ಬ್ರೇಕಿಂಗ್ ನ್ಯೂಸ್
08-09-24 02:45 pm HK News Desk ದೇಶ - ವಿದೇಶ
ಕೊಲ್ಕತ್ತಾ, ಸೆ.8: ಕೊಲ್ಕತ್ತಾ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಘಟನೆಯನ್ನು ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರ ನಿರ್ವಹಿಸಿದ ರೀತಿಯನ್ನು ಖಂಡಿಸಿ ಟಿಎಂಸಿ ರಾಜ್ಯಸಭಾ ಸದಸ್ಯ ಜವಾಹರ್ ಸಿರ್ಕಾರ್ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಮಾಜಿ ಅಧಿಕಾರಿಯಾಗಿರುವ ಸಿರ್ಕಾರ್, 2021ರಲ್ಲಿ ಟಿಎಂಸಿ ಸೇರಿ ರಾಜ್ಯಭೆ ಸದಸ್ಯರಾಗಿದ್ದರು. ಅದಕ್ಕೂ ಹಿಂದೆ 2009ರಿಂದ 2012ರ ವರೆಗೆ ಕೇಂದ್ರ ಸರಕಾರದ ಸಾಂಸ್ಕೃತಿಕ ಕಾರ್ಯದರ್ಶಿಯಾಗಿದ್ದ ಸಿರ್ಕಾರ್, 2016ರಲ್ಲಿ ಪ್ರಸಾರ ಭಾರತಿ ಸಿಇಓ ಆಗಿದ್ದರು. ಸಿಇಓ ಸ್ಥಾನದ ಅವಧಿ ಮುಗಿಯಲು ನಾಲ್ಕು ತಿಂಗಳು ಇರುವಾಗಲೇ ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ಬಗ್ಗೆ ಮುನಿಸಿಕೊಂಡು ರಾಜಿನಾಮೆ ನೀಡಿದ್ದರು. ಇದೀಗ ಟಿಎಂಸಿ ಸದಸ್ಯತ್ವಕ್ಕೂ ರಾಜಿನಾಮೆ ನೀಡಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ ಸಿರ್ಕಾರ್ ಪತ್ರ ಬರೆದಿದ್ದಾರೆ.
ಇದೇ ವೇಳೆ, ಕೊಲ್ಕತ್ತಾ ಆರ್.ಕಾರ್ ವೈದ್ಯಕೀಯ ಆಸ್ಪತ್ರೆ ಎದುರು ಹಗಲು – ರಾತ್ರಿ ಪ್ರತಿಭಟನೆ ಮುಂದುವರಿದಿದ್ದು, ಕಲಾವಿದರು, ನಟ-ನಟಿಯರು, ಸಂಗೀತಕಾರರು, ಪೈಂಟರ್ ಬೇರೆ ಬೇರೆ ವೃತ್ತಿಯವರು ಕೂಡ ಪ್ರತಿಭಟನೆಗೆ ಕೈಜೋಡಿಸಿದ್ದಾರೆ. ಎರಡು ದಿನಗಳ ಹಿಂದೆ ಆರ್.ಕಾರ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಸಂದೀಪ್ ಘೋಷ್ ನನ್ನು ಸಿಬಿಐ ಬಂಧಿಸಿದ್ದು, ಪ್ರಕರಣ ಸಂಬಂಧಿಸಿ ಹಲವರನ್ನು ವಶಕ್ಕೆ ಪಡೆದಿದೆ. ಆದರೂ ಕೊಲ್ಕತ್ತಾದಲ್ಲಿ ರಾತ್ರಿ ಹಗಲು ಪ್ರತಿಭಟನೆ ನಡೆಯುತ್ತಿದ್ದು, ದಿನದಿಂದ ದಿನಕ್ಕೆ ಪ್ರತಿಭಟನೆಯ ಕಾವು ಹೆಚ್ಚುತ್ತಿರುವುದು ಪಶ್ಚಿಮ ಬಂಗಾಳ ಸರಕಾರಕ್ಕೆ ಸವಾಲಾಗಿದೆ. ಕೊಲ್ಕತ್ತಾ ಘಟನೆ ಹಿನ್ನೆಲೆಯಲ್ಲಿ ಟಿಎಂಸಿ ಸರಕಾರ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಮಸೂದೆಯನ್ನೂ ಅಧಿವೇಶನದಲ್ಲಿ ಮಂಡಿಸಿದ್ದು ದೇಶದ ಗಮನ ಸೆಳೆದಿದೆ.
ಆಗಸ್ಟ್ 9ರಂದು ವೈದ್ಯಕೀಯ ಎಂಡಿ ವಿದ್ಯಾರ್ಥಿನಿಯನ್ನು ಆರ್.ಜಿ ಕಾರ್ ಆಸ್ಪತ್ರೆಯಲ್ಲಿ ಕ್ರೂರವಾಗಿ ಅತ್ಯಾಚಾರಗೈದು ಕೊಲೆ ಮಾಡಲಾಗಿತ್ತು. ಕೃತ್ಯದ ಹಿನ್ನೆಲೆಯಲ್ಲಿ ದೇಶಾದ್ಯಂತ ವೈದ್ಯರ ಆಕ್ರೋಶ ವ್ಯಕ್ತವಾಗಿತ್ತು.
Trinamool Congress Rajya Sabha MP Jawhar Sircar on Sunday (September 8, 2024) wrote to Trinamool Congress chairperson and West Bengal CM Mamata Banerjee announcing his decision to resign as MP from the Upper House over the rape and murder of a post-graduate trainee doctor at R.G. Kar Medical College and Hospital and related corruption at the hospital.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm