ಬ್ರೇಕಿಂಗ್ ನ್ಯೂಸ್
01-09-24 03:03 pm HK News Desk ದೇಶ - ವಿದೇಶ
ನವದೆಹಲಿ, ಸೆ.1: ಸಸ್ಯಾಹಾರಿ ಎಂದು ಮಾರಾಟವಾಗುವ ಪತಂಜಲಿ ಬ್ರ್ಯಾಂಡ್ನ ಹರ್ಬಲ್ ಟೂತ್ ಪೌಡರ್ ‘ದಿವ್ಯ ಮಂಜನ್’ನಲ್ಲಿ ಮಾಂಸಾಹಾರಿ ಅಂಶಗಳಿವೆ ಎಂದು ಆರೋಪಿಸಿ ದೆಹಲಿ ಹೈಕೋರ್ಟ್ಗೆ ದೂರು ಸಲ್ಲಿಸಲಾಗಿದೆ. ಪ್ರಕರಣದ ವಿಚಾರಣೆ ನಡೆಸಿರುವ ಹೈಕೋರ್ಟ್ ಪತಂಜಲಿ ಕಂಪನಿ ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ವಕೀಲ ಯತಿನ್ ಶರ್ಮಾ ಅವರು ಕೋರ್ಟಿಗೆ ಅರ್ಜಿ ಸಲ್ಲಿಸಿದ್ದು, ಪತಂಜಲಿಯ ದಿವ್ಯ ಮಂಜನ್ ಪ್ಯಾಕೇಜಿಂಗ್ ಸಸ್ಯಾಹಾರಿ ಉತ್ಪನ್ನಗಳನ್ನು ಸೂಚಿಸುವ ಹಸಿರು ಚುಕ್ಕೆಯನ್ನು ಹೊಂದಿದೆ. ಹೀಗಾಗಿ ನಾನು ದೀರ್ಘಕಾಲದಿಂದ ಬಳಸುತ್ತಿದ್ದೇನೆ. ಆದರೆ ಈ ಹಲ್ಲಿನ ಪುಡಿಯಲ್ಲಿ ಸೆಪಿಯಾ ಅಫಿಷಿನಾಲಿಸ್ ಅಥವಾ ಮೀನಿನ ಸಾರ ಇದೆ ಎಂದು ಸಂಶೋಧನೆಯೊಂದು ಹೇಳಿದೆ.

ದಿವ್ಯ ಮಂಜನ್’ನಲ್ಲಿ ಸಮುದ್ರ ಫೆನ್ ಪ್ರಾಣಿ ಆಧಾರಿತ ಉತ್ಪನ್ನವಾಗಿದೆ ಎಂದು ರಾಮ್ದೇವ್ ಸ್ವತಃ ಯೂಟ್ಯೂಬ್ ವೀಡಿಯೊದಲ್ಲಿ ಒಪ್ಪಿಕೊಂಡಿದ್ದಾರೆ. ಇದನ್ನು ತಪ್ಪಾಗಿ ಪ್ಯಾಕೇಜ್ ಮಾಡಿದ್ದು ಡ್ರಗ್ಸ್ ಮತ್ತು ಕಾಸ್ಮೆಟಿಕ್ಸ್ ಕಾಯ್ದೆಯ ಉಲ್ಲಂಘನೆಯಾಗಿದೆ. ಇದರಿಂದ ಗ್ರಾಹಕರ ಧಾರ್ಮಿಕ ನಂಬಿಕೆಗಳು ಹಾನಿಯಾಗಿದೆ. ಈ ಸಂಶೋಧನೆಯು ತನಗೆ ಮತ್ತು ಕುಟುಂಬಕ್ಕೆ ವಿಶೇಷವಾಗಿ ನೋವು ನೀಡಿದೆ ಎಂದು ಶರ್ಮಾ ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.
ದೆಹಲಿ ಪೊಲೀಸ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ, ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಷನ್ ಮತ್ತು ಆಯುಷ್ ಸಚಿವಾಲಯ ಸೇರಿದಂತೆ ವಿವಿಧ ಸರ್ಕಾರಿ ಏಜೆನ್ಸಿಗಳಿಗೆ ದೂರು ಸಲ್ಲಿಸಿದ್ದರೂ ಸಹ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದ್ದಾರೆ.
ಅರ್ಜಿಯನ್ನು ಕೈಗೆತ್ತಿಕೊಂಡ ದೆಹಲಿ ಹೈಕೋರ್ಟ್ ಪತಂಜಲಿ ಆಯುರ್ವೇದ, ಬಾಬಾ ರಾಮ್ದೇವ್, ಕೇಂದ್ರ ಸರ್ಕಾರ ಮತ್ತು ಉತ್ಪನ್ನವನ್ನು ತಯಾರಿಸುವ ಪತಂಜಲಿಯ ದಿವ್ಯ ಫಾರ್ಮಸಿಗೆ ನೋಟಿಸ್ ಜಾರಿ ಮಾಡಿದೆ. ಮುಂದಿನ ವಿಚಾರಣೆಯನ್ನು ನವೆಂಬರ್ 28ರಂದು ನಿಗದಿಪಡಿಸಲಾಗಿದೆ.
In fresh legal trouble for Yoga guru Baba Ramdev, a plea has been filed in the Delhi High Court against his Patanjali Ayurved, alleging that the brand's herbal tooth powder, ‘Divya Manjan’, which is marketed as vegetarian, contains non-vegetarian ingredients.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm