ಬ್ರೇಕಿಂಗ್ ನ್ಯೂಸ್
31-07-24 03:36 pm HK News Desk ದೇಶ - ವಿದೇಶ
ವಯನಾಡ್, ಜುಲೈ.31: ಭೀಕರ ಭೂಕುಸಿತ ಸಂಭವಿಸಿದ್ದರಿಂದ ಚೂರಲ್ಮಲ ಎಸ್ಟೇಟ್ ಕ್ವಾಟರ್ಸ್ ಕೊಚ್ಚಿಕೊಂಡು ಹೋಗಿ 9 ಜನ ಕನ್ನಡಿಗರು ನಾಪತ್ತೆಯಗಿದ್ದಾರೆ.
ಗುರುಮಲ್ಲಣ್ಣ (60), ಸಾವಿತ್ರಿ (54), ಸಬೀತಾ (43), ಶಿವಣ್ಣ (50), ಅಪ್ಪಣ್ಣ (39), ಅಶ್ವಿನ್ (13), ಜೀತು (11), ದಿವ್ಯ (35), ರತ್ನ (48) ಜಲಪ್ರಳಯದಲ್ಲಿ ನಾಪತ್ತೆಯಾಗಿರುವ ಕನ್ನಡಿಗರು.
ಘಟನೆಯಲ್ಲಿ 11 ಜನ ನಾಪತ್ತೆಯಾಗಿದ್ದು, ಇಬ್ಬರ ಮೃತದೇಹ ಸಿಕ್ಕಿದೆ. ಇನ್ನೂ 9 ಜನರ ಮೃತದೇಹ ಸಿಗಲಿಲ್ಲ ಎಂದು ತಿಳಿದು ಬಂದಿದೆ.



ನೀರಲ್ಲಿ ಯಾರಿಗೂ ಇಳಿಯುವುದಕ್ಕೆ ಆಗುತ್ತಿಲ್ಲ. ಅವರನ್ನು ಹುಡುಕಬೇಕೆಂದರೆ 90 ಕಿ.ಮೀ. ದೂರ ಹೋಗಿ ಹುಡುಕಬೇಕು. ಆದರೆ ಅವರು ಅಲ್ಲಿ ಇದ್ದಾರೋ, ಇಲ್ವೋ ಗೊತ್ತಿಲ್ಲ? ಇವಾಗ 30-40 ಶವಗಳು ಸಿಕ್ಕಿದ್ದಾವೆ ಎಂದು ಹೇಳುತ್ತಿದ್ದಾರೆ ನೋಡಬೇಕು ಎಂದು ನಾಪತ್ತೆಯಾದವರ ಸಂಬಂಧಿಕ ರವಿ ಅಸಾಹಾಯಕತೆಯನ್ನು ತೊಡಿಕೊಂಡಿದ್ದಾರೆ.
ನಾವು ಸರಕಾರದಿಂದ ಕೊಡಿಸಲಾಗಿದ್ದ ಮನೆಯಲ್ಲಿದ್ದಿವಿ. ನಮ್ಮ ಸಂಬಂಧಿಕರು ಅವರಿದ್ದ ಸ್ವಂತ ಮನೆಯಿಂದ ಕೊಚ್ಚಿಕೊಂಡು ಹೋಗಿದ್ದಾರೆ. ಮನೆಯಲ್ಲಿರುವುದರಿಂದ ಹೀಗೆ ಆಗುವುದಿಲ್ಲವೆಂದು ನಂಬಿ ಅವರು ಅಲ್ಲೇ ಉಳಿದುಕೊಂಡಿದ್ದರು. ಹೀಗೆ ಆಗುತ್ತೆ ಎಂದು ಯಾರು ತಿಳಿದುಕೊಂಡಿಲ್ಲ. ಇವಾಗ ಹೋದವರು ನಮ್ಮ ನಾದಿನಿಯ ಕುಟುಂಬದವರು ಎಂದು ಹೇಳುತ್ತಾ, ನಮ್ಮ ದೊಡ್ಡಪ್ಪನ ಮಗಳು ಮತ್ತು ಭಾವನಿಗೆ ಆಶ್ರಮಕ್ಕೆ ಕರೆದುಕೊಂಡು ಹೋಗಿದ್ದಾರೆ ಎಂದು ದುಃಖತಪ್ತರಾಗಿ ತಿಳಿಸಿದರು.
2018-19 ರಲ್ಲಿಯೂ ಕೂಡ ಇಲ್ಲಿ ಸ್ವಲ್ಪ ಭೂಕುಸಿತ ಸಂಭವಿಸಿತ್ತು. ಅದರ ಅನುಭವ ನಮಗಿದೆ. ಆ ಹೆದರಿಕೆಯಿಂದ ಜನರು ಬೇರೆ ಕಡೆಗೆ ಸ್ಥಳಾಂತರ ಆಗಿದ್ದರು. ನಾವು ಬಂದಾಗ ಹೆಚ್ಚು ಜನ ಕನ್ನಡಿಗರು ಇಲ್ಲಿ ಇದ್ದರು. ಹೀಗೆ ಆಗಿದ್ದರಿಂದ ಇವಾಗ ಎಲ್ಲರೂ ವಾಪಸ್ ಹೋಗಿದ್ದಾರೆ. ಇವಾಗ 500 ಜನ ಕನ್ನಡಿಗರು ಇಲ್ಲಿ ಇರಬಹುದು ಎಂದವರು ನೆನಪಿಸಿಕೊಂಡರು.
ರವಿ ಮತ್ತು ಅವರ ಸಂಬಂಧಿಕರು ಮೂಲತಃ ಕರ್ನಾಟಕದ ಗುಂಡ್ಲುಪೇಟೆಯ ನಿವಾಸಿಯಾಗಿದ್ದಾರೆ. ಕನ್ನಡಿಗರ ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಇನ್ನು ಕೇರಳದಲ್ಲಿ ಉಂಟಾಗಿರುವ ಭೂ ಕುಸಿತದಲ್ಲಿ ಒಟ್ಟು 9 ಮಂದಿ ಕನ್ನಡಿಗರ ಶವ ಪತ್ತೆಯಾಗಿವೆ. ಚಾಮರಾಜನಗರ ಮೂಲದ ನಾಲ್ವರು, ಮಂಡ್ಯ ಜಿಲ್ಲೆಯ ಮೂವರು, ಕೆಆರ್ ಪೇಟೆ ಮೂಲದ ಇಬ್ಬರು ಕನ್ನಡಿಗರು ಸಾವನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Kerala Wayanad landslide, nine from Karnataka found dead. Four people from chamarajanagar, three from mandya and two from KR Pete.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
18-04-26 10:37 pm
HK News Staffer
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm