ಬ್ರೇಕಿಂಗ್ ನ್ಯೂಸ್
18-07-24 11:25 am HK News Desk ದೇಶ - ವಿದೇಶ
ಲಕ್ನೋ, ಜುಲೈ.18: ಇಸ್ಲಾಂಗೆ ಮತಾಂತರಗೊಂಡ ಹಿಂದು ಧರ್ಮದ ಯುವಕ ಮತ್ತು ಯುವತಿಯರಿಗೆ ಸಾಮೂಹಿಕ ವಿವಾಹ ನಡೆಸಲು ಅನುಮತಿ ನೀಡುವಂತೆ ಇತ್ತೆಹಾದ್-ಎ-ಮಿಲ್ಲತ್ ಕೌನ್ಸಿಲ್ (ಐಎಂಸಿ) ಮಾಡಿದ್ದ ಪ್ರಸ್ತಾಪಕ್ಕೆ ಉತ್ತರ ಪ್ರದೇಶದ ರಾಯ್ ಬರೇಲಿ ಜಿಲ್ಲಾಡಳಿತ ಅನುಮತಿ ನಿರಾಕರಿಸಿದ್ದು ಸಾಮೂಹಿಕ ಮತಾಂತರ ಕಾರ್ಯಕ್ರಮ ವಿವಾದಕ್ಕೆ ಕಾರಣವಾಗಿದೆ.
ಐಎಂಸಿಯಿಂದ ಸರ್ಕಾರಿ ಶಾಲೆಯೊಂದರಲ್ಲಿ ಜುಲೈ 21ರಂದು ಸಾಮೂಹಿಕ ವಿವಾಹ ಮತ್ತು ಮತಾಂತರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಹಿಂದು ಧರ್ಮದ ಐದು ಜೋಡಿಗಳನ್ನು ಇಸ್ಲಾಂ ಪದ್ಧತಿಯಂತೆ ನಿಕಾಹ್ ಮಾಡಿಸುವುದು ಯೋಜನೆಯಾಗಿತ್ತು. ಈ ಕಾರ್ಯಕ್ರಮಕ್ಕೆ ಹಿಂದು ಸಂಘಟನೆಗಳಿಂದ ಆಕ್ಷೇಪ ವ್ಯಕ್ತವಾಗಿದ್ದರಿಂದ ಜಿಲ್ಲಾಡಳಿತ ಅನುಮತಿ ನಿರಾಕರಿಸಿದೆ. ಐಎಂಸಿ ಮುಖ್ಯಸ್ಥ ಮೌಲಾನಾ ತೌಕೀರ್ ರಜಾ ಖಾನ್ ಪ್ರತಿಕ್ರಿಯೆ ನೀಡಿದ್ದು ಜಿಲ್ಲಾಡಳಿತದ ಅನುಮತಿ ಪಡೆದ ನಂತರವೇ ಸಾಮೂಹಿಕ ನಿಕಾಹ್ ಸಮಾರಂಭವನ್ನು ಆಯೋಜಿಸಲಾಗುವುದು. ಈ ಬಗ್ಗೆ ಆಡಳಿತದಿಂದ ಅನುಮತಿ ಕೋರಿದ್ದೆವು, ಆದರೆ ನಮ್ಮ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದು ಹೇಳಿದ್ದಾರೆ.
ಸಾಮೂಹಿಕ ನಿಕಾಹ್ ಮತ್ತು ಮತಾಂತರ ಕಾರ್ಯಕ್ರಮಗಳನ್ನು ಆಯೋಜಿಸಲು ಐಎಂಸಿ ಅನುಮತಿ ಕೇಳಿದ್ದು ಅವಕಾಶ ನೀಡಲಾಗಿಲ್ಲ ಎಂದು ಬರೇಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ರವೀಂದ್ರ ಕುಮಾರ್ ಹೇಳಿದ್ದಾರೆ.
ಇಸ್ಲಾಂಗೆ ಮತಾಂತರಗೊಂಡ ಹಿಂದೂ ಯುವಕ-ಯುವತಿಯರಿಗೆ ನಿಕಾಹ್ ನಡೆಸಲಿದ್ದೇವೆ. ಮೊದಲ ಹಂತದಲ್ಲಿ ಐದು ಜೋಡಿಗಳ ವಿವಾಹ ನಡೆಸಲಾಗುವುದು ಎಂದು ಐಎಂಸಿ ಮುಖ್ಯಸ್ಥ ಖಾನ್ ತಿಳಿಸಿದ್ದು ಇದಕ್ಕೆ ಭಾರೀ ಆಕ್ಷೇಪ ವ್ಯಕ್ತವಾಗಿದೆ. ಜುಲೈ 21ರಂದು ಬೆಳಗ್ಗೆ 11 ಗಂಟೆಗೆ ಖಲೀಲ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಸಾಮೂಹಿಕ ನಿಕಾಹ್ ಸಮಾರಂಭ ನಡೆಯಲಿದೆ ಎಂದು ಖಾನ್ ಹೇಳಿದ್ದರು. ಖಾನ್ ವಿರುದ್ಧ ಮಂಗಳವಾರ ಬರೇಲಿಯಲ್ಲಿ ಹಿಂದೂ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದ್ದವು.
The Ittehad-e-Millat Council (IMC) has said that it would not hold the mass marriage ceremony of those who converted to Islam in Bareilly after the district administration denied permission.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm