ಬ್ರೇಕಿಂಗ್ ನ್ಯೂಸ್
29-06-24 07:21 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 29: ಜಮ್ಮು ಕಾಶ್ಮೀರದ ಲಡಾಖ್ ಪ್ರಾಂತ್ಯದ ಚೀನಾ ಗಡಿಭಾಗದಲ್ಲಿ ನದಿಯೊಂದನ್ನು ಯುದ್ಧ ಟ್ಯಾಂಕರಿನಲ್ಲಿ ದಾಟುತ್ತಿದ್ದಾಗ ಒಮ್ಮೆಲೇ ನೀರಿನ ಪ್ರಮಾಣ ಹೆಚ್ಚಾಗಿ ಅದರಲ್ಲಿದ್ದ ಐವರು ಯೋಧರು ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ.
ಲಡಾಖ್ ಗಡಿಭಾಗದ ದೌಲತ್ ಬೇಗ್ ಓಲ್ಡೀ ಏರಿಯಾದಲ್ಲಿ ಘಟನೆ ನಡೆದಿದ್ದು, ಚೀನಾ ಭಾಗದಿಂದ ಹರಿದು ಬರುವ ನ್ಯೋಮಾ ಚುಶೂಲ್ ಎನ್ನುವ ನದಿಯನ್ನು ದಾಟುತ್ತಿದ್ದಾಗ ದುರಂತ ಉಂಟಾಗಿದೆ. ಟಿ-72 ಹೆಸರಿನ ಯುದ್ಧ ಟ್ಯಾಂಕರನ್ನು ನಸುಕಿನಲ್ಲಿ ಐವರು ಯೋಧರು ದಾಟಿಸುತ್ತಿದ್ದಾಗ ಒಮ್ಮಿಂದೊಮ್ಮೆಲೇ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿತ್ತು. ನದಿಯ ಪ್ರವಾಹದಲ್ಲಿ ಸಿಲುಕಿದ ಐವರು ಯೋಧರು ಕೊಚ್ಚಿ ಹೋಗಿದ್ದು ದುರಂತ ಸಾವಿಗೀಡಾಗಿದ್ದಾರೆ.
ಯುದ್ಧ ಟ್ಯಾಂಕ್ ನದಿಯ ಮಧ್ಯೆ ಸ್ಥಗಿತಗೊಂಡಿದ್ದರಿಂದ ದುರ್ಘಟನೆ ಸಂಭವಿಸಿದೆ. ಕೂಡಲೇ ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಲು ಯತ್ನಿಸಿದ್ದು, ನೀರಿನ ಪ್ರವಾಹ ಹೆಚ್ಚಿದ್ದರಿಂದ ಸಾಧ್ಯವಾಗಲಿಲ್ಲ ಎಂದು ಭಾರತೀಯ ಸೇನೆ ಮಾಹಿತಿ ನೀಡಿದೆ. ತರಬೇತಿ ಉದ್ದೇಶದ ಭಾಗವಾಗಿ ಯೋಧರು ಯುದ್ಧ ಟ್ಯಾಂಕ್ ಅನ್ನು ನದಿ ದಾಟಿಸುತ್ತಿದ್ದರು. ಅದೇ ಸಂದರ್ಭದಲ್ಲಿ ದುರ್ಘಟನೆ ಆಗಿದ್ದು ಆರ್ಮಿ ಚೀಫ್ ಮನೋಜ್ ಪಾಂಡೆ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿ ಪ್ರಮುಖರು ಸಂತಾಪ ವ್ಯಕ್ತಪಡಿಸಿದ್ದಾರೆ.
ಮೃತರಲ್ಲಿ ಐವರು ಭೂಸೇನೆಯ ಸೈನಿಕರು ಮತ್ತು ಒಬ್ಬರು ಜೂನಿಯರ್ ಕಮಿಷನ್ಡ್ ಅಧಿಕಾರಿ ಇದ್ದಾರೆ. ಲಡಾಖ್ ಮತ್ತು ಹಿಮಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ನದಿಯಲ್ಲಿ ಪ್ರವಾಹ ಸ್ಥಿತಿ ಏರ್ಪಟ್ಟಿದೆ. ಶಿಮ್ಲಾ, ಕುಲು, ಕಿನ್ನೌರ್ ಜಿಲ್ಲೆಗಳಲ್ಲಿ ಭೂಕುಸಿತ ಘಟನೆಗಳು ನಡೆದಿವೆ. ಶಿಮ್ಲಾದಲ್ಲಿ ಭೂಕುಸಿತದಿಂದ ಹಲವಾರು ವಾಹನಗಳು ಜಖಂ ಆಗಿವೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.
Five soldiers of the Indian Army died after they were swept away in flash floods while their tank was crossing a river in the Daulat Beg Oldie area of eastern Ladakh. The area is near the Line of Actual Control with China.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm