ಬ್ರೇಕಿಂಗ್ ನ್ಯೂಸ್
07-08-20 02:20 pm Headline Karnataka News Network ದೇಶ - ವಿದೇಶ
ಮುನ್ನಾರ್: ಕೇರಳಕ್ಕೆ ಮತ್ತೆ ಆಗಸ್ಟ್ ಶಾಪ ವಕ್ಕರಿಸಿದೆ. ರಾಜ್ಯಾದ್ಯಂತ ಕುಂಭದ್ರೋಣ ಮಳೆಯಾಗುತ್ತಿದೆ. ಭಾರೀ ಮಳೆಯಿಂದಾಗಿ ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು ಇದುವರೆಗೆ 15 ಜೀವಗಳನ್ನು ಬಲಿಪಡೆದುಕೊಂಡಿದೆ. ರಕ್ಷಣಾ ಪಡೆಗಳು ಆರು ಜನರನ್ನು ಮಣ್ಣಿನಡಿಯಿಂದ ಮೇಲಕ್ಕೆತ್ತಿದ್ದು ಅವರಲ್ಲಿ ನಾಲ್ಕು ಜನರ ಸ್ಥಿತಿ ಗಂಭೀರವಾಗಿದೆ.
ಕುಸಿದ ಗುಡ್ಡದ ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿರಬಹುದಾಗಿರುವವರಿಗಾಗಿ ಶೋಧ ಕಾರ್ಯವನ್ನು ಭರದಿಂದ ನಡೆಸಲಾಗುತ್ತಿದೆ.
ಮುನ್ನಾರು ಪಟ್ಟಣದಿಂದ 28 ಕಿಲೋಮೀಟರ್ ದೂರದಲ್ಲಿರುವ ಹಾಗೂ ಇರವಿಕುಲಂ ರಾಷ್ಟ್ರೀಯ ವನ್ಯಧಾಮಕ್ಕಿಂತ 20 ಕಿಲೋಮೀಟರ್ ಅಂತರದಲ್ಲಿರುವ ಈ ಚಹಾ ಪ್ಲಾಂಟೇಷನ್ ನ ಆಸುಪಾಸಿನಲ್ಲಿ ಸುಮಾರು 80 ಜನರು ವಾಸಿಸುತ್ತಿದ್ದರು ಎಂಬ ಮಾಹಿತಿಯೂ ಲಭ್ಯವಾಗಿದೆ. ಇವರೆಲ್ಲರೂ ಕಣ್ಣನ್ ದೇವನ್ ಕಂಪೆನಿಗಾಗಿ ಕೆಲಸ ಮಾಡುತ್ತಿದ್ದರು.
ರಾಜಾಮಲೆಯನ್ನು ಮುನ್ನಾರ್ ನೊಂದಿಗೆ ಸಂಪರ್ಕಿಸುವ ಪೆರಿಯಾರ್ ಸೇತುವೆಯೂ ಸಹ ಈ ಗುಡ್ಡ ಕುಸಿತದಿಂದ ಹಾನಿಗೀಡಾಗಿದೆ. ಮತ್ತು ಈ ಭಾಗದಲ್ಲಿದ್ದ ಮೊಬೈಲ್ ಟವರ್ ಸಹ ಘಟನೆಯಿಂದ ಹಾನಿಗೊಳಗಾದ ಕಾರಣ ಈ ಭೀಕರ ಗುಡ್ಡ ಕುಸಿತದ ವಿಚಾರ ಹೊರಜಗತ್ತಿಗೆ ತಿಳಿಯಲು ಸರಿಸುಮಾರು 5 ಗಂಟೆಗಳು ಬೇಕಾಗಿತ್ತು. ಅದೂ ಘಟನಾ ಸ್ಥಳದಿಂದ ತಮ್ಮನ್ನು ರಕ್ಷಿಸಿಕೊಂಡ ಕೆಲವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಬಳಿಕ ಈ ಭೀಕರ ಘಟನೆ ಬೆಳಕಿಗೆ ಬಂದಿತ್ತು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm