ಬ್ರೇಕಿಂಗ್ ನ್ಯೂಸ್
21-07-24 05:45 pm HK News Desk ದೇಶ - ವಿದೇಶ
ಕುವೈತ್, ಜುಲೈ 21: ಕುವೈತ್ ಸಿಟಿಯ ಅಪಾರ್ಟ್ಮೆಂಟ್ ಒಂದರಲ್ಲಿ ಬೆಂಕಿ ಆಕಸ್ಮಿಕ ಉಂಟಾಗಿ ಇಬ್ಬರು ಮಕ್ಕಳು ಸೇರಿ ಕೇರಳ ಮೂಲದ ಒಂದೇ ಕುಟುಂಬದ ನಾಲ್ವರು ದುರಂತ ಸಾವಿಗೀಡಾಗಿದ್ದಾರೆ.
ಆಲಪ್ಪುಝ ಜಿಲ್ಲೆಯ ನೀರಾಟ್ಟುಪುರಂ ನಿವಾಸಿಗಳಾದ ಮ್ಯಾಥ್ಯೂಸ್ ಮುಲಕ್ಕಲ್, ಅವರ ಪತ್ನಿ ಲೀನ್ ಅಬ್ರಹಾಂ ಮತ್ತವರ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಏರ್ ಕಂಡೀಶನರಲ್ಲಿ ಶಾರ್ಟ್ ಸರ್ಕಿಟ್ ಆಗಿ ಬೆಂಕಿ ಹತ್ತಿಕೊಂಡಿದ್ದು ಹೊಗೆಯಿಂದಾಗಿ ಉಸಿರು ಕಟ್ಟಿ ಸಾವನ್ನಪ್ಪಿದ್ದಾರೆ. ಮ್ಯಾಥ್ಯೂಸ್ ಮುಲಕ್ಕಲ್ ಕುವೈತ್ ಸಿಟಿಯಲ್ಲಿ ಕಳೆದ 15 ವರ್ಷಗಳಿಂದ ಉದ್ಯೋಗಿಯಾಗಿದ್ದು, ಬೇಸಿಗೆಯ ರಜೆಯಲ್ಲಿ ಊರಿಗೆ ತೆರಳಿ ಜುಲೈ19ರಂದು ಸಂಜೆ 4 ಗಂಟೆಗೆ ಕುವೈತ್ ತಲುಪಿದ್ದರು. ಅದೇ ದಿನ ರಾತ್ರಿ ಅಪಾರ್ಟ್ಮೆಂಟಿನ ಎರಡನೇ ಮಹಡಿಯಲ್ಲಿದ್ದಾಗಲೇ ಬೆಂಕಿ ಹತ್ತಿಕೊಂಡಿತ್ತು. ಪತ್ನಿ ಲೀನಿ ನರ್ಸ್ ಆಗಿದ್ದರೆ, ಇಬ್ಬರು ಮಕ್ಕಳು ಅಲ್ಲಿಯೇ ಶಾಲೆಗೆ ಹೋಗುತ್ತಿದ್ದರು.
ಭಾರತದ ರಾಯಭಾರ ಕಚೇರಿಯವರು ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದಾರೆ. ಬೇಸಿಗೆ ರಜೆ ಮುಗಿಸಿ ಮರಳಿದ ದಿನವೇ ದುರಂತ ನಡೆದುಹೋಗಿದೆ. ಒಂದು ತಿಂಗಳ ಹಿಂದಷ್ಟೇ ಇದೇ ಪರಿಸರದಲ್ಲಿ ಭಾರತೀಯರು ವಾಸವಿದ್ದ ಅಪಾರ್ಟ್ಮೆಂಟಿಗೆ ಬೆಂಕಿ ಹತ್ತಿಕೊಂಡು 45 ಮಂದಿ ಸಾವಿಗೀಡಾಗಿದ್ದರು. ಈಗ ಅದೇ ಪರಿಸರದ ಮತ್ತೊಂದು ಕಟ್ಟಡದಲ್ಲಿ ಶಾರ್ಟ್ ಸರ್ಕಿಟ್ ಉಂಟಾಗಿ ಬೆಂಕಿ ಹತ್ತಿಕೊಂಡಿದ್ದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ.
In a tragic incident, an Indian couple and their two children were killed in a fire that broke out in their flat in Kuwait City, local authorities said on Saturday. The tragedy happened on Friday night, the same day they returned from Kerala after vacation.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm