ಬ್ರೇಕಿಂಗ್ ನ್ಯೂಸ್
07-08-20 02:20 pm Headline Karnataka News Network ದೇಶ - ವಿದೇಶ
ಮುನ್ನಾರ್: ಕೇರಳಕ್ಕೆ ಮತ್ತೆ ಆಗಸ್ಟ್ ಶಾಪ ವಕ್ಕರಿಸಿದೆ. ರಾಜ್ಯಾದ್ಯಂತ ಕುಂಭದ್ರೋಣ ಮಳೆಯಾಗುತ್ತಿದೆ. ಭಾರೀ ಮಳೆಯಿಂದಾಗಿ ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು ಇದುವರೆಗೆ 15 ಜೀವಗಳನ್ನು ಬಲಿಪಡೆದುಕೊಂಡಿದೆ. ರಕ್ಷಣಾ ಪಡೆಗಳು ಆರು ಜನರನ್ನು ಮಣ್ಣಿನಡಿಯಿಂದ ಮೇಲಕ್ಕೆತ್ತಿದ್ದು ಅವರಲ್ಲಿ ನಾಲ್ಕು ಜನರ ಸ್ಥಿತಿ ಗಂಭೀರವಾಗಿದೆ.
ಕುಸಿದ ಗುಡ್ಡದ ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿರಬಹುದಾಗಿರುವವರಿಗಾಗಿ ಶೋಧ ಕಾರ್ಯವನ್ನು ಭರದಿಂದ ನಡೆಸಲಾಗುತ್ತಿದೆ.
ಮುನ್ನಾರು ಪಟ್ಟಣದಿಂದ 28 ಕಿಲೋಮೀಟರ್ ದೂರದಲ್ಲಿರುವ ಹಾಗೂ ಇರವಿಕುಲಂ ರಾಷ್ಟ್ರೀಯ ವನ್ಯಧಾಮಕ್ಕಿಂತ 20 ಕಿಲೋಮೀಟರ್ ಅಂತರದಲ್ಲಿರುವ ಈ ಚಹಾ ಪ್ಲಾಂಟೇಷನ್ ನ ಆಸುಪಾಸಿನಲ್ಲಿ ಸುಮಾರು 80 ಜನರು ವಾಸಿಸುತ್ತಿದ್ದರು ಎಂಬ ಮಾಹಿತಿಯೂ ಲಭ್ಯವಾಗಿದೆ. ಇವರೆಲ್ಲರೂ ಕಣ್ಣನ್ ದೇವನ್ ಕಂಪೆನಿಗಾಗಿ ಕೆಲಸ ಮಾಡುತ್ತಿದ್ದರು.
ರಾಜಾಮಲೆಯನ್ನು ಮುನ್ನಾರ್ ನೊಂದಿಗೆ ಸಂಪರ್ಕಿಸುವ ಪೆರಿಯಾರ್ ಸೇತುವೆಯೂ ಸಹ ಈ ಗುಡ್ಡ ಕುಸಿತದಿಂದ ಹಾನಿಗೀಡಾಗಿದೆ. ಮತ್ತು ಈ ಭಾಗದಲ್ಲಿದ್ದ ಮೊಬೈಲ್ ಟವರ್ ಸಹ ಘಟನೆಯಿಂದ ಹಾನಿಗೊಳಗಾದ ಕಾರಣ ಈ ಭೀಕರ ಗುಡ್ಡ ಕುಸಿತದ ವಿಚಾರ ಹೊರಜಗತ್ತಿಗೆ ತಿಳಿಯಲು ಸರಿಸುಮಾರು 5 ಗಂಟೆಗಳು ಬೇಕಾಗಿತ್ತು. ಅದೂ ಘಟನಾ ಸ್ಥಳದಿಂದ ತಮ್ಮನ್ನು ರಕ್ಷಿಸಿಕೊಂಡ ಕೆಲವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಬಳಿಕ ಈ ಭೀಕರ ಘಟನೆ ಬೆಳಕಿಗೆ ಬಂದಿತ್ತು.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm