ಬ್ರೇಕಿಂಗ್ ನ್ಯೂಸ್
06-09-24 07:41 pm HK News Desk ದೇಶ - ವಿದೇಶ
ಪುಣೆ, ಸೆ.6: ನಾವು ದೇವರಾಗುತ್ತೇವೋ ಇಲ್ಲವೋ ಎನ್ನುವುದನ್ನು ಜನರು ನಿರ್ಧರಿಸುತ್ತಾರೆ. ನಾವಾಗಿಯೇ ದೇವರಾಗುತ್ತೇವೆ ಎನ್ನುವುದನ್ನು ಹೇಳಿಕೊಳ್ಳಬಾರದು ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್, ಪರೋಕ್ಷವಾಗಿ ಪ್ರಧಾನಿ ಮೋದಿ ಅವರ ನಡೆಗಳ ಬಗ್ಗೆ ಮತ್ತೆ ಕುಟುಕಿದ್ದಾರೆ.
ಆರೆಸ್ಸೆಸ್ ಕಾರ್ಯಕರ್ತರಾಗಿ ಮಣಿಪುರದಲ್ಲಿ ಸುದೀರ್ಘ ಕಾಲ ಸೇವೆಗೈದು ಹುತಾತ್ಮರಾಗಿದ್ದ ಶಂಕರ್ ದಿನ್ಕರ್ ಕಾಣೆ ಅವರ ಸ್ಮರಣಾರ್ಥ ಪುಣೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೋಹನ್ ಭಾಗವತ್ ಮಾತನಾಡಿದ್ದಾರೆ. ಶಂಕರ್ ದಿನ್ಕರ್ ಕಾಣೆ ಆರೆಸ್ಸೆಸ್ ವಲಯದಲ್ಲಿ ಭಯ್ಯಾಜಿ ಎಂದೇ ಹೆಸರಾಗಿದ್ದರು.
ಕೆಲವು ಜನರು ಮೌನದಲ್ಲಿರುವುದಕ್ಕಿಂತ ಹೆಚ್ಚಾಗಿ ತಾವು ಮಿಂಚಿನಂತೆ ಹೊಳೆಯುತ್ತಿರಬೇಕು ಎಂದು ಆಲೋಚಿಸುತ್ತಾರೆ. ಆದರೆ ನಿಜಕ್ಕಾದರೆ ಮಿಂಚು ಹರಿದ ಬಳಿಕ ಮೊದಲಿಗಿಂತ ಹೆಚ್ಚು ಕತ್ತಲು ಆವರಿಸುತ್ತದೆ. ನಮ್ಮ ಕಾರ್ಯಕರ್ತರು ಸಂದರ್ಭ ಬಂದಾಗ ತಮ್ಮನ್ನು ಸುಟ್ಟುಕೊಳ್ಳುವುದಕ್ಕೆ ತಯಾರಾಗಬೇಕು ಎಂದು ಭಾಗವತ್ ಹೇಳಿದ್ದಾರೆ. ಮಣಿಪುರದಲ್ಲಿ ಮಕ್ಕಳ ಶಿಕ್ಷಣಕ್ಕಾಗಿ 1971ರ ವರೆಗೆ ಶಂಕರ್ ದಿನ್ಕರ್ ಅಪಾರ ಕೆಲಸ ಮಾಡಿದ್ದರು. ಹಲವಾರು ಮಕ್ಕಳನ್ನು ಮಹಾರಾಷ್ಟ್ರಕ್ಕೂ ಕರೆತಂದು ಶಿಕ್ಷಣದ ವ್ಯವಸ್ಥೆ ಮಾಡಿದ್ದರು.
ಈಗಿನ ಮಣಿಪುರದ ಸ್ಥಿತಿಯನ್ನು ಉಲ್ಲೇಖಿಸಿದ ಭಾಗವತ್, ಅತ್ಯಂತ ಕಷ್ಟದ ದಿನಗಳನ್ನು ಮಣಿಪುರದ ಜನರು ಎದುರಿಸುತ್ತಿದ್ದಾರೆ. ಭದ್ರತೆಯ ಬಗ್ಗೆ ಜನರಿಗೆ ಖಾತರಿಯಿಲ್ಲ. ಸ್ಥಳೀಯರೇ ಆತಂಕದ ಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಉದ್ಯೋಗ, ಇನ್ನಿತರ ಉದ್ದೇಶಕ್ಕೆ ಹೊರಗಿನಿಂದ ಹೋದವರು ಇನ್ನಷ್ಟು ಸವಾಲಿನ ದಿನಗಳನ್ನು ಎದುರಿಸುತ್ತಿದ್ದಾರೆ. ಇಂತಹ ಸ್ಥಿತಿಯಲ್ಲೂ ಆರೆಸ್ಸೆಸ್ ಕಾರ್ಯಕರ್ತರು ಅಲ್ಲಿ ಸ್ವಯಂಸೇವಕರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಎನ್ ಜಿಓ ಎಲ್ಲವನ್ನೂ ಮಾಡಲು ಆಗುವುದಿಲ್ಲ. ಆರೆಸ್ಸೆಸ್ ಕಾರ್ಯಕರ್ತರು ಅಲ್ಲಿನ ಜನರ ನಂಬಿಕೆ ಉಳಿಸಿಕೊಂಡಿದೆ. ಸಂಘರ್ಷಕ್ಕಿಳಿದ ಎರಡೂ ಕಡೆಯ ಜನರಲ್ಲಿ ಮಾತುಕತೆ ನಡೆಸುತ್ತಿದ್ದು, ಶಾಂತಿಯತ್ತ ತರುತ್ತಿದೆ. ಹಿಂಸೆಯನ್ನು ಬಿಟ್ಟು ಅರ್ಧಕ್ಕೆ ಹಿಂತಿರುಗಿ ಬರಲು ಆಗುವುದಿಲ್ಲ. ಅಲ್ಲಿ ಶಾಂತಿ ಸ್ಥಾಪನೆಯೇ ಸಂಘದ ಧ್ಯೇಯ ಎಂದು ಭಾಗವತ್ ಹೇಳಿದ್ದಾರೆ.
Rashtriya Swayamsevak Sangh (RSS) chief Mohan Bhagwat, speaking at an event in Pune, said, "Whether we will become God or not, people will decide. We should not proclaim that we have become God." The RSS chief made the remarks at an event commemorating the work of Shankar Dinkar Kane, popularly known as Bhaiyyaji, in Manipur in 1971.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm