ಬ್ರೇಕಿಂಗ್ ನ್ಯೂಸ್
08-08-24 07:44 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 8: ಬಾಂಗ್ಲಾ ರಾಜಧಾನಿಯಲ್ಲಿ ಹಿಂಸಾಚಾರ ಭುಗಿಲೆದ್ದು ಪ್ರಧಾನಿ ನಿವಾಸಕ್ಕೆ ಪ್ರತಿಭಟನಾಕಾರರು ನುಗ್ಗುತ್ತಾರೆ ಎಂದು ತಿಳಿಯುತ್ತಲೇ ಆರ್ಮಿಯಿಂದ ಪ್ರಧಾನಿ ಶೇಖ್ ಹಸೀನಾ ಅವರು ದೇಶ ತೊರೆಯುವುದಕ್ಕೆ ಕೇವಲ 45 ನಿಮಿಷ ನೀಡಲಾಗಿತ್ತು. ಇದರಿಂದಾಗಿ ಶಾಕ್ ಆಗಿದ್ದ ಶೇಖ್ ಹಸೀನಾ ಏನು ಮಾಡುವುದೆಂದು ತೋಚದೆ ತನ್ನ ಬಟ್ಟೆಬರೆ, ಇನ್ನಿತರ ಅಗತ್ಯ ವಸ್ತುಗಳನ್ನೆಲ್ಲ ಬಿಟ್ಟು ಉಟ್ಟ ಬಟ್ಟೆಯಲ್ಲೇ ದೇಶ ತೊರೆದಿದ್ದರು ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯಾ ಟುಡೇ ವರದಿ ಮಾಡಿದೆ.
ಆರ್ಮಿ ಸೂಚನೆ ಸಿಗುತ್ತಲೇ ತನ್ನ ಸೋದರಿ ಶೇಖ್ ರೆಹನಾ ಮತ್ತು ಇತರ ಆಪ್ತರ ಜೊತೆಗೆ ದೇಶ ತೊರೆದು ಸೇನೆಯ ಹೆಲಿಕಾಪ್ಟರ್ ನಲ್ಲಿ ನೇರವಾಗಿ ಭಾರತಕ್ಕೆ ಬಂದಿದ್ದರು. ಈ ನಡುವೆ, ಇಂಗ್ಲೆಂಡ್ ಗೆ ಹಾರಲು ಅಲ್ಲಿನ ಸರಕಾರದ ಅನುಮತಿ ಕೇಳಿದ್ದರು. ಆದರೆ, ಅವಕಾಶ ಸಿಗದೇ ಇದ್ದುದರಿಂದ ಭಾರತದ ಗಾಜಿಯಾಬಾದ್ ನಲ್ಲಿರುವ ವಾಯುನೆಲೆಗೆ ಬಂದು ಇಳಿದಿದ್ದರು. ಪ್ರಧಾನಿ ನಿವಾಸಕ್ಕೆ ಪ್ರತಿಭಟನಾಕಾರರು ನುಗ್ಗುತ್ತಾರೆಂಬ ಭಯದಲ್ಲಿ ಶೇಖ್ ಹಸೀನಾ ಮತ್ತು ಜೊತೆಗಿದ್ದವರು ಗಡಿಬಿಡಿಯಲ್ಲೇ ದೇಶ ತೊರೆದಿದ್ದರು ಎಂದು ಮೂಲಗಳು ತಿಳಿಸಿವೆ.
ಗಾಜಿಯಾಬಾದ್ ವಾಯುನೆಲೆ ಬಳಿಯಲ್ಲೇ ಭಾರತೀಯ ಸೇನೆಯ ಭದ್ರತೆಯಲ್ಲಿ ಶೇಖ್ ಹಸೀನಾ ಉಳಿದುಕೊಂಡಿದ್ದಾರೆ. 48 ಗಂಟೆಯ ಬಳಿಕ ಹಸೀನಾ ಅವರಿಗಾಗಿ ಬಟ್ಟೆ, ಇನ್ನಿತರ ಡೈಲೀ ಬಳಕೆಯ ವಸ್ತುಗಳನ್ನು ಜೊತೆಗೆ ಬಂದಿದ್ದ ಪ್ರೋಟೋಕಾಲ್ ಸಿಬಂದಿ ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ಖರೀದಿಸಿದ್ದಾರೆ. ಹಸೀನಾ ಬೇರೆ ದೇಶಕ್ಕೆ ತೆರಳುವ ತನಕವೂ ಭಾರತದಲ್ಲಿ ಭದ್ರತೆ ನೀಡುವುದಕ್ಕೆ ಕೇಂದ್ರ ಸರಕಾರ ಒಪ್ಪಿದೆ. ಅಲ್ಲದೆ, ಆಗಿರುವ ಶಾಕ್ ನಿಂದ ಹೊರಬರಲು ಮತ್ತು ಒತ್ತಡ ನಿವಾರಿಸಿಕೊಳ್ಳಲು ಭಾರತೀಯ ಸೆಕ್ಯುರಿಟಿ ಸಿಬಂದಿಯೂ ಸಹಕಾರ ನೀಡಿದ್ದಾರೆ.
ಇತ್ತ ಇಂಗ್ಲೆಂಡ್ ಸರಕಾರ ಶೇಖ್ ಹಸೀನಾ ತಮ್ಮಲ್ಲಿಗೆ ಬರುವುದಕ್ಕೆ ಅನುಮತಿ ನೀಡಿಲ್ಲ. ಶೇಖ್ ಹಸೀನಾ ಅವರ ಪುತ್ರ ಸೇರಿದಂತೆ ಕುಟುಂಬಸ್ಥರು ಅಲ್ಲಿ ನೆಲೆಸಿದ್ದರೂ, ಬಾಂಗ್ಲಾದಿಂದ ತಪ್ಪಿಸಿಕೊಂಡು ಬಂದಿರುವ ಶೇಖ್ ಹಸೀನಾಗೆ ಆಶ್ರಯ ನೀಡಲು ನಿರಾಕರಣೆ ಮಾಡಿದೆ. ಹೀಗಾಗಿ ತ್ರಿಶಂಕು ಸ್ಥಿತಿಯಲ್ಲಿರುವ ಹಸೀನಾ ಯುರೋಪ್ ಖಂಡದ ಬೇರಾವುದೇ ದೇಶಕ್ಕೆ ತೆರಳುವುದಕ್ಕೆ ಮುಂದಾಗಿದ್ದಾರೆ. ಫಿನ್ಲೆಂಡ್ ನಲ್ಲಿಯೂ ಶೇಖ್ ಹಸೀನಾ ಕುಟುಂಬಸ್ಥರು ನೆಲೆಸಿದ್ದು, ಅಲ್ಲಿ ತೆರಳುವ ಸಾಧ್ಯತೆಯೂ ಇದೆ. ಇದೇ ವೇಳೆ, ಬಾಂಗ್ಲಾದಲ್ಲಿ ಹಂಗಾಮಿ ಸರಕಾರ ನಡೆಸಲು ಕಸರತ್ತು ನಡೆದಿದ್ದು ಹಂಗಾಮಿ ಮುಖ್ಯಸ್ಥರಾಗಿರುವ ಮೊಹಮ್ಮದ್ ಯೂನಿ
Former Bangladesh Prime Minister Sheikh Hasina and her team, who reached India on Monday fleeing a violent uprising against her Awami League government, could not even carry extra clothes or daily use items, government sources.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 08:12 pm
Mangalore Correspondent
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm