ಬ್ರೇಕಿಂಗ್ ನ್ಯೂಸ್
31-07-24 08:15 pm HK News Desk ದೇಶ - ವಿದೇಶ
ಮುಂಬೈ, ಜುಲೈ.31: ಮಹಾರಾಷ್ಟ್ರದ ವಿವಾದಿತ ಪ್ರೊಬೇಶನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ನೇಮಕಾತಿಯನ್ನು ಕೇಂದ್ರ ಲೋಕಸೇವಾ ಆಯೋಗವು ರದ್ದುಪಡಿಸಿದ್ದು, ಆಕೆ ಭವಿಷ್ಯದಲ್ಲಿ ಯಾವುದೇ ಲೋಕಸೇವಾ ಆಯೋಗದ ಪರೀಕ್ಷೆಯನ್ನು ತೆಗೆದುಕೊಳ್ಳುವುದನ್ನ ನಿರ್ಬಂಧಿಸಿದೆ. ಇತ್ತೀಚೆಗಷ್ಟೇ ಪೂಜಾಗೆ ಯುಪಿಎಸ್ಸಿ ಶೋಕಾಸ್ ನೋಟಿಸ್ ಜಾರಿ ಮಾಡಿತ್ತು.
ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್ಸಿ) ಖೇಡ್ಕರ್ ವಿರುದ್ಧ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿತ್ತು. ನಕಲಿ ದಾಖಲೆಗಳ ಮೂಲಕ ಸಿವಿಲ್ ಸರ್ವೀಸ್ ಪರೀಕ್ಷೆಯನ್ನು ನಿಗದಿಗಿಂತ ಹೆಚ್ಚಿನ ಪ್ರಯತ್ನಗಳನ್ನು ಪಡೆದಿದ್ದಾಳೆ ಎಂದು ಆರೋಪಿಸಲಾಗಿತ್ತು.
ದೆಹಲಿ ಪೊಲೀಸ್ ಕ್ರೈಂ ಬ್ರಾಂಚ್ ಜುಲೈ 19 ರಂದು ಖೇಡ್ಕರ್ ಅವರನ್ನು ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ ಉಮೇದುವಾರಿಕೆ ಪಡೆಯಲು ಅಂಗವೈಕಲ್ಯ ಮತ್ತು ಇತರ ಹಿಂದುಳಿದ ವರ್ಗಗಳ (ಕೆನೆಪದರವಲ್ಲದ) ಕೋಟಾಗಳನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಕೇಸ್ ದಾಖಲಿಸಿತ್ತು.
ಲಭ್ಯವಿರುವ ದಾಖಲೆಗಳನ್ನು ಪರಿಶೀಲಿಸಿದ ಬಳಿಕ, ಯುಪಿಎಸ್ಸಿ-2022 ನಿಯಮಗಳ ನಿಬಂಧನೆಗಳಿಗೆ ವಿರುದ್ಧವಾಗಿ ವರ್ತಿಸಿದ್ದು ಮೇಲ್ನೋಟಕ್ಕೆ ತಪ್ಪಿತಸ್ಥರೆಂದು ಕಂಡುಬಂದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಯುಪಿಎಸ್ ಸಿ ಹೇಳಿದೆ. 2022 ರಲ್ಲಿ ಆಯ್ಕೆಯಾದ ಪೂಜಾ ಖೇಡ್ಕರ್ ಅವರ ತಾತ್ಕಾಲಿಕ ನೇಮಕಾತಿಯನ್ನು ರದ್ದುಗೊಳಿಸಲಾಗಿದೆ ಮತ್ತು ಮುಂದಿನ ಎಲ್ಲಾ ಪರೀಕ್ಷೆಗಳಿಂದ ಶಾಶ್ವತವಾಗಿ ಡಿಬಾರ್ ಮಾಡಲಾಗಿದೆ ಎಂದು ಯುಪಿಎಸ್ಸಿ ಅಧಿಕೃತ ಹೇಳಿಕೆ ನೀಡಿದೆ.
The selection of Puja Khedkar as a trainee IAS officer has been cancelled and she has been barred for taking the entrance exam for life after the Union Public Service Commission (UPSC) found her guilty of faking her identity to take the exam multiple times.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 07:25 pm
HK News Staffer
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ; ಒಂದು ವರ್ಷದ ಬಳಿಕ...
15-07-26 07:40 pm