ಬ್ರೇಕಿಂಗ್ ನ್ಯೂಸ್
23-08-24 09:29 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್.23: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್ ಅನುಮತಿ ನೀಡಿದ ಬಳಿಕದ ಬೆಳವಣಿಗೆ, ಮುಖ್ಯಮಂತ್ರಿ ರಾಜಿನಾಮೆಗೆ ವಿಪಕ್ಷಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ದೆಹಲಿಗೆ ಕರೆಸಿಕೊಂಡು ಪಕ್ಷದ ಹೈಕಮಾಂಡ್ ನಾಯಕರು ಸುದೀರ್ಘ ಚರ್ಚೆ ನಡೆಸಿದ್ದಾರೆ. ಸಭೆಯಲ್ಲಿ ಹೈಕಮಾಂಡ್ ನಾಯಕರು ಸಿಎಂ ಸಿದ್ದರಾಮಯ್ಯ ಅವರಿಗೆ ಬೆಂಬಲ ಸೂಚಿಸಿದ್ದಾರೆ. ಅಲ್ಲದೆ, ಎಲ್ಲ ರೀತಿಯ ಹೋರಾಟ ನಡೆಸುವುದಕ್ಕೂ ಅನುಮತಿ ನೀಡಿದ್ದಾರೆ.
ಸಭೆಯ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಮುಖ್ಯಮಂತ್ರಿ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆಯೇ ಅಸಾಂವಿಧಾನಿಕ. ನಾವು ಕೋರ್ಟ್ ಮತ್ತು ಕಾನೂನು ಮೇಲೆ ಗೌರವ ಇಟ್ಟಿದ್ದೇವೆ, ಸಂವಿಧಾನದ ಮೇಲೆ ನಂಬಿಕೆ ಇರಿಸಿದ್ದೇವೆ. ಸರಕಾರ ಅಸ್ಥಿರಗೊಳಿಸುವ ಪ್ರಯತ್ನವನ್ನು ನಾವು ಒಗ್ಗಟ್ಟಿನಿಂದ ಎದುರಿಸುತ್ತೇವೆ ಎಂದು ಹೇಳಿದ್ದಾರೆ. ಈ ಬಗ್ಗೆ ರಾಷ್ಟ್ರಪತಿ ಭೇಟಿ ಮಾಡುತ್ತೀರಾ ಎಂಬ ಪ್ರಶ್ನೆಗೆ, ನಾವು ಎಲ್ಲದಕ್ಕೂ ಸಿದ್ಧರಿದ್ದೇವೆ, ಕಾದು ನೋಡುತ್ತಿದ್ದೇವೆ ಎಂದರು.

ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ, ಮೊದಲಾಗಿ ನಮ್ಮ ಪರವಾಗಿ ನಿಂತ ಪಕ್ಷದ ಹೈಕಮಾಂಡ್ ನಾಯಕರಿಗೆ ಅಭಿನಂದನೆ ಹೇಳುತ್ತೇನೆ. ರಾಜ್ಯದಲ್ಲಾದ ಎಲ್ಲ ಬೆಳವಣಿಗೆ ಬಗ್ಗೆಯೂ ಪಕ್ಷದ ನಾಯಕರಿಗೆ ವಿವರಣೆ ನೀಡಿದ್ದೇವೆ. ನಮ್ಮ ಬಗ್ಗೆ ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಾವು ಈ ನೆಲದ ಕಾನೂನು, ಕೋರ್ಟ್ ಬಗ್ಗೆ ನಂಬಿಕೆ ಇರಿಸಿದ್ದೇವೆ. ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸುರ್ಜೇವಾಲಾ, ವೇಣುಗೋಪಾಲ್ ಅವರಿಗೆ ಥ್ಯಾಂಕ್ಸ್ ಹೇಳುತ್ತೇನೆ ಎಂದು ಹೇಳಿದರು.
ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿ, ಪಕ್ಷದ ನಾಯಕರ ಜೊತೆಗೆ ಸಭೆಯನ್ನು ನಡೆಸಿದ್ದೇವೆ. ಸರ್ಕಾರವನ್ನು ಅಭದ್ರಗೊಳಿಸಲು ಪ್ರಯತ್ನದ ಬಗ್ಗೆ ಮನದಟ್ಟು ಮಾಡಿದ್ದೇವೆ. ಬಡವರಿಗೋಸ್ಕರ ಐದು ಗ್ಯಾರಂಟಿಗಳನ್ನು ಕೊಡುತ್ತಿದ್ದು ಇಡೀ ದೇಶದ ಗಮನ ಸೆಳೆದಿದೆ. ಇದಕ್ಕಾಗಿ ಸರ್ಕಾರವನ್ನು ಅಸ್ಥಿರಗೊಳಿಸಲು ನೋಡುತ್ತಿದ್ದಾರೆ. ಹೈಕಮಾಂಡ್ ನಾಯಕರು ಒಗ್ಗಟ್ಟಿನಿಂದ ನಿಮ್ಮ ಜೊತೆಗಿದ್ದೇವೆ ಎಂದು ಅಭಯ ನೀಡಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಜೊತೆಗೆ ಪಕ್ಷ ಇದೆಯೆಂದು ಹೇಳಿದ್ದಾರೆ ಎಂದು ತಿಳಿಸಿದ್ದಾರೆ.
ರಾಜ್ಯಪಾಲರು ಪ್ರಾಸಿಕ್ಯೂಶನ್ ಅನುಮತಿ ನೀಡಿರುವುದರಿಂದ ಲೋಕಾಯುಕ್ತ ಅಥವಾ ಇನ್ನಾವುದೇ ತನಿಖಾ ಸಂಸ್ಥೆ ಎಫ್ಐಆರ್ ದಾಖಲು ಮಾಡಿದರೆ, ಹುದ್ದೆ ಬಿಟ್ಟು ಕೊಡಬೇಕಾದೀತು ಎನ್ನುವ ಚರ್ಚೆಯ ನಡುವಲ್ಲೇ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಜೊತೆಗೆ ದೆಹಲಿಗೆ ತೆರಳಿ ಪಕ್ಷದ ನಾಯಕರ ಸಹಮತವನ್ನು ಪಡೆದಿದ್ದಾರೆ. ಸದ್ಯಕ್ಕೆ ಆಗಸ್ಟ್ 29ರ ವರೆಗೆ ಯಾವುದೇ ಕ್ರಮ ಜರುಗಿಸುವಂತಿಲ್ಲ ಎಂದು ಹೈಕೋರ್ಟ್ ಹೇಳಿದ್ದರೂ, ಕೋರ್ಟಿನಲ್ಲಿ ಪ್ರಾಸಿಕ್ಯೂಶನ್ ಬಗ್ಗೆ ಅನುಮತಿ ನೀಡಿದರೂ ಮುಖ್ಯಮಂತ್ರಿ ಹುದ್ದೆಗೆ ಯಾವುದೇ ತೊಂದರೆ ಮಾಡಿಕೊಳ್ಳಬೇಕಿಲ್ಲ ಎನ್ನುವ ಸಂದೇಶವನ್ನು ಸಿದ್ದರಾಮಯ್ಯ ಅವರಿಗೆ ದೆಹಲಿ ಹೈಕಮಾಂಡ್ ನೀಡಿರುವಂತಿದೆ.
Karnataka Chief Minister Siddaramaiah and Deputy Chief Minister D K Shivakumar arrived in the national capital on Friday (August 23, 2024) for crucial meetings with top Congress leaders.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm