ಬ್ರೇಕಿಂಗ್ ನ್ಯೂಸ್
10-08-24 09:35 pm HK News Desk ದೇಶ - ವಿದೇಶ
ಢಾಕಾ, ಆಗಸ್ಟ್ 10: ಶೇಖ್ ಹಸೀನಾ ದೇಶ ಬಿಟ್ಟು ಹೋದ ಬಳಿಕ ಅವರ ಪರವಾಗಿದ್ದರು ಎನ್ನಲಾದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಒಬೈದುಲ್ ಹಸನ್ ಈಗ ಹೋರಾಟಗಾರರ ಟಾರ್ಗೆಟ್ ಆಗಿದ್ದಾರೆ. ಮುಖ್ಯ ನ್ಯಾಯಮೂರ್ತಿ ಹಾಗೂ ಇತರ ನ್ಯಾಯಾಧೀಶರು ರಾಜೀನಾಮೆ ನೀಡುವಂತೆ ಆಗ್ರಹಿಸಿ ಶನಿವಾರ ಬೆಳಗ್ಗೆ ವಿದ್ಯಾರ್ಥಿ ಮುಖಂಡರು, ವಕೀಲರು ಸುಪ್ರೀಂ ಕೋರ್ಟ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನಾಕಾರರು ಸುಪ್ರೀಂ ಕೋರ್ಟ್ ಹೊರಗೆ ನಿಂತು ಪ್ರತಿಭಟಿಸಿದ್ದು, ರಾಜಿನಾಮೆ ನೀಡದೇ ಇದ್ದರೆ ನ್ಯಾಯಾಧೀಶರ ನಿವಾಸಗಳ ಮೇಲೆ ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಮಧ್ಯಾಹ್ನ ಒಂದು ಗಂಟೆ ವರೆಗೆ ಗಡುವು ನೀಡಿದ್ದರು. ಆನಂತರ, ಹೋರಾಟಗಾರರ ಭಯದಿಂದಾಗಿ ನ್ಯಾಯಾಧೀಶರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುವುದಕ್ಕೆ ಒಪ್ಪಿದ್ದಾರೆ.
ಕಳೆದ ವರ್ಷವಷ್ಟೇ ಒಬೈದುಲ್ ಹಸನ್ ಅವರನ್ನು ಶೇಖ್ ಹಸೀನಾ ಮುಖ್ಯ ನ್ಯಾಯಾಧೀಶರಾಗಿ ನೇಮಕ ಮಾಡಿದ್ದರು. ಶೇಖ್ ಹಸೀನಾ ಅವರ ನಿರ್ಗಮನದ ನಂತರ, ರಾಷ್ಟ್ರೀಯ ಪೊಲೀಸ್ ಮುಖ್ಯಸ್ಥ ಮತ್ತು ಕೇಂದ್ರ ಬ್ಯಾಂಕ್ ಗವರ್ನರ್ ಸೇರಿದಂತೆ ಬಾಂಗ್ಲಾದೇಶದ ಅನೇಕ ಉನ್ನತ ಅಧಿಕಾರಿಗಳನ್ನು ಕಚೇರಿಯಿಂದ ಹೊರಹಾಕಲಾಗಿದೆ. ಇದರ ಬೆನ್ನಲ್ಲೇ ಮುಖ್ಯ ನ್ಯಾಯಾಧೀಶರ ವಿರುದ್ಧ ಆಕ್ರೋಶ ತಿರುಗಿತ್ತು.
ಕಳೆದ ವರ್ಷ ನೇಮಕಗೊಂಡ ಒಬೈದುಲ್ ಹಸನ್ ಅವರು ಈ ಹಿಂದೆ ಯುದ್ಧ ಅಪರಾಧಗಳ ನ್ಯಾಯಮಂಡಳಿ ಪ್ರಕರಣವನ್ನು ಆಲಿಸಿದ್ದರು. ಈ ವೇಳೆ ಶೇಖ್ ಹಸೀನಾ ಅವರ ವಿರೋಧಿಗಳನ್ನು ಗಲ್ಲಿಗೇರಿಸಲು ಆದೇಶ ನೀಡಲಾಗಿತ್ತು. ಇದು ಸಾಕಷ್ಟು ಟೀಕೆಗೂ ಒಳಗಾಗಿತ್ತು. ಅಂದಿನಿಂದ ಒಬೇದುಲ್ಲಾ ಅವರು ಶೇಖ್ ಹಸೀನಾ ವಿರೋಧಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಯೂನಸ್ ಸರ್ಕಾರದ ಭಾಗವಾಗಿರುವ ವಿದ್ಯಾರ್ಥಿ ನಾಯಕ ಆಸಿಫ್ ನಜ್ರುಲ್ ಸುದ್ದಿಗಾರರೊಂದಿಗೆ ಮಾತನಾಡಿ, ವಿದ್ಯಾರ್ಥಿಗಳು ಮತ್ತು ಜನರ ದೊಡ್ಡ ಪ್ರಮಾಣದ ದಂಗೆಗೆ ಹಾನಿಯಾಗುವ ಯಾವುದನ್ನೂ ಯಾರೂ ಮಾಡಬಾರದು ಎಂದು ಹೇಳಿದ್ದಾರೆ.
The chief justice of Bangladesh’s top court has said he agreed “in principle” to resign after an ultimatum from protesters, days after Prime Minister Sheikh Hasina fled to neighbouring India.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 08:12 pm
Mangalore Correspondent
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm