ಬ್ರೇಕಿಂಗ್ ನ್ಯೂಸ್
10-08-24 09:35 pm HK News Desk ದೇಶ - ವಿದೇಶ
ಢಾಕಾ, ಆಗಸ್ಟ್ 10: ಶೇಖ್ ಹಸೀನಾ ದೇಶ ಬಿಟ್ಟು ಹೋದ ಬಳಿಕ ಅವರ ಪರವಾಗಿದ್ದರು ಎನ್ನಲಾದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಒಬೈದುಲ್ ಹಸನ್ ಈಗ ಹೋರಾಟಗಾರರ ಟಾರ್ಗೆಟ್ ಆಗಿದ್ದಾರೆ. ಮುಖ್ಯ ನ್ಯಾಯಮೂರ್ತಿ ಹಾಗೂ ಇತರ ನ್ಯಾಯಾಧೀಶರು ರಾಜೀನಾಮೆ ನೀಡುವಂತೆ ಆಗ್ರಹಿಸಿ ಶನಿವಾರ ಬೆಳಗ್ಗೆ ವಿದ್ಯಾರ್ಥಿ ಮುಖಂಡರು, ವಕೀಲರು ಸುಪ್ರೀಂ ಕೋರ್ಟ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನಾಕಾರರು ಸುಪ್ರೀಂ ಕೋರ್ಟ್ ಹೊರಗೆ ನಿಂತು ಪ್ರತಿಭಟಿಸಿದ್ದು, ರಾಜಿನಾಮೆ ನೀಡದೇ ಇದ್ದರೆ ನ್ಯಾಯಾಧೀಶರ ನಿವಾಸಗಳ ಮೇಲೆ ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಮಧ್ಯಾಹ್ನ ಒಂದು ಗಂಟೆ ವರೆಗೆ ಗಡುವು ನೀಡಿದ್ದರು. ಆನಂತರ, ಹೋರಾಟಗಾರರ ಭಯದಿಂದಾಗಿ ನ್ಯಾಯಾಧೀಶರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುವುದಕ್ಕೆ ಒಪ್ಪಿದ್ದಾರೆ.
ಕಳೆದ ವರ್ಷವಷ್ಟೇ ಒಬೈದುಲ್ ಹಸನ್ ಅವರನ್ನು ಶೇಖ್ ಹಸೀನಾ ಮುಖ್ಯ ನ್ಯಾಯಾಧೀಶರಾಗಿ ನೇಮಕ ಮಾಡಿದ್ದರು. ಶೇಖ್ ಹಸೀನಾ ಅವರ ನಿರ್ಗಮನದ ನಂತರ, ರಾಷ್ಟ್ರೀಯ ಪೊಲೀಸ್ ಮುಖ್ಯಸ್ಥ ಮತ್ತು ಕೇಂದ್ರ ಬ್ಯಾಂಕ್ ಗವರ್ನರ್ ಸೇರಿದಂತೆ ಬಾಂಗ್ಲಾದೇಶದ ಅನೇಕ ಉನ್ನತ ಅಧಿಕಾರಿಗಳನ್ನು ಕಚೇರಿಯಿಂದ ಹೊರಹಾಕಲಾಗಿದೆ. ಇದರ ಬೆನ್ನಲ್ಲೇ ಮುಖ್ಯ ನ್ಯಾಯಾಧೀಶರ ವಿರುದ್ಧ ಆಕ್ರೋಶ ತಿರುಗಿತ್ತು.
ಕಳೆದ ವರ್ಷ ನೇಮಕಗೊಂಡ ಒಬೈದುಲ್ ಹಸನ್ ಅವರು ಈ ಹಿಂದೆ ಯುದ್ಧ ಅಪರಾಧಗಳ ನ್ಯಾಯಮಂಡಳಿ ಪ್ರಕರಣವನ್ನು ಆಲಿಸಿದ್ದರು. ಈ ವೇಳೆ ಶೇಖ್ ಹಸೀನಾ ಅವರ ವಿರೋಧಿಗಳನ್ನು ಗಲ್ಲಿಗೇರಿಸಲು ಆದೇಶ ನೀಡಲಾಗಿತ್ತು. ಇದು ಸಾಕಷ್ಟು ಟೀಕೆಗೂ ಒಳಗಾಗಿತ್ತು. ಅಂದಿನಿಂದ ಒಬೇದುಲ್ಲಾ ಅವರು ಶೇಖ್ ಹಸೀನಾ ವಿರೋಧಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಯೂನಸ್ ಸರ್ಕಾರದ ಭಾಗವಾಗಿರುವ ವಿದ್ಯಾರ್ಥಿ ನಾಯಕ ಆಸಿಫ್ ನಜ್ರುಲ್ ಸುದ್ದಿಗಾರರೊಂದಿಗೆ ಮಾತನಾಡಿ, ವಿದ್ಯಾರ್ಥಿಗಳು ಮತ್ತು ಜನರ ದೊಡ್ಡ ಪ್ರಮಾಣದ ದಂಗೆಗೆ ಹಾನಿಯಾಗುವ ಯಾವುದನ್ನೂ ಯಾರೂ ಮಾಡಬಾರದು ಎಂದು ಹೇಳಿದ್ದಾರೆ.
The chief justice of Bangladesh’s top court has said he agreed “in principle” to resign after an ultimatum from protesters, days after Prime Minister Sheikh Hasina fled to neighbouring India.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 05:10 pm
HK News Staffer
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ; ಒಂದು ವರ್ಷದ ಬಳಿಕ...
15-07-26 07:40 pm
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm