ಬ್ರೇಕಿಂಗ್ ನ್ಯೂಸ್
21-06-24 11:35 am HK News Desk ದೇಶ - ವಿದೇಶ
ನವದೆಹಲಿ, ಜೂನ್.21: ಯುಜಿಸಿ ನಡೆಸುವ ನೀಟ್ ಮತ್ತು ನೆಟ್ ಪರೀಕ್ಷೆಯಲ್ಲಿ ಪೇಪರ್ ಸೋರಿಕೆ ಮತ್ತು ಅಕ್ರಮದ ವಿವಾದದ ನಡುವೆ ರಾಷ್ಟ್ರೀಯ ಪರೀಕ್ಷಾ ಮಂಡಳಿ (NTA) ಕಾರ್ಯ ನಿರ್ವಹಣೆ ಬಗ್ಗೆ ತನಿಖೆ ನಡೆಸಲು ಉನ್ನತ ಮಟ್ಟದ ಸಮಿತಿ ರಚಿಸುವುದಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.
ಯುಜಿಸಿ ನೆಟ್ ಪರೀಕ್ಷೆ ರದ್ದತಿ ಮತ್ತು ನೀಟ್ ಪರೀಕ್ಷೆಯಲ್ಲಿ ಆಗಿರುವ ಅಕ್ರಮಗಳ ವಿರುದ್ಧ ವಿವಿಧ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿ ಸಂಘಟನೆಗಳ ಸದಸ್ಯರು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ನಿವಾಸದ ಹೊರಗೆ ಗುರುವಾರ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಪ್ರಧಾನ್, ಅಕ್ರಮದ ಘಟನೆಗಳು ಪ್ರಾಮಾಣಿಕವಾಗಿ ಪರೀಕ್ಷೆ ಬರೆದು ಉತ್ತೀರ್ಣರಾದ ವಿದ್ಯಾರ್ಥಿಗಳ ಸಾಧನೆಗಳನ್ನು ಮರೆಮಾಡಬಾರದು. ಯಾರು ತಪ್ಪು ಮಾಡಿದ್ದಾರೋ ಅವರನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಯಾವುದೇ ಎನ್ಟಿಎ ಅಧಿಕಾರಿಗಳ ತಪ್ಪಿತಸ್ಥರು ಎಂದು ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಆದರೆ, ನಮ್ಮ ವ್ಯವಸ್ಥೆ ಮತ್ತು ಕಾನೂನುಗಳ ನಮಗೆ ನಂಬಿಕೆ ಇಟ್ಟುಕೊಳ್ಳಿ. ಯಾವುದೇ ಅಕ್ರಮಗಳು ಅಥವಾ ದುಷ್ಕೃತ್ಯಗಳನ್ನು ಸರ್ಕಾರವು ಸಹಿಸುವುದಿಲ್ಲ. ಈ ವಿಷಯವನ್ನು ರಾಜಕೀಯಗೊಳಿಸದಂತೆ ವಿರೋಧ ಪಕ್ಷಗಳನ್ನು ಒತ್ತಾಯಿಸಿದರು.


ನೀಟ್ ಪರೀಕ್ಷೆ MBBS, BDS, ಆಯುಷ್ ಮತ್ತು ಇತರ ಸಂಬಂಧಿತ ಕೋರ್ಸ್ಗಳ ಪ್ರವೇಶಕ್ಕಾಗಿ NTA ದೇಶಾದ್ಯಂತ ನಡೆಸುವ ನಿರ್ಣಾಯಕ ಪರೀಕ್ಷೆಯಾಗಿದೆ. ಮೇ 5 ರಂದು 4,750 ಕೇಂದ್ರಗಳಲ್ಲಿ ಪರೀಕ್ಷೆಯನ್ನು ನಡೆಸಲಾಗಿದ್ದು, ಸುಮಾರು 24 ಲಕ್ಷ ಅಭ್ಯರ್ಥಿಗಳು ಹಾಜರಾಗಿದ್ದರು. ಜೂನ್ 14 ರಂದು ಫಲಿತಾಂಶದ ನಿರೀಕ್ಷೆಯಿತ್ತು. ಆದರೆ, ಜೂನ್ 4ರಂದು ಲೋಕಸಭೆ ಫಲಿತಾಂಶ ದಿನವೇ ಫಲಿತಾಂಶವನ್ನು ಪ್ರಕಟಿಸಲಾಗಿತ್ತು. ಇದರಲ್ಲಿ 67 ವಿದ್ಯಾರ್ಥಿಗಳು ಪೂರ್ಣವಾಗಿ 720 ಅಂಕಗಳನ್ನು ಗಳಿಸಿರುವುದು ಭಾರೀ ಅಕ್ರಮದ ಬಗ್ಗೆ ಅನುಮಾನ ಹುಟ್ಟಿಸಿದೆ. ಅದರಲ್ಲೂ ಹೆಚ್ಚು ಅಂಕ ಗಳಿಸಿದವರ ಪೈಕಿ ಆರು ಮಂದಿ ಹರಿಯಾಣದ ಫರೀದಾಬಾದ್ನ ಒಂದೇ ಕೇಂದ್ರದವರು.
ನೀಟ್ ಪರೀಕ್ಷೆಯಲ್ಲಿ ಪೇಪರ್ ಸೋರಿಕೆಯಾಗಿರುವ ಬಗ್ಗೆ ಯಾವುದೇ ಪುರಾವೆಗಳಿಲ್ಲ. ಎನ್ ಟಿಎಯಲ್ಲಿ ಭ್ರಷ್ಟಾಚಾರದ ಆರೋಪಗಳು ಆಧಾರ ರಹಿತವಾಗಿವೆ. ಇದು ಅತ್ಯಂತ ವಿಶ್ವಾಸಾರ್ಹ ಸಂಸ್ಥೆಯಾಗಿದೆ ಎಂದು ಧರ್ಮನ್ ಪ್ರಧಾನ್ ಜೂನ್ 13 ರಂದು ಹೇಳಿದ್ದರು. ಯುಜಿಸಿ-ನೆಟ್ ಪರೀಕ್ಷೆ ರದ್ದತಿ ಬಗ್ಗೆಯೂ ಪ್ರತಿಕ್ರಿಯಿಸಿದ ಪ್ರಧಾನ್, ಡಾಕ್ನೆಟ್ನಲ್ಲಿ ಪೇಪರ್ ಸೋರಿಕೆಯಾದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
Facing mounting pressure over the irregularities in the NEET exam, union education minister Dharmendra Pradhan on Thursday said that the Centre is forming a high-level committee to investigate the functioning of the National Testing Agency.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm