ಬ್ರೇಕಿಂಗ್ ನ್ಯೂಸ್
31-07-24 03:36 pm HK News Desk ದೇಶ - ವಿದೇಶ
ವಯನಾಡ್, ಜುಲೈ.31: ಭೀಕರ ಭೂಕುಸಿತ ಸಂಭವಿಸಿದ್ದರಿಂದ ಚೂರಲ್ಮಲ ಎಸ್ಟೇಟ್ ಕ್ವಾಟರ್ಸ್ ಕೊಚ್ಚಿಕೊಂಡು ಹೋಗಿ 9 ಜನ ಕನ್ನಡಿಗರು ನಾಪತ್ತೆಯಗಿದ್ದಾರೆ.
ಗುರುಮಲ್ಲಣ್ಣ (60), ಸಾವಿತ್ರಿ (54), ಸಬೀತಾ (43), ಶಿವಣ್ಣ (50), ಅಪ್ಪಣ್ಣ (39), ಅಶ್ವಿನ್ (13), ಜೀತು (11), ದಿವ್ಯ (35), ರತ್ನ (48) ಜಲಪ್ರಳಯದಲ್ಲಿ ನಾಪತ್ತೆಯಾಗಿರುವ ಕನ್ನಡಿಗರು.
ಘಟನೆಯಲ್ಲಿ 11 ಜನ ನಾಪತ್ತೆಯಾಗಿದ್ದು, ಇಬ್ಬರ ಮೃತದೇಹ ಸಿಕ್ಕಿದೆ. ಇನ್ನೂ 9 ಜನರ ಮೃತದೇಹ ಸಿಗಲಿಲ್ಲ ಎಂದು ತಿಳಿದು ಬಂದಿದೆ.



ನೀರಲ್ಲಿ ಯಾರಿಗೂ ಇಳಿಯುವುದಕ್ಕೆ ಆಗುತ್ತಿಲ್ಲ. ಅವರನ್ನು ಹುಡುಕಬೇಕೆಂದರೆ 90 ಕಿ.ಮೀ. ದೂರ ಹೋಗಿ ಹುಡುಕಬೇಕು. ಆದರೆ ಅವರು ಅಲ್ಲಿ ಇದ್ದಾರೋ, ಇಲ್ವೋ ಗೊತ್ತಿಲ್ಲ? ಇವಾಗ 30-40 ಶವಗಳು ಸಿಕ್ಕಿದ್ದಾವೆ ಎಂದು ಹೇಳುತ್ತಿದ್ದಾರೆ ನೋಡಬೇಕು ಎಂದು ನಾಪತ್ತೆಯಾದವರ ಸಂಬಂಧಿಕ ರವಿ ಅಸಾಹಾಯಕತೆಯನ್ನು ತೊಡಿಕೊಂಡಿದ್ದಾರೆ.
ನಾವು ಸರಕಾರದಿಂದ ಕೊಡಿಸಲಾಗಿದ್ದ ಮನೆಯಲ್ಲಿದ್ದಿವಿ. ನಮ್ಮ ಸಂಬಂಧಿಕರು ಅವರಿದ್ದ ಸ್ವಂತ ಮನೆಯಿಂದ ಕೊಚ್ಚಿಕೊಂಡು ಹೋಗಿದ್ದಾರೆ. ಮನೆಯಲ್ಲಿರುವುದರಿಂದ ಹೀಗೆ ಆಗುವುದಿಲ್ಲವೆಂದು ನಂಬಿ ಅವರು ಅಲ್ಲೇ ಉಳಿದುಕೊಂಡಿದ್ದರು. ಹೀಗೆ ಆಗುತ್ತೆ ಎಂದು ಯಾರು ತಿಳಿದುಕೊಂಡಿಲ್ಲ. ಇವಾಗ ಹೋದವರು ನಮ್ಮ ನಾದಿನಿಯ ಕುಟುಂಬದವರು ಎಂದು ಹೇಳುತ್ತಾ, ನಮ್ಮ ದೊಡ್ಡಪ್ಪನ ಮಗಳು ಮತ್ತು ಭಾವನಿಗೆ ಆಶ್ರಮಕ್ಕೆ ಕರೆದುಕೊಂಡು ಹೋಗಿದ್ದಾರೆ ಎಂದು ದುಃಖತಪ್ತರಾಗಿ ತಿಳಿಸಿದರು.
2018-19 ರಲ್ಲಿಯೂ ಕೂಡ ಇಲ್ಲಿ ಸ್ವಲ್ಪ ಭೂಕುಸಿತ ಸಂಭವಿಸಿತ್ತು. ಅದರ ಅನುಭವ ನಮಗಿದೆ. ಆ ಹೆದರಿಕೆಯಿಂದ ಜನರು ಬೇರೆ ಕಡೆಗೆ ಸ್ಥಳಾಂತರ ಆಗಿದ್ದರು. ನಾವು ಬಂದಾಗ ಹೆಚ್ಚು ಜನ ಕನ್ನಡಿಗರು ಇಲ್ಲಿ ಇದ್ದರು. ಹೀಗೆ ಆಗಿದ್ದರಿಂದ ಇವಾಗ ಎಲ್ಲರೂ ವಾಪಸ್ ಹೋಗಿದ್ದಾರೆ. ಇವಾಗ 500 ಜನ ಕನ್ನಡಿಗರು ಇಲ್ಲಿ ಇರಬಹುದು ಎಂದವರು ನೆನಪಿಸಿಕೊಂಡರು.
ರವಿ ಮತ್ತು ಅವರ ಸಂಬಂಧಿಕರು ಮೂಲತಃ ಕರ್ನಾಟಕದ ಗುಂಡ್ಲುಪೇಟೆಯ ನಿವಾಸಿಯಾಗಿದ್ದಾರೆ. ಕನ್ನಡಿಗರ ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಇನ್ನು ಕೇರಳದಲ್ಲಿ ಉಂಟಾಗಿರುವ ಭೂ ಕುಸಿತದಲ್ಲಿ ಒಟ್ಟು 9 ಮಂದಿ ಕನ್ನಡಿಗರ ಶವ ಪತ್ತೆಯಾಗಿವೆ. ಚಾಮರಾಜನಗರ ಮೂಲದ ನಾಲ್ವರು, ಮಂಡ್ಯ ಜಿಲ್ಲೆಯ ಮೂವರು, ಕೆಆರ್ ಪೇಟೆ ಮೂಲದ ಇಬ್ಬರು ಕನ್ನಡಿಗರು ಸಾವನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Kerala Wayanad landslide, nine from Karnataka found dead. Four people from chamarajanagar, three from mandya and two from KR Pete.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:07 pm
Mangalore Correspondent
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm