ಬ್ರೇಕಿಂಗ್ ನ್ಯೂಸ್
18-09-24 02:46 pm HK News Desk ದೇಶ - ವಿದೇಶ
ನವದೆಹಲಿ, ಸೆ.18: ರಸ್ತೆ ನಿರ್ಮಾಣಕ್ಕಾದ ವೆಚ್ಚಕ್ಕಿಂತ ಹೆಚ್ಚಿನ ಮೊತ್ತವನ್ನು ಟೋಲ್ ನೆಪದಲ್ಲಿ ಸಂಗ್ರಹಿಸುವ ವಿಚಾರದಲ್ಲಿ ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಸ್ಪಷ್ಟನೆ ನೀಡಿದ್ದಾರೆ. ರಸ್ತೆ ನಿರ್ಮಿಸಲು 1,900 ಕೋಟಿ ರೂ. ಖರ್ಚು ಮಾಡಿದ್ದರೆ, 8,000 ಕೋಟಿ ರೂಪಾಯಿ ಟೋಲ್ ಏಕೆ ಸಂಗ್ರಹಿಸಲಾಯಿತು? ಎಂಬ ಪ್ರಶ್ನೆಗೆ ಮಾರ್ಮಿಕ ಉತ್ತರ ನೀಡಿದ್ದಾರೆ.
ಟೋಲ್ ಸಂಗ್ರಹ ಎನ್ನುವುದು ಒಂದು ದಿನದಲ್ಲಿ ನಡೆಯುವುದಿಲ್ಲ. ಲೋನ್ ಮಾಡಿ ಕಂಪನಿಗಳು ರಸ್ತೆ ಮಾಡುತ್ತವೆ. ಆನಂತರ, ಟೋಲ್ ಮೂಲಕ ಮರು ಪಾವತಿ ಮಾಡುತ್ತವೆ. ಇದು ಸಾಲ ಮಾಡಿ ಕಾರು ಅಥವಾ ಮನೆ ಖರೀದಿ ಮಾಡಿದಂತೆ. ಪೂರ್ಣ ಮೊತ್ತ ನೀಡಿ ಕಾರು ಖರೀದಿಸಲು 2.5 ಲಕ್ಷ ರೂ. ಆಗಿದ್ದರೆ, ನೀವು ಸಾಲ ಪಡೆದು 10 ವರ್ಷಗಳ ವರೆಗೆ ತೀರಿಸುತ್ತ ಬಂದರೆ ಅದರ ಮೌಲ್ಯ 5ರಿಂದ 6 ಲಕ್ಷ ರೂ. ಆಗುತ್ತದೆ. ಪ್ರತಿ ತಿಂಗಳು ಬಡ್ಡಿ ಕಟ್ಟುವುದರಿಂದ ಇದರ ಒಟ್ಟು ಮೊತ್ತ ಹೆಚ್ಚಳವಾಗುತ್ತದೆ ಎಂದು ಹೇಳಿದರು.
ದೆಹಲಿ -ಜೈಪುರ ಹೆದ್ದಾರಿ NH-8 ರಲ್ಲಿ ಎಂಟು ಸಾವಿರ ಕೋಟಿ ಟೋಲ್ ವಸೂಲಿ ಮಾಡಲಾಗಿದೆ ಎಂಬ ಆರ್ಟಿಐ ವರದಿ ಬಗ್ಗೆ ಕೇಳಿದ ಪ್ರಶ್ನೆಗೆ, ಈ ರಸ್ತೆಯನ್ನು 2009ರಲ್ಲಿ ಯುಪಿಎ ಸರ್ಕಾರ ಮಂಜೂರು ಮಾಡಿತ್ತು. 9 ಬ್ಯಾಂಕ್ಗಳಿಂದ ಸಾಲದ ಮೂಲಕ ಹೂಡಿಕೆ ಆಗಿತ್ತು. ರಸ್ತೆ ನಿರ್ಮಾಣಕ್ಕೆ ಹಲವು ಸಮಸ್ಯೆಗಳಿದ್ದವು. ಬ್ಯಾಂಕ್ಗಳು ಹಣ ಪಾವತಿಗಾಗಿ ನ್ಯಾಯಾಲಯದಲ್ಲಿ ಕೇಸು ಹಾಕಿದ್ದವು. ಇದರಿಂದ ತೊಡಕಾಗಿತ್ತು ಎಂದು ವಿವರಿಸಿದರು.
ಆರ್ಟಿಐಗೆ ಪ್ರತಿಕ್ರಿಯೆಯಾಗಿ, ರಾಜಸ್ಥಾನದಲ್ಲಿ ಟೋಲ್ ಸಂಗ್ರಹದ ಮೂಲಕ ಸುಮಾರು 8 ಸಾವಿರ ಕೋಟಿ ರೂಪಾಯಿ ಸಂಗ್ರಹಿಸಲಾಗಿದೆ ಎಂದು ತಿಳಿದುಬಂದಿದೆ. ಆದರೆ ಈ ಹೆದ್ದಾರಿಯ ನಿರ್ಮಾಣಕ್ಕೆ ಸುಮಾರು 1,900 ಕೋಟಿ ರೂಪಾಯಿ ಮಾತ್ರ ವೆಚ್ಚವಾಗಿದೆ. ಇದು ದೆಹಲಿ-ಜೈಪುರ ಹೆದ್ದಾರಿಯಲ್ಲಿರುವ ಮನೋಹರಪುರ ಟೋಲ್ ಪ್ಲಾಜಾಗೆ ಸಂಬಂಧಿಸಿದೆ ಎಂದು ತಿಳಿಸಿದ್ದಾರೆ.
Union Road and Transport Minister Nitin Gadkari responded to complaints of excessive toll collection on Monday at News18 Chaupal with an interesting example. Asked why Rs 8,000 crore is being collected as toll tax when the cost of road construction was only Rs 1,900 crore, the Union Minister said that toll taxes are not collected in a day and there are several expenses that need to be borne by the government both before toll collection and after it.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 02:10 pm
Mangalore Correspondent
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm