ಬ್ರೇಕಿಂಗ್ ನ್ಯೂಸ್
06-09-24 10:47 pm HK News Desk ದೇಶ - ವಿದೇಶ
ನವದೆಹಲಿ, ಸೆ.6: ಹರ್ಯಾಣ ಅಸೆಂಬ್ಲಿ ಚುನಾವಣೆಯಲ್ಲಿ ಕುಸ್ತಿ ಪಟುಗಳಾದ ವಿನೇಶ್ ಪೋಗಟ್ ಮತ್ತು ಬಜರಂಗ್ ಪೂನಿಯಾ ಕಣಕ್ಕಿಳಿಯೋದು ಪಕ್ಕಾ ಆಗಿದೆ. ಚುನಾವಣೆ ತಯಾರಿ ನಡುವಲ್ಲೇ ಕಳೆದ ಬಾರಿ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ಭೂಷಣ್ ಸಿಂಗ್ ವಿರುದ್ಧ ಬೀದಿಗಿಳಿದಿದ್ದ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟುಗಳಾದ ಬಜರಂಗ್ ಪೂನಿಯಾ ಹಾಗೂ ವಿನೇಶ್ ಫೋಗಟ್ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಿದ್ದಾರೆ.
ಇವರಿಬ್ಬರು ವಾರದ ಹಿಂದೆಯೇ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದರು. ಆಗಲೇ ಕಾಂಗ್ರೆಸ್ ಸೇರುವ ಬಗ್ಗೆ ಸುದ್ದಿ ಹರಡಿತ್ತು. ಅದೀಗ ನಿಜವಾಗಿದ್ದು, ಇಬ್ಬರೂ ಅಧಿಕೃತವಾಗಿ 'ಕೈ' ಪಕ್ಷದಲ್ಲಿ ಸೇರ್ಪಡೆಯಾಗಿದ್ದಾರೆ.
ಪಕ್ಷ ಸೇರ್ಪಡೆಯಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಜೊತೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿನೇಶ್ ಫೋಗಟ್, “ಕುಸ್ತಿ ವೃತ್ತಿಜೀವನದಲ್ಲಿ ನನ್ನನ್ನು ಬೆಂಬಲಿಸಿದ ದೇಶದ ಜನರಿಗೆ ಧನ್ಯವಾದ ಹೇಳುತ್ತೇನೆ. ನಾನು ಅವರ ನಿರೀಕ್ಷೆಗಳಿಗೆ ತಕ್ಕಂತೆ ಬದುಕುತ್ತೇನೆ ಎಂದು ಅಂದುಕೊಂಡಿದ್ದೇನೆ. ನಾನು ಕಾಂಗ್ರೆಸ್ಗೆ ಧನ್ಯವಾದ ಹೇಳಲು ಬಯಸುತ್ತೇನೆ. ಕಾರಣ ಕೆಟ್ಟ ಸಮಯದಲ್ಲಿ ಮಾತ್ರ ನಮ್ಮವರು ಯಾರು ಎಂದು ಗೊತ್ತಾಗುತ್ತದೆ. ನಮ್ಮನ್ನು ರಸ್ತೆಯಲ್ಲಿ ಎಳೆದಾಡಿದಾಗ, ಬಿಜೆಪಿ ಹೊರತುಪಡಿಸಿ ಉಳಿದೆಲ್ಲ ಪಕ್ಷಗಳು ನಮ್ಮೊಂದಿಗೆ ನಿಂತಿದ್ದವು. ನಮ್ಮ ನೋವು, ಕಣ್ಣೀರನ್ನು ಅರ್ಥ ಮಾಡಿಕೊಂಡಿದ್ದವು ಎಂದು ಹೇಳಿದ್ದಾರೆ.
ಮಹಿಳೆಯರ ಮೇಲಿನ ದುರ್ನಡತೆ, ಅನ್ಯಾಯದ ವಿರುದ್ಧ ನಿಲ್ಲುವ ಪಕ್ಷದೊಂದಿಗೆ ಗುರುತಿಸಿಕೊಳ್ಳಲು ನಾನು ಹೆಮ್ಮೆ ಪಡುತ್ತೇನೆ. ಕುಸ್ತಿಯಲ್ಲಿ ನಾವು ತೋರಿದ ಅದೇ ಬದ್ಧತೆಯಿಂದ ದೇಶದ ಜನರಿಗಾಗಿ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡುತ್ತೇನೆ ಎಂದಿದ್ದಾರೆ.
ಒಲಿಂಪಿಕ್ ಪದಕ ವಿಜೇತ ಕುಸ್ತಿ ಪಟು ಬಜರಂಗ್ ಪೂನಿಯಾ ಮಾತನಾಡಿ, ನಾವು ದೇಶದ ಜನರಿಗಾಗಿ ಕೆಲಸ ಮಾಡಲಿದ್ದೇವೆ, ಕಾಂಗ್ರೆಸ್ ಪಕ್ಷವನ್ನು ಮತ್ತು ಭಾರತವನ್ನು ಮತ್ತಷ್ಟು ಬಲಪಡಿಸುತ್ತೇವೆ. ವಿನೇಶ್ ಫೋಗಟ್ ಫೈನಲ್ ತಲುಪಿದಾಗ ಎಲ್ಲರೂ ಸಂತೋಷಪಟ್ಟಿದ್ದರು. ಆದರೆ ಆಕೆಯನ್ನು ಅನರ್ಹಗೊಳಿಸಿದಾಗ ಕೆಲವರು ಮಾತ್ರ ಸಂಭ್ರಮಿಸಿದರು ಎಂದು ಟಾಂಗ್ ನೀಡಿದ್ದಾರೆ. ಕಾಂಗ್ರೆಸ್ ಸೇರಿದ ಬೆನ್ನಲ್ಲೇ ವಿನೇಶ್ ಪೋಗಟ್ ತನ್ನ ರೈಲ್ವೇ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಕುಸ್ತಿ ಪಟುಗಳು ಕಾಂಗ್ರೆಸ್ ಪಕ್ಷ ಸೇರಿರುವುದರಿಂದ ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಹೆಚ್ಚಿನ ಅನುಕೂಲವಾಗಲಿದೆ ಎನ್ನಲಾಗುತ್ತಿದೆ. ಹರ್ಯಾಣದಲ್ಲಿ ಅಕ್ಟೋಬರ್ 5ಕ್ಕೆ ಚುನಾವಣೆ ನಡೆಯಲಿದ್ದು, ಅಕ್ಟೋಬರ್ 8ರಂದು ಚುನಾವಣೆ ಫಲಿತಾಂಶ ಹೊರಬೀಳಲಿದೆ.
Olympian wrestlers Vinesh Phogat and Bajrang Punia are set to jojn the Indian National Congress on Saturday, ahead of the Haryana assembly election.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm