ಬ್ರೇಕಿಂಗ್ ನ್ಯೂಸ್
16-08-24 12:07 pm H K News Desk ದೇಶ - ವಿದೇಶ
ನಾಗಪುರ, ಆಗಸ್ಟ್ 16: ಬಾಂಗ್ಲಾದೇಶದಲ್ಲಿ ಹಿಂದೂ ಅಲ್ಪಸಂಖ್ಯಾತ ಸಮುದಾಯದ ರಕ್ಷಣೆಯನ್ನು ಭಾರತ ಖಚಿತಪಡಿಸಿಕೊಳ್ಳಬೇಕು. ಆ ಜವಾಬ್ದಾರಿ ಭಾರತಕ್ಕಿದೆ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್ಎಸ್ಎಸ್)ದ ಪ್ರಧಾನ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ಮಾಡಿ ಭಾಗವತ್ ಈ ಮಾತುಗಳನ್ನು ಹೇಳಿದ್ದಾರೆ. ಬಾಂಗ್ಲಾ ದೇಶದಲ್ಲಿ ಹಿಂದೂಗಳು ಯಾವುದೇ ಅನ್ಯಾಯ ಮತ್ತು ದೌರ್ಜನ್ಯಗಳನ್ನು ಎದುರಿಸದಂತೆ ನೋಡಿಕೊಳ್ಳುವ ಜವಾಬ್ದಾರಿ ಭಾರತದ್ದಾಗಿದೆ. ಅಲ್ಲಿನ ಹಿಂದುಗಳ ರಕ್ಷಣೆಯನ್ನು ಭಾರತ ಸರ್ಕಾರ ಖಚಿತಪಡಿಸಿಕೊಳ್ಳಬೇಕು ಎಂದರು.
ಮುಂಬರುವ ಪೀಳಿಗೆಯು 'ಸ್ವತಂತ್ರ'(ಸ್ವಾತಂತ್ರ್ಯ) ಪದದ 'ಸ್ವಾ'ವನ್ನು ರಕ್ಷಿಸುವ ಕರ್ತವ್ಯ ಹೊಂದಿದೆ. ಏಕೆಂದರೆ ಜಗತ್ತಿನಲ್ಲಿ ಯಾವಾಗಲೂ ಇತರ ದೇಶಗಳ ಮೇಲೆ ಪ್ರಾಬಲ್ಯ ಸಾಧಿಸಲು ಬಯಸುವ ಜನ ಇರುತ್ತಾರೆ. ಹೀಗಾಗಿ ನಾವು ಜಾಗರೂಕರಾಗಿರಬೇಕು ಮತ್ತು ಅವರಿಂದ ನಮ್ಮನ್ನು ರಕ್ಷಿಸಿಕೊಳ್ಳಬೇಕು ಎಂದರು.
ಪರಿಸ್ಥಿತಿ ಎಲ್ಲ ಕಾಲದಲ್ಲೂ ಒಂದೇ ರೀತಿ ಇರುವುದಿಲ್ಲ. ನಾವು ಈಗ ನೆರೆಯ ದೇಶದ ಪರಿಸ್ಥಿತಿಯನ್ನು ನೋಡುತ್ತಿದ್ದೇವೆ. ಅಲ್ಲಿ ಸಾಕಷ್ಟು ಹಿಂಸಾಚಾರಗಳು ನಡೆಯುತ್ತಿವೆ. ಹಿಂದುಗಳು ವಿನಾಕಾರಣ ಟಾರ್ಗೆಟ್ ಆಗುತ್ತಿದ್ದಾರೆ. ಅಲ್ಲಿ ವಾಸಿಸುವ ಹಿಂದೂಗಳು ಯಾವುದೇ ಕಾರಣವಿಲ್ಲದೆ ಹಿಂಸಾಚಾರದ ಪರಿಣಾಮ ಎದುರಿಸುತ್ತಿದ್ದಾರೆ ಎಂದು ಭಾಗವತ್ ಹೇಳಿದ್ದಾರೆ.
ಭಾರತವು ಇತರರಿಗೆ ಸಹಾಯ ಮಾಡುವ ಸಂಪ್ರದಾಯವನ್ನು ಹೊಂದಿದೆ. ಕಳೆದ ಕೆಲವು ವರ್ಷಗಳಲ್ಲಿ ಭಾರತವು ಯಾರ ಮೇಲೂ ದಾಳಿ ಮಾಡಿಲ್ಲ. ಆದರೆ ತೊಂದರೆಯಲ್ಲಿರುವವರಿಗೆ ಅವರು ನಮ್ಮೊಂದಿಗೆ ಹೇಗೆ ವರ್ತಿಸುತ್ತಾರೆ ಎಂಬುದನ್ನು ಲೆಕ್ಕಿಸದೆ ಸಹಾಯ ಮಾಡಿದೆ ಎಂದು ಭಾಗವತ್ ನೆನಪಿಸಿದರು.
Rashtriya Swayamsewak Sangh (RSS) chief Mohan Bhagwat on Thursday (August 15) said that Hindus are being subjected to violence for no reason in Bangladesh and added that that India has the responsibility to ensure they do not face any atrocities.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm