಂದಿ ಈಜಿಪ್ಟ್ ದೇಶದ ಪ್ರಜೆಗಳು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
60 ಮಂದಿ ಜೋರ್ಡಾನ್ ಪ್ರಜೆಗಳು ಸಾವಿಗೀಡಾಗಿದ್ದಾರೆ. ಇಂಡೋನೇಶ್ಯಾ, ಇರಾನ್, ಸೆನೆಗಲ್ ದೇಶದ ಪ್ರಜೆಗಳು ಹೆಚ್ಚಾಗಿ ಸಾವು ಕಂಡಿದ್ದಾರೆ. ಹಗಲಿನ ವೇಳೆಯಲ್ಲಿ ಮೆಕ್ಕಾದಲ್ಲಿ 51.8 ಡಿಗ್ರಿ ಸೆಲ್ಶಿಯಸ್ ಉಷ್ಣತೆ ಇರುವುದಾಗಿ ಸೌದಿ ರಾಷ್ಟ್ರೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಪ್ರತಿ ಹತ್ತು ವರ್ಷದಲ್ಲಿ 0.4 ಡಿಗ್ರಿ ಸೆಲ್ಶಿಯಸ್ ಉಷ್ಣತೆ ಹೆಚ್ಚುತ್ತಿದ್ದು, ಇದರಿಂದಾಗಿ ಮೆಕ್ಕಾದಲ್ಲಿ ಹಗಲಿನ ವೇಳೆಯಲ್ಲಿ ಜನರು ಕಾಲಿಡದ ಸ್ಥಿತಿಯಾಗಿದೆ ಎಂದು ಅಲ್ಲಿನ ಆಡಳಿತ ಮಾಹಿತಿ ಉಲ್ಲೇಖಿಸಿ ಇಂಡಿಯಾ ಟುಡೇ ವರದಿ ಮಾಡಿದೆ.
ಸೌದಿ ಆಡಳಿತದ ಮಾಹಿತಿ ಪ್ರಕಾರ, 2 ಸಾವಿರಕ್ಕೂ ಹೆಚ್ಚು ಮಂದಿ ಅಸ್ವಸ್ಥಕ್ಕೀಡಾಗಿದ್ದು, ಅವರಿಗೆ ಆರೈಕೆ ಮಾಡಲಾಗಿದೆ. ಆದರೆ ಎಷ್ಟು ಮಂದಿ ಸಾವಿಗೀಡಾಗಿದ್ದಾರೆ ಎನ್ನುವ ಬಗ್ಗೆ ಅಧಿಕೃತ ಮಾಹಿತಿ ನೀಡಿಲ್ಲ. ಇದೇ ವೇಳೆ, ಹಜ್ ಯಾತ್ರಿಗಳು ಕೊಡೆ ಹಿಡಿದು ಬಿಸಿಲಿನಿಂದ ದೂರ ಇರಬೇಕು, ಸಾಕಷ್ಟು ನೀರು ಕುಡಿಯಿರಿ, ಬಿಸಿಲಿನ ನೇರ ಹೊಡೆತದಿಂದ ದೂರವಿರಿ ಎಂದು ಸಲಹೆ ಮಾಡಿದೆ. ಈ ಬಾರಿ ಒಟ್ಟು 1.8 ಮಿಲಿಯನ್ ಹಜ್ ಯಾತ್ರಿಗಳು ಮೆಕ್ಕಾ ಯಾತ್ರೆ ಕೈಗೊಂಡಿದ್ದಾರೆ. ಕಳೆದ ವರ್ಷ 1.6 ಮಿಲಿಯನ್ ಜನರು ಹಜ್ ಯಾತ್ರೆ ಮಾಡಿದ್ದರು. ಮುಸ್ಲಿಮರಿಗೆ ಐದು ಕಡ್ಡಾಯ ನಿಮಯಗಳಲ್ಲಿ ಜೀವನದಲ್ಲಿ ಒಂದು ಬಾರಿಯಾದರೂ ಹಜ್ ಯಾತ್ರೆ ಕೈಗೊಳ್ಳಬೇಕು ಎಂಬುದೂ ಒಂದಾಗಿದೆ.
Diplomats on Tuesday said at least 550 pilgrims died during the Haj, underscoring the grueling nature of the pilgrimage which again unfolded in scorching temperatures this year. At least 323 of those who died were Egyptians, most of them succumbing to heat-related illnesses, two Arab diplomats coordinating their countries’ responses told AFP.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 03:33 pm
Mangalore Correspondent
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
15-05-25 06:02 pm
Bangalore Correspondent
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm