ಬ್ರೇಕಿಂಗ್ ನ್ಯೂಸ್
14-07-24 03:16 pm HK News Desk ದೇಶ - ವಿದೇಶ
ಜೈಪುರ, ಜುಲೈ.14: ರಾಜಸ್ಥಾನದ ಪಾಲಿ ಜಿಲ್ಲೆಯ ಜೋಗ್ಮಂಡಿ ರೈಲ್ವೇ ಸೇತುವೆಯಲ್ಲಿ ನವ ವಿವಾಹಿತ ಜೋಡಿ ಫೋಟೋ ಶೂಟ್ ಮಾಡುತ್ತಿದ್ದಾಗ ರೈಲು ಬಂದಿದ್ದು ಇದನ್ನು ನೋಡಿ ಪತಿ- ಪತ್ನಿ ಸೇತುವೆಯಿಂದಲೇ 90 ಅಡಿ ಆಳದ ಕಂದಕಕ್ಕೆ ಹಾರಿದ ಘಟನೆ ನಡೆದಿದ್ದು ಇದರ ವಿಡಿಯೋ ವೈರಲ್ ಆಗಿದೆ. ಅಪಘಾತದಲ್ಲಿ ಇಬ್ಬರೂ ಗಾಯಗೊಂಡಿದ್ದಾರೆ.
ಪೊಲೀಸರ ಪ್ರಕಾರ, ರಾಹುಲ್ ಮೇವಾಡಾ (22) ಮತ್ತು ಅವರ ಪತ್ನಿ ಜಾಹ್ನವಿ (20) ಮದುವೆಯಾದ ಬಳಿಕ ಗೋರಂಘಾಟ್ ಗೆ ಭೇಟಿ ನೀಡಲು ಬಂದಿದ್ದರು. ಜೋಗಮಂಡಿ ಸೇತುವೆಯ ಮೀಟರ್ ಗೇಜ್ ರೈಲ್ವೇ ಮಾರ್ಗದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಸೇತುವೆ ಮಧ್ಯದಲ್ಲಿ ನಿಂತು ಫೋಟೊ ಶೂಟ್ ಮಾಡ ತೊಡಗಿದ್ದರು. ಇದೇ ವೇಳೆ, ಮಾರ್ವಾರ್ ಪ್ಯಾಸೆಂಜರ್ ರೈಲು ಕಮ್ಲಿಘಾಟ್ ರೈಲ್ವೆ ನಿಲ್ದಾಣದಿಂದ ಬಂದಿತ್ತು. ರೈಲು ನಿಧಾನಕ್ಕೆ ಬರುತ್ತಿದ್ದರೂ ದಂಪತಿ ಭಯಗೊಂಡು ಸೇತುವೆಯಿಂದ ಕೆಳಗೆ ಹಾರಿದ್ದರು.


ಇಬ್ಬರು ಸಂಬಂಧಿಕರು ರೈಲ್ವೇ ಸೇತುವೆಯ ಬಳಿ ನಿಂತು ಫೋಟೊ ತೆಗೆಯುತ್ತಿದ್ದರೆ, ಹಠಾತ್ ರೈಲು ಬಂದಾಗ ಏನು ಮಾಡುವುದೆಂದು ತೋಚಲಿಲ್ಲ. ಸಂಬಂಧಿಕರು ಬೊಬ್ಬೆ ಹೊಡೆಯ ತೊಡಗಿದ್ದರೆ, ದಂಪತಿ ನೇರವಾಗಿ ಸೇತುವೆಯಿಂದ ಹೊರಕ್ಕೆ ಜಿಗಿದಿದ್ದಾರೆ. ಇದು ಸಂಬಂಧಿಕರ ಮೊಬೈಲಿನಲ್ಲಿ ಸೆರೆಯಾಗಿದ್ದು ವೀಡಿಯೊ ಜಾಲತಾಣದಲ್ಲಿ ವೈರಲ್ ಆಗಿದೆ.
ರೈಲು ನಿಲ್ಲುತ್ತಿದ್ದಂತೆ ಚಾಲಕ ಮತ್ತು ಗಾರ್ಡ್ ಸೇತುವೆಯಿಂದ ಇಳಿದು, ಗಂಭೀರ ಗಾಯಗೊಂಡ ದಂಪತಿಯನ್ನು ಎತ್ತಿ ಫುಲಾಡ್ ರೈಲ್ವೇ ನಿಲ್ದಾಣಕ್ಕೆ ಕರೆದೊಯ್ದರು. ಅಲ್ಲಿಂದ ಆಂಬ್ಯುಲೆನ್ಸ್ ಸಹಾಯದಿಂದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.
A young couple jumped from the Jogmandi railway bridge in Pali after seeing the train approaching towards them on Saturday, police said.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm