ಬ್ರೇಕಿಂಗ್ ನ್ಯೂಸ್
18-07-24 11:25 am HK News Desk ದೇಶ - ವಿದೇಶ
ಲಕ್ನೋ, ಜುಲೈ.18: ಇಸ್ಲಾಂಗೆ ಮತಾಂತರಗೊಂಡ ಹಿಂದು ಧರ್ಮದ ಯುವಕ ಮತ್ತು ಯುವತಿಯರಿಗೆ ಸಾಮೂಹಿಕ ವಿವಾಹ ನಡೆಸಲು ಅನುಮತಿ ನೀಡುವಂತೆ ಇತ್ತೆಹಾದ್-ಎ-ಮಿಲ್ಲತ್ ಕೌನ್ಸಿಲ್ (ಐಎಂಸಿ) ಮಾಡಿದ್ದ ಪ್ರಸ್ತಾಪಕ್ಕೆ ಉತ್ತರ ಪ್ರದೇಶದ ರಾಯ್ ಬರೇಲಿ ಜಿಲ್ಲಾಡಳಿತ ಅನುಮತಿ ನಿರಾಕರಿಸಿದ್ದು ಸಾಮೂಹಿಕ ಮತಾಂತರ ಕಾರ್ಯಕ್ರಮ ವಿವಾದಕ್ಕೆ ಕಾರಣವಾಗಿದೆ.
ಐಎಂಸಿಯಿಂದ ಸರ್ಕಾರಿ ಶಾಲೆಯೊಂದರಲ್ಲಿ ಜುಲೈ 21ರಂದು ಸಾಮೂಹಿಕ ವಿವಾಹ ಮತ್ತು ಮತಾಂತರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಹಿಂದು ಧರ್ಮದ ಐದು ಜೋಡಿಗಳನ್ನು ಇಸ್ಲಾಂ ಪದ್ಧತಿಯಂತೆ ನಿಕಾಹ್ ಮಾಡಿಸುವುದು ಯೋಜನೆಯಾಗಿತ್ತು. ಈ ಕಾರ್ಯಕ್ರಮಕ್ಕೆ ಹಿಂದು ಸಂಘಟನೆಗಳಿಂದ ಆಕ್ಷೇಪ ವ್ಯಕ್ತವಾಗಿದ್ದರಿಂದ ಜಿಲ್ಲಾಡಳಿತ ಅನುಮತಿ ನಿರಾಕರಿಸಿದೆ. ಐಎಂಸಿ ಮುಖ್ಯಸ್ಥ ಮೌಲಾನಾ ತೌಕೀರ್ ರಜಾ ಖಾನ್ ಪ್ರತಿಕ್ರಿಯೆ ನೀಡಿದ್ದು ಜಿಲ್ಲಾಡಳಿತದ ಅನುಮತಿ ಪಡೆದ ನಂತರವೇ ಸಾಮೂಹಿಕ ನಿಕಾಹ್ ಸಮಾರಂಭವನ್ನು ಆಯೋಜಿಸಲಾಗುವುದು. ಈ ಬಗ್ಗೆ ಆಡಳಿತದಿಂದ ಅನುಮತಿ ಕೋರಿದ್ದೆವು, ಆದರೆ ನಮ್ಮ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದು ಹೇಳಿದ್ದಾರೆ.
ಸಾಮೂಹಿಕ ನಿಕಾಹ್ ಮತ್ತು ಮತಾಂತರ ಕಾರ್ಯಕ್ರಮಗಳನ್ನು ಆಯೋಜಿಸಲು ಐಎಂಸಿ ಅನುಮತಿ ಕೇಳಿದ್ದು ಅವಕಾಶ ನೀಡಲಾಗಿಲ್ಲ ಎಂದು ಬರೇಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ರವೀಂದ್ರ ಕುಮಾರ್ ಹೇಳಿದ್ದಾರೆ.
ಇಸ್ಲಾಂಗೆ ಮತಾಂತರಗೊಂಡ ಹಿಂದೂ ಯುವಕ-ಯುವತಿಯರಿಗೆ ನಿಕಾಹ್ ನಡೆಸಲಿದ್ದೇವೆ. ಮೊದಲ ಹಂತದಲ್ಲಿ ಐದು ಜೋಡಿಗಳ ವಿವಾಹ ನಡೆಸಲಾಗುವುದು ಎಂದು ಐಎಂಸಿ ಮುಖ್ಯಸ್ಥ ಖಾನ್ ತಿಳಿಸಿದ್ದು ಇದಕ್ಕೆ ಭಾರೀ ಆಕ್ಷೇಪ ವ್ಯಕ್ತವಾಗಿದೆ. ಜುಲೈ 21ರಂದು ಬೆಳಗ್ಗೆ 11 ಗಂಟೆಗೆ ಖಲೀಲ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಸಾಮೂಹಿಕ ನಿಕಾಹ್ ಸಮಾರಂಭ ನಡೆಯಲಿದೆ ಎಂದು ಖಾನ್ ಹೇಳಿದ್ದರು. ಖಾನ್ ವಿರುದ್ಧ ಮಂಗಳವಾರ ಬರೇಲಿಯಲ್ಲಿ ಹಿಂದೂ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದ್ದವು.
The Ittehad-e-Millat Council (IMC) has said that it would not hold the mass marriage ceremony of those who converted to Islam in Bareilly after the district administration denied permission.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm