ಬ್ರೇಕಿಂಗ್ ನ್ಯೂಸ್
08-12-20 04:48 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿಸೆಂಬರ್ 08: ಕೇಂದ್ರ ಸರ್ಕಾರದ ಹೊಸ ಕೃಷಿ ನೀತಿಗಳ ವಿರುದ್ಧ ಭಾರಿ ಹೋರಾಟ ನಡೆಯುತ್ತಿದೆ. ದೇಶಾದ್ಯಂತ ರೈತರು ಮಂಗಳವಾರ ಭಾರತ್ ಬಂದ್ ನಡೆಸಿದ್ದಾರೆ. ಬಂದ್ಗೆ ವ್ಯಾಪಕ ಬೆಂಬಲ ಸಿಕ್ಕಿದೆ.
ಕೇಂದ್ರ ಸರ್ಕಾರದ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಮಾತುಕತೆಗೆ ಆಹ್ವಾನಿಸಿದೆ. ಮಂಗಳವಾರ ಸಂಜೆ 7 ಗಂಟೆಗೆ ಮಾತುಕತೆಗೆ ಬರುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ರೈತರಿಗೆ ಕರೆ ನೀಡಿದ್ದಾರೆ.
ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ 11ನೇ ದಿನಕ್ಕೆ ಕಾಲಿಟ್ಟಿದೆ. ಕೇಂದ್ರ ಸರ್ಕಾರದ ಜೊತೆ ರೈತರು ನಡೆಸಿದ 5 ಸುತ್ತಿನ ಮಾತುಕತೆ ವಿಫಲವಾಗಿದೆ. ಡಿಸೆಂಬರ್ 9ರಂದು 6ನೇ ಸುತ್ತಿನ ಮಾತುಕತೆ ನಿಗದಿಯಾಗಿದೆ.

ಆದರೆ, ಮಂಗಳವಾರ ರೈತರು ಭಾರತ್ ಬಂದ್ ನಡೆಸಿದ ಹಿನ್ನಲೆಯಲ್ಲಿ ಸಂಜೆ ಅವರ ಜೊತೆ ಗೃಹ ಸಚಿವ ಅಮಿತ್ ಶಾ ಮಾತುಕತೆ ನಡೆಸಲಿದ್ದಾರೆ. ಈ ಮಾತುಕತೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
"ಅಮಿತ್ ಶಾ ಅವರು ದೂರವಾಣಿ ಕರೆ ಮಾಡಿದ್ದರು. ಸಂಜೆ 7 ಗಂಟೆಗೆ ಮಾತುಕತೆಗೆ ಬರುವಂತೆ ಆಹ್ವಾನ ನೀಡಿದ್ದಾರೆ. ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಮಾತುಕತೆಗೆ ಹೋಗಲಿದ್ದಾರೆ" ಎಂದು ರೈತ ಮುಖಂಡ ರಾಕೇಶ್ ತಿಕೈಟ್ ಹೇಳಿದರು.
ಮಂಗಳವಾರ ರೈತರು ಕರೆ ನೀಡಿದ್ದ ಭಾರತ್ ಬಂದ್ಗೆ ಪ್ರತಿಪಕ್ಷಗಳಾದ ಕಾಂಗ್ರೆಸ್, ಎಎಪಿ, ಡಿಎಂಕೆ, ಟಿಆರ್ಎಸ್ ಬೆಂಬಲ ನೀಡಿದ್ದವು. ಹಲವಾರು ಸಂಘಟನೆಗಳು ಸಹ ಬಂದ್ ಬೆಂಬಲಿಸಿದ್ದವು. ಆದ್ದರಿಂದ, ಈ ವಿಚಾರ ಗಂಭೀರವಾಗಿದೆ.

ಶನಿವಾರ ಕೇಂದ್ರ ಕೃಷಿ ಸಚಿವರು ಪ್ರತಿಭಟನೆ ನಡೆಸುತ್ತಿರುವ ರೈತರ ಜೊತೆ ಮಾತುಕತೆ ನಡೆಸಿದ್ದರು. ಕೃಷಿ ನೀತಿಗಳನ್ನು ವಾಪಸ್ ಪಡೆಯುತ್ತಿರೋ?, ಇಲ್ಲವೋ? ಎಂಬ ಬೋರ್ಡ್ಗಳನ್ನು ಹಿಡಿದು ರೈತರು ಸಭೆಯಲ್ಲಿ ಪಾಲ್ಗೊಂಡಿದ್ದರು. ಮಾತುಕತೆ ವಿಫಲವಾಗಿತ್ತು.
ಕೃಷಿ ಸಚಿವರು ಡಿಸೆಂಬರ್ 9ರಂದು ಮತ್ತೊಮ್ಮೆ ರೈತರ ಜೊತೆ ಮಾತುಕತೆ ನಡೆಸಲಾಗುತ್ತದೆ ಎಂದು ಹೇಳಿದ್ದರು. ರೈತರು ರಸ್ತೆಯಲ್ಲಿಯೇ ಪ್ರತಿಭಟನೆಯನ್ನು ಮುಂದುವರೆಸಿದ್ದರು. ಆದರೆ, ಒಂದು ದಿನ ಮೊದಲೇ ಸರ್ಕಾರ ಮಾತುಕತೆಗೆ ಕರೆದಿದೆ.
Home Minister Amit Shah has called farmers for talks this evening, a day before the government's sixth round of negotiations to end massive protests against farm laws.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm