ಬ್ರೇಕಿಂಗ್ ನ್ಯೂಸ್
17-07-24 10:31 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 17: ಮುಸ್ಲಿಮರಲ್ಲಿ ಪುರುಷರದ್ದೇ ಅಧಿಪತ್ಯ. ಪತ್ನಿಯ ಮೇಲೆ ತಲಾಖ್ ಹೇಳಿಯೂ ಸಂಬಂಧವನ್ನು ಕಡಿದುಕೊಳ್ಳಬಹುದು. ಹಿಂದೆಲ್ಲಾ ತ್ರಿಬಲ್ ತಲಾಖ್ ಎನ್ನುವುದು ಮುಸ್ಲಿಮ್ ಮಹಿಳೆಯರ ಮೇಲಿನ ಶೋಷಣೆಯ ಅಸ್ತ್ರವೇ ಆಗಿತ್ತು. ಇದೀಗ ದುಬೈ ರಾಜನ ಮಗಳು, ಅರ್ಥಾತ್ ರಾಜಕುಮಾರಿ ತನ್ನ ಗಂಡ ಬೇರೊಬ್ಬಾಕೆಯನ್ನು ಕಟ್ಟಿಕೊಂಡಿದ್ದಾಳೆಂದು ತಿಳಿಯುತ್ತಲೇ ಸೋಶಿಯಲ್ ಮೀಡಿಯಾದಲ್ಲೇ ಗಂಡನಿಗೆ ತ್ರಿಬಲ್ ತಲಾಖ್ ಹೇಳಿ ಸುದ್ದಿಯಾಗಿದ್ದಾರೆ.
ದುಬೈ ರಾಜ ಮಹಮ್ಮದ್ ರಶೀದ್ ಅಲ್ ಮಕ್ತುಮ್ ಅವರ ಪುತ್ರಿಯಾಗಿರುವ ಶೈಖಾ ಮಹ್ರಾ ಅಲ್ ಮಕ್ತುಮ್ ಅವರು ತನ್ನ ಗಂಡ ಮಹಮ್ಮದ್ ಬಿನ್ ರಶೀದ್ ಬಿನ್ ಮನಾ ಅಲ್ ಮಕ್ತುಮ್ ವಿರುದ್ಧ ಇನ್ ಸ್ಟಾ ಗ್ರಾಮ್ ಪೇಜಿನಲ್ಲೇ ಡೈವರ್ಸ್ ಮಾಡಿರುವುದನ್ನು ಹೇಳಿಕೊಂಡಿದ್ದಾರೆ. ಜುಲೈ 16ರಂದು ಆಕೆ ಈ ಪೋಸ್ಟ್ ಹಾಕಿದ್ದು ಬರೆದಿರುವ ರೀತಿ ಹೀಗಿದೆ. ಪ್ರೀತಿಯ ಪತಿಯೇ, ನೀವು ಬೇರೊಬ್ಬ ಸಂಗಾತಿಯನ್ನು ಕಟ್ಟಿಕೊಂಡಿದ್ದೀರಾ.. ಹೀಗಾಗಿ ನಾನು ಈ ಮೂಲಕ ಸಂಬಂಧ ಕಡಿಕೊಳ್ಳುವ ವಿಚ್ಛೇದನ ಘೋಷಣೆ ಮಾಡುತ್ತಿದ್ದೇನೆ. ಡೈವರ್ಸ್ ಮಾಡುತ್ತೇನೆ, ಡೈವರ್ಸ್ ಮಾಡುತ್ತೇನೆ, ಡೈವರ್ಸ್ ಮಾಡುತ್ತೇನೆ. ನಿಮ್ಮ ಹಳೆ ಪತ್ನಿಯನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ಪುರುಷರು ತಲಾಖ್ ಹೇಳಿದ ರೀತಿಯಲ್ಲೇ ಮೂರು ಬಾರಿ ಡೈವರ್ಸ್ ಘೋಷಣೆ ಮಾಡಿಕೊಂಡು ಪೋಸ್ಟ್ ಮಾಡಿದ್ದಾರೆ.
ಇಸ್ಲಾಮಿಕ್ ಪದ್ಧತಿಯಲ್ಲಿ ಪುರುಷನು ತನ್ನ ಪತ್ನಿಗೆ ಮೂರು ಬಾರಿ ತಲಾಖ್ ಘೋಷಣೆ ಮಾಡಿ, ಸಂಬಂಧವನ್ನೇ ಕಡಿದುಕೊಳ್ಳಲು ಅವಕಾಶ ಇದೆ. ಈ ರೀತಿಯ ತ್ರಿಬಲ್ ತಲಾಖ್ ಮುಸ್ಲಿಮರಲ್ಲಿ ಹಿಂದಿನಿಂದಲೂ ಚಾಲ್ತಿಯಲ್ಲಿದೆ. ಭಾರತದಲ್ಲಿ ಮಾತ್ರ ಈ ಪದ್ಧತಿಯನ್ನು ಇತ್ತೀಚೆಗೆ ನಿಷೇಧಿಸಲಾಗಿದೆ. ಇಸ್ಲಾಮಿನಲ್ಲಿ ಮಹಿಳೆಯರಿಗೆ ಡೈವರ್ಸ್ ಮಾಡಿಕೊಳ್ಳುವ ಅವಕಾಶ ಇದ್ದರೂ, ಅದರಲ್ಲಿ ಪುರುಷನಷ್ಟು ಸ್ವಾತಂತ್ರ್ಯ ಇಲ್ಲ. ಮಹಿಳೆ ವಿಚ್ಛೇದನ ಬಯಸುವುದನ್ನು ಖುಲಾ ಎಂದು ಕರೆಯುತ್ತಾರೆ. ಆದರೆ, ತನಗೆ ಡೈವರ್ಸ್ ಬೇಕೆಂದು ಕೋರ್ಟಿನಲ್ಲಿ ಅಥವಾ ಆತನಲ್ಲಿ ವಿನಂತಿ ಮಾಡಿಕೊಳ್ಳಬೇಕು.
ದುಬೈ ರಾಜ ಮಹಮ್ಮದ್ ಬಿನ್ ರಶೀದ್ ಅವರ ಪುತ್ರಿ ಶೈಖಾ ಮಹ್ರಾಗೆ 2023ರ ಮೇ ತಿಂಗಳಲ್ಲಿ ಮದುವೆಯಾಗಿತ್ತು. ಒಂದು ವರ್ಷದ ನಂತರ ಅಂದರೆ, ಇದೇ ಜೂನ್ ತಿಂಗಳ ಆರಂಭದಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ್ದಳು. ತನಗೆ ಮಗುವಾಗಿದ್ದನ್ನೂ ಆಕೆ ಇನ್ ಸ್ಟಾ ಪೇಜಿನಲ್ಲಿ ಹಾಕ್ಕೊಂಡಿದ್ದಳು. ಇದೀಗ ಒಂದೇ ತಿಂಗಳಲ್ಲಿ ಆಕೆಯೇ ವಿಚ್ಛೇದನ ಘೋಷಣೆ ಮಾಡಿಕೊಂಡಿದ್ದಾರೆ. ದುಬೈನಲ್ಲಿ ಅರಬ್ಬಿಗಳದ್ದೇ ಸಾಮ್ರಾಜ್ಯ ಆಗಿದ್ದರೂ, ರಾಜಕುಮಾರಿ ಆಗಿರುವ ಶೈಖಾ ಮಹ್ರಾ ಅವರು ವಿಚ್ಛೇದನ ಘೋಷಣೆ ಮಾಡಿ ಸುದ್ದಿಯಾಗಿದ್ದಾಳೆ.
Dubai princess Shaikha Mahra Mohammed Rashed Al Maktoum gave 'instant divorce' to her husband Sheikh Mana bin Mohammed bin Rashid bin Mana Al Maktoum on Instagram, two months after the couple welcomed their first child.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm