ಬ್ರೇಕಿಂಗ್ ನ್ಯೂಸ್
25-08-24 04:00 pm HK News Desk ದೇಶ - ವಿದೇಶ
ಕೊಚ್ಚಿ, ಆಗಸ್ಟ್.25: ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತಗಳು ಮಾನವನ ಅಸಡ್ಡೆ ಮತ್ತು ದುರಾಸೆಗೆ ಪ್ರಕೃತಿ ಪ್ರತಿಕ್ರಿಯಿಸಿರುವ ಇನ್ನೊಂದು ನಿದರ್ಶನವಾಗಿದೆ ಎಂದು ಕೇರಳ ಹೈಕೋರ್ಟ್ ಹೇಳಿದೆ.
ಬಹಳ ಹಿಂದೆಯೇ ಎಚ್ಚರಿಕೆಯ ಸಂಕೇತಗಳು ಕಾಣಿಸಿಕೊಂಡಿದ್ದವು, ಆದರೆ ರಾಜ್ಯವನ್ನು ಆರ್ಥಿಕ ಸಮೃದ್ಧಿಯ ಪಥದಲ್ಲಿ ಇರಿಸಲಿದೆ ಎಂದು ಭಾವಿಸಿದ್ದ ಅಭಿವೃದ್ಧಿಯ ಅಜೆಂಡಾದ ಅನ್ವೇಷಣೆಯ ಹಿಂದೆ ಬಿದ್ದಿದ್ದ ನಾವು ಅವುಗಳನ್ನು ನಿರ್ಲಕ್ಷಿಸಿದ್ದೆವು ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ.
2018 ಮತ್ತು 2019ರ ಪ್ರಕೃತಿ ವಿಕೋಪಗಳು ಹಾಗೂ ಸುಮಾರು ಎರಡು ವರ್ಷಗಳ ವರೆಗೆ ಕಾಡಿದ್ದ ಕೋವಿಡ್ ಸಾಂಕ್ರಾಮಿಕ ಮತ್ತು ಇತ್ತೀಚಿನ ಭೂಕುಸಿತಗಳು ನಾವು ತಪ್ಪು ಮಾರ್ಗದಲ್ಲಿ ಸಾಗುತ್ತಿದ್ದೇವೆ ಎನ್ನುವುದನ್ನು ತೋರಿಸಿವೆ ಎಂದು ನ್ಯಾಯಾಧೀಶರು ಹೇಳಿದ್ದಾರೆ. ಜು.30ರ ವಯನಾಡ್ ಭೂಕುಸಿತ ಕೋರ್ಟ್ ಬಳಿಕ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಯ ವಿಚಾರಣೆ ಸಂದರ್ಭದಲ್ಲಿ ನ್ಯಾಯಮೂರ್ತಿಗಳಾದ ಎ.ಕೆ.ಜಯಶಂಕರನ್ ನಂಬಿಯಾರ್ ಮತ್ತು ಶ್ಯಾಮಕುಮಾರ ವಿ.ಎಂ. ಅವರಿದ್ದ ಪೀಠವು, ‘ನಾವು ಈಗಲೂ ನಮ್ಮ ತಪ್ಪುಗಳನ್ನು ತಿದ್ದಿಕೊಳ್ಳದಿದ್ದರೆ ಮತ್ತು ದೃಢವಾದ ಪರಿಹಾರ ಕ್ರಮವನ್ನು ತೆಗೆದುಕೊಳ್ಳದಿದ್ದರೆ ಮತ್ತಷ್ಟು ಅನಾಹುತಕ್ಕೆ ಕಾರಣವಾಗಬಹುದು ಎಂದು ಬೊಟ್ಟು ಮಾಡಿದ್ದಾರೆ.
ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಭೂಕುಸಿತಗಳು ಮೂರು ಗ್ರಾಮಗಳನ್ನು ಸಂಪೂರ್ಣವಾಗಿ ನಿರ್ನಾಮಗೊಳಿಸಿವೆ. 300ಕ್ಕೂ ಅಧಿಕ ಜೀವಗಳು ಬಲಿಯಾಗಿದ್ದು, 119 ಜನರು ಈಗಲೂ ನಾಪತ್ತೆಯಾಗಿದ್ದಾರೆ.
ರಾಜ್ಯದಲ್ಲಿ ಸುಸ್ಥಿರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರದ ಕಲ್ಪನೆಗಳ ಕುರಿತು ಆತ್ಮಾವಲೋಕನ ಮಾಡಿಕೊಳ್ಳುವಂತೆ ಮತ್ತು ಇದಕ್ಕೆ ಸಂಬಂಧಿಸಿದಂತೆ ನೀತಿಯನ್ನು ಪುನರ್ಪರಿಶೀಲನೆ ಮಾಡುವಂತೆ ರಾಜ್ಯ ಸರಕಾರದ ಮನವೊಲಿಸಲು ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಆರಂಭಿಸಿರುವುದಾಗಿ ಉಚ್ಚ ನ್ಯಾಯಾಲಯವು ಆದೇಶದಲ್ಲಿ ತಿಳಿಸಿದೆ.
Kerala High Court remarked on Saturday that the recent landslides in Wayanad are yet another example of nature responding to human "apathy and greed." The court observed that "warning signs" had been evident for a long time, but "we chose to ignore them in pursuit of a development agenda that would supposedly put our state on the high road to economic prosperity."
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm